ಆಗುಂಬೆ: ಇಂದಿನಿಂದ ಬಸ್ ಸಂಚಾರ
Team Udayavani, Jun 30, 2018, 9:13 AM IST
ಹೆಬ್ರಿ: ಭೂಕುಸಿತವಾಗಿ ರಸ್ತೆ ಸಂಚಾರ ಸ್ಥಗಿತವಾಗಿದ್ದ ಆಗುಂಬೆ ಘಾಟಿ ರಸ್ತೆಯಲ್ಲಿ ತಾತ್ಕಾಲಿಕ ದುರಸ್ತಿ ನಡೆಸಲಾಗಿದ್ದು, ಶನಿವಾರದಿಂದ ಬಸ್ಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಅವಕಾಶ ಕಲ್ಪಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಗುರುವಾರ ಕುಸಿತ ಸಂಭವಿಸಿದ್ದು, ಬಸ್, ಟೆಂಪೋ ಇತ್ಯಾದಿ ಘನ ವಾಹನಗಳ ಸಂಚಾರವನ್ನು ತಡೆಯಲಾಗಿತ್ತು.
ಕುಸಿತ ಸಂಭವಿಸಿದ ಸ್ಥಳದಲ್ಲಿ ಮರಳು ಚೀಲಗಳನ್ನು ಇರಿಸಿ ಇನ್ನಷ್ಟು ಕುಸಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಬ್ರಿ ಠಾಣಾಧಿಕಾರಿ ಮಹಾಬಲ ಶೆಟ್ಟಿ ಹಾಗೂ ಆಗುಂಬೆ ಠಾಣಾಧಿಕಾರಿ ಭಾರತಿ ಸಹಿತ ಪೊಲೀಸ್ ತಂಡ ವಿಶೇಷ ಭದ್ರತೆ ಒದಗಿಸಿದೆೆ. ಶಿವಮೊಗ್ಗ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶನಿವಾರದಿಂದ ಎರಡೂ ಕಡೆಗಳಿಂದ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಘನವಾಹನಗಳಿಗೆ ಸಂಚಾರ ನಿರ್ಬಂಧವಿರಲಿದೆ ಎಂದು ಉಡುಪಿ ಡಿಸಿ ಹೇಳಿದ್ದಾರೆ.
ಬದಲಿ ಮಾರ್ಗ
ಆಗುಂಬೆ ಘಾಟಿ ಬಸ್ ಸಂಚಾರ ಸ್ಥಗಿತಗೊಂಡ ಕಾರಣ ಉಡುಪಿ ಯಿಂದ ಶಿವಮೊಗ್ಗ, ಚಿಕ್ಕಮಗಳೂರು ಕಡೆಗೆ ಹೋಗುವ ಬಸ್ಗಳು ಬಾಳೆಬರೆ ಘಾಟಿ, ಹಾಗೂ ಬಜ ಗೋಳಿ ಮೂಲಕ ಕೆರೆಕೆಟ್ಟೆ ಘಾಟಿ ಮಾರ್ಗದಲ್ಲಿ ಸಂಚರಿಸಿದವು.
ಸಂಸದೆ ಸೂಚನೆ
ಆಗುಂಬೆ ಘಾಟಿಯ ಭೂಕುಸಿತ ವನ್ನು ಶೀಘ್ರ ತೆರವು ಮಾಡಲು ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಸೂಚಿಸಿದ್ದಾರೆ.
ನಿತ್ಯ ಪ್ರಯಾಣಿಕರಿಗೆ ತೊಂದರೆ
ಮಲೆನಾಡು – ಕರಾವಳಿ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾದ ಆಗುಂಬೆ ಘಾಟಿ ರಸ್ತೆ ಕುಸಿದ ಕಾರಣ ಈ ಮಾರ್ಗದಲ್ಲಿ ಬಸ್ಗಳಲ್ಲಿ ನಿತ್ಯ ಸಂಚರಿಸುವ ಉದ್ಯೋಗಿಗಳಿಗೆ ಹಾಗೂ ತುರ್ತು ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ