ದೀಪಾವಳಿ ವೇಳೆ ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಕೆ

ದಶರಥನಗರದಲ್ಲಿ ಮಾಲಿನ್ಯ ಗುಣಮಟ್ಟದ ಮೌಲ್ಯಮಾಪನ ; ಎಕ್ಯೂಐ ಸೂಚ್ಯಂಕ 53ರಿಂದ 40ಕ್ಕೆ ಇಳಿಕೆ

Team Udayavani, Nov 25, 2020, 5:36 AM IST

ದೀಪಾವಳಿ ವೇಳೆ ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಕೆ

ಸಾಂದರ್ಭಿಕ ಚಿತ್ರ

ಉಡುಪಿ: ಹೆಚ್ಚಿದ ಪರಿಸರ ಜಾಗೃತಿ, ಪಟಾಕಿ ಬಳಕೆ ಕಡಿಮೆ ಕಾರಣದಿಂದಾಗಿ ಈ ಬಾರಿ ದೀಪಾವಳಿ ಸಂದರ್ಭ ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಕೆಯಾಗಿರುವುದು ಕಂಡು ಬಂದಿದೆ.

ಜಿಲ್ಲಾಡಳಿತದ ಸೂಚನೆಯಂತೆ ಉಡುಪಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕೇಂದ್ರವು ದೀಪಾವಳಿ ಹಬ್ಬದ ಪೂರ್ವ ಮತ್ತು ದೀಪಾವಳಿ ಅವಧಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಗೊತ್ತಾಗಿದೆ.

ಎಕ್ಯೂಐ 40ಕ್ಕೆ
ದೀಪಾವಳಿ ಪೂರ್ವದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಏರ್‌ ಕ್ವಾಲಿಟಿ ಇಂಡೆಕ್ಸ್‌) 53 ಇದ್ದರೆ, ದೀಪಾವಳಿ ಸಮಯದಲ್ಲಿ ಅದು 40ಕ್ಕೆ ಇಳಿಕೆಯಾಗಿದೆ. ಮಣಿಪಾಲದ ಜನವಸತಿ ಪ್ರದೇಶವಾದ ದಶರಥನಗರದಲ್ಲಿ ನ. 9ರಂದು ವಾಯು ಮಾಲಿನ್ಯ ಗುಣಮಟ್ಟದ ಮೌಲ್ಯಮಾಪನ ನಡೆಸಲಾಗಿತ್ತು.

ದೀಪಾವಳಿ ದಿನಗಳಲ್ಲಿ ಕಡಿಮೆ
ದೀಪಾವಳಿ ಮೊದಲು 24 ತಾಸುಗಳ ಕಾಲ ನಡೆಸಿದ ನಾಲ್ಕು ಮಾನದಂಡಗಳ ಮೌಲ್ಯಮಾಪನದ ವೇಳೆ ಗಾಳಿಯಲ್ಲಿ ಪಿಎಂ10 ಸೂಕ್ಷ್ಮ ಕಣಗಳು 53, ಪಿಎಂ 2.5 ಸೂಕ್ಷ್ಮ ಕಣಗಳು 34, ಎಸ್‌ಒ2 (ಗಂಧಕದ ಡೈಆಕ್ಸೈಡ್‌) ಸೂಕ್ಷ್ಮ ಕಣಗಳು 8 ಮತ್ತು ಎನ್‌ಒ2 (ಸಾರಜನಕ ಡೈಆಕ್ಸೈಡ್‌) ಸೂಕ್ಷ್ಮ ಕಣಗಳು 10 ಕಂಡು ಬಂದಿವೆ. ದೀಪಾವಳಿಯ ಮೂರು ದಿನ ಮಾಲಿನ್ಯವು ತೀರಾ ಕಡಿಮೆಯಾಗಿದೆ. ನ. 14ರಂದು ಪಿಎಂ10 ಸೂಕ್ಷ್ಮ ಕಣಗಳು 43, ಪಿಎಂ 2.5 ಸೂಕ್ಷ್ಮ ಕಣಗಳು 22, ಎಸ್‌ಒ2 ಸೂಕ್ಷ್ಮ ಕಣಗಳು 7 ಮತ್ತು ಎನ್‌ಒ2 ಸೂಕ್ಷ್ಮ ಕಣಗಳು 10, ನ. 15ರಂದು ಪಿಎಂ10 ಸೂಕ್ಷ್ಮ ಕಣಗಳು 51, ಪಿಎಂ 2.5 ಸೂಕ್ಷ್ಮ ಕಣಗಳು 22, ಎಸ್‌ಒ2 ಸೂಕ್ಷ್ಮ ಕಣಗಳು 7 ಮತ್ತು ಎನ್‌ಒ2 ಸೂಕ್ಷ್ಮ ಕಣಗಳು 10 ಹಾಗೂ ನ. 16ರಂದು ಪಿಎಂ10 ಸೂಕ್ಷ್ಮ ಕಣಗಳು 40, ಪಿಎಂ 2.5 ಸೂಕ್ಷ್ಮ ಕಣಗಳು 20, ಎಸ್‌ಒ2 ಸೂಕ್ಷ್ಮ ಕಣಗಳು 6 ಮತ್ತು ಎನ್‌ಒ2 ಸೂಕ್ಷ್ಮ ಕಣಗಳು 10 ಪ್ರಮಾಣದಲ್ಲಿ ಕಂಡು ಬಂದಿವೆ.

ಉಡುಪಿ ವಾತಾವರಣ ಉತ್ತಮ
ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಎಕ್ಯೂಐ 0-50 ಇದ್ದರೆ ಆ ವಾತಾವರಣ ಉತ್ತಮ ಎಂದು ಪರಿಗಣಿಸಲಾಗುತ್ತದೆ. ಹಾಗೆ ನೋಡುವುದಾದರೆ ಮಣಿಪಾಲ ದಂತಹ ನಗರದಲ್ಲಿ ಕೈಗಾರಿಕಾ ಪ್ರದೇಶ‌ ಸನಿಹವೇ ಎಕ್ಯೂಐ 50ಕ್ಕಿಂತ ಕಡಿಮೆ ದಾಖಲಾಗಿದೆ. ಆದ್ದರಿಂದ ಉಡುಪಿಯ ವಾತಾವರಣವು ಉತ್ತಮವಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ವಿಶ್ಲೇಷಿಸಿದ್ದಾರೆ.

ಶಬ್ದಮಾಲಿನ್ಯಕ್ಕೆ ಬಿದ್ದಿಲ್ಲ ಕಡಿವಾಣ
ದಶರಥನಗರದಲ್ಲಿಯೇ ಶಬ್ದಮಾಲಿನ್ಯ ಅಂದಾಜಿಸುವ ಕೇಂದ್ರ ಸ್ಥಾಪಿಸಲಾಗಿತ್ತು. ಇದು ನಾಲ್ಕು ದಿನಗಳಲ್ಲಿ ಸಂಜೆ 6ರಿಂದ ರಾತ್ರಿ 12 ಗಂಟೆಯವರೆಗೆ ಮೇಲ್ವಿಚಾರಣೆ ನಡೆಸಿತು. ಈ ಅವಧಿಯಲ್ಲಿ ನ. 9ರಂದು ಸರಾಸರಿ 55 ಡೆಸಿಬಲ್‌, 14ರಂದು 63.5 ಡೆಸಿಬಲ್‌, 15ರಂದು 64.8 ಡೆಸಿಬಲ್‌ ಮತ್ತು 16ರಂದು 65.4 ಡೆಸಿಬಲ್‌ ಶಬ್ದ ದಾಖಲಾಗಿದೆ. ಅಂದರೆ ಸಾಮಾನ್ಯ ದಿನಕ್ಕಿಂತ ದೀಪಾವಳಿ ಅವಧಿಯಲ್ಲಿ 10 ಡೆಸಿಬಲ್‌ ತೀವ್ರತೆ ಹೆಚ್ಚಾಗಿದೆ. ರಾತ್ರಿಯಾಗುತ್ತಿದ್ದಂತೆ ಶಬ್ದದ ತೀವ್ರತೆ ಹೆಚ್ಚಾಗಿರುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಗುರುತಿಸಿದೆ.

ಮೌಲ್ಯಮಾಪನ ಫಲಿತಾಂಶಕ್ಕೆ ಹಲವು ಕಾರಣ
ಜನವಸತಿ ಪ್ರದೇಶದಲ್ಲಿಯೇ ಮೌಲ್ಯಮಾಪನ ಮಾಡಿದ್ದೇವೆ. ಶಬ್ದ ಮಾಲಿನ್ಯದಲ್ಲಿ ಹೆಚ್ಚಳವಾಗಿದೆ. ಆದರೆ ವಾಯುಮಾಲಿನ್ಯದಲ್ಲಿ ಇಳಿಕೆ ಕಂಡಿದೆ. ಸಾಮಾನ್ಯ ದಿನಗಳಲ್ಲಿ ವಾಹನ ಓಡಾಟ, ಕೈಗಾರಿಕೆಯಿಂದ ವಾಯುಮಾಲಿನ್ಯ ಇದ್ದಿರಬಹುದು. ದೀಪಾವಳಿ ರಜಾ ಅವಧಿಯಲ್ಲಿ ಕೈಗಾರಿಕೆಗಳಿಗೆ ರಜೆ, ವಾಹನಗಳಲ್ಲಿ ಜನರ ಓಡಾಟ ಕಡಿಮೆಯಾಗಿರುವ ಸಾಧ್ಯತೆ ಇದೆ. ಉಡುಪಿಯ ವಾಯು ಗುಣಮಟ್ಟ ಉತ್ತಮವಾಗಿದೆ.
-ವಿಜಯ ಹೆಗಡೆ, ಪರಿಸರ ಅಧಿಕಾರಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.