ವಾಯು ಮಾಲಿನ್ಯ : ಭಾರತದ 5ನೇ ಅತಿ ದೊಡ್ಡ ಕೊಲೆಗಾರ

ವಿಶ್ವ ಪರಿಸರ ದಿನ

Team Udayavani, Jun 5, 2019, 6:10 AM IST

air-pollution

ಜಗತ್ತು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಲ್ಲಿ ವಾಯು ಮಾಲಿನ್ಯವೂ ಒಂದು. ವಿಶ್ವದಾದ್ಯಂತ ಸಂಭವಿಸುವ ಸಾವಿಗೆ ವಾಯು ಮಾಲಿನ್ಯವೂ ಪ್ರಮುಖ ಕಾರಣವಾಗಿದೆ ಎನ್ನುತ್ತದೆ ಸಂಶೋಧನೆ. ವಿಷಕಾರಿ ರಾಸಾಯನಿಕ ತುಂಬಿದ ಮಲಿನ ಗಾಳಿಯನ್ನು ಶ್ವಾಸಕೋಶದ ಒಳಗೆ ಎಳೆದುಕೊಂಡಾಗ ಅದು ಹಲವು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತದೆ.

ರಾಜಧಾನಿಯೂ ಹೊರತಲ್ಲ
2018ರಲ್ಲಿ ಸ್ವಿಸ್‌ ಮೂಲದ ಸಂಸ್ಥೆಯೊಂದು ನಡೆಸಿದ ಸಂಶೋಧನೆಯ ಪ್ರಕಾರ ಜಗತ್ತಿನ ಅತ್ಯಂತ ಹೆಚ್ಚು ವಾಯು ಮಾಲಿನ್ಯ ನಗರಗಳಲ್ಲಿ ಭಾರತದ ಗುರುಗ್ರಾಮ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಗಾಜಿಯಾಬಾದ್‌ ಇದ್ದರೆ ಪಾಕಿಸ್ಥಾನದ ಫೈಸಲಾಬಾದ್‌ ಮೂರನೇ ಸ್ಥಾನದಲ್ಲಿದೆ. ದಿಲ್ಲಿಗೆ ಈ ಪಟ್ಟಿಯಲ್ಲಿ 11ನೇ ಸ್ಥಾನ. ಆದರೆ, ಗರಿಷ್ಠ ಮಾಲಿನ್ಯವಾದ ರಾಜಧಾನಿ ಎಂಬ ಹಣೆಪಟ್ಟಿ ಕಳವಳಕಾರಿ.

ಆತಂಕಕಾರಿ ಬೆಳವಣಿಗೆ
ವಾಯು ಮಾಲಿನ್ಯ ಕಾರಣದಿಂದ ಪ್ರತಿ ವರ್ಷ ಜಗತ್ತಿನಾದ್ಯಂತ 7 ಮಿಲಿಯನ್‌ ಮಂದಿ ಸಾವನ್ನಪ್ಪುತ್ತಿದ್ದಾರೆ. ವಾಯು ಮಾಲಿನ್ಯ ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗುವುದು ಮಾತ್ರವಲ್ಲ ಹವಾಮಾನ ಬದಲಾವಣೆ, ನೀರಿನ ಸಹಜ ಗುಣದ ಮೇಲೆ ದುಷ್ಪರಿಣಾಮ ಮತ್ತು ಆಹಾರ ಉತ್ಪಾದನೆ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.

ಉಷ್ಣಾಂಶ ಹೆಚ್ಚಳ
ಉಷ್ಣಾಂಶ ಹೆಚ್ಚಳಕ್ಕೂ ವಾಯು ಮಾಲಿನ್ಯದ ಕೊಡುಗೆ ಅಪಾರ. ಇಂಧನದ ಉತ್ಪಾದನೆ ಮತ್ತು ಬಳಕೆ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣ. ಪಳೆಯುಳಿಕೆ ಇಂಧನ ಉರಿಸಿದಾಗ ಅದು ಗ್ಯಾಸ್‌ ಮತ್ತು ರಾಸಾಯನಿಕವನ್ನು ಬಿಡುಗಡೆಗೊಳಿಸುತ್ತದೆ. ಇದು ವಾತಾವರಣದ ಉಷ್ಣಾಂಶ ಹೆಚ್ಚಿಸುತ್ತದೆ ಎಂದು ಕಳವಳ ವ್ಯಕ್ತಪಡಿಸುತ್ತಾರೆ ಸಂಶೋಧಕರು. ಹಿಮಗಡ್ಡೆ ಕರಗಿ ಸಮುದ್ರದ ನೀರಿನ ಮಟ್ಟ ಏರಿಕೆಯಾಗಿ ಅಪಾಯ ಎರುರಾಗುವ ಸಾಧ್ಯತೆ ಇದೆ.

ದುಷ್ಪರಿಣಾಮ
1 ಮಲಿನ ವಾಯು ಆಸ್ತಮಾಕ್ಕೆ ಕಾರಣವಾಗುತ್ತದೆ.
2 ಶ್ವಾಸಕೋಶದ ಸಾಮರ್ಥ್ಯ ಕುಗ್ಗುತ್ತದೆ.
3 ಕ್ಯಾನ್ಸರ್‌ ಕಾಣಿಸಿಕೊಳ್ಳುವ ಸಾಧ್ಯತೆ
4 ಕೆಮ್ಮು ಮತ್ತು ಉಬ್ಬಸ.
5 ರೋಗ ನಿರೋಧಕ ಮತ್ತು ಸಂತಾನೋತ್ಪತ್ತಿ ಶಕ್ತಿ ಕುಂಠಿತ
6 ಅತಿಯಾದ ವಾಯು ಮಾಲಿನ್ಯ ಹೃದ್ರೋಗಕ್ಕೂ ಕಾರಣವಾಗಬಲ್ಲದು.

ಮಾಲಿನ್ಯಕ್ಕೆ ಕಾರಣವಾದ ಅಂಶಗಳು
ಶೇ. 45 ಧೂಳು ಮತ್ತು ನಿರ್ಮಾಣ ಕಾಮಗಾರಿ
ಶೇ. 17 ತ್ಯಾಜ್ಯಗಳನ್ನು ಉರಿಸುವುದರಿಂದ
ಶೇ. 14 ವಾಹನಗಳು
ಶೇ. 9 ಡೀಸೆಲ್‌ ಜನರೇಟರ್‌
ಶೇ. 8 ಕಾರ್ಖಾನೆಗಳು
ಶೇ. 7 ಅಡುಗೆ ತಯಾರಿ

ಭಾರತದಲ್ಲಿ…
ಭಾರತದಲ್ಲೂ ವಾಯು ಮಾಲಿನ್ಯ ಬೀರುವ ಪರಿಣಾಮ ಭೀಕರವಾಗಿದೆ. ಈ ಕಾರಣದಿಂದ ದೇಶದಲ್ಲಿ ಪ್ರತಿ ವರ್ಷ 1.5 ಮಿಲಿಯನ್‌ ಜನ ಸಾಯುತ್ತಿದ್ದಾರೆ. ಇದು ಐದನೇ ಅತಿ ದೊಡ್ಡ ಕೊಲೆಗಾರ ಎನಿಸಿದೆ. ಆಸ್ತಮಾ ಸಹಿತ ಉಸಿರಾಟ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವವರ ಸಂಖ್ಯೆಯೂ ಭಾರತದಲ್ಲೇ ಅಧಿಕ ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.