ಅಜೆಕಾರು:ದಾರಿದೀಪ ಅಳವಡಿಸಿ 4 ತಿಂಗಳಾದರೂ ವಿದ್ಯುತ್ ಸಂಪರ್ಕ ಇಲ್ಲ!
Team Udayavani, Mar 25, 2018, 7:55 AM IST
ಅಜೆಕಾರು: ಇಲ್ಲಿನ ಮರ್ಣೆ ಪಂಚಾಯತ್ ವ್ಯಾಪ್ತಿಯ ಅಜೆಕಾರು ಪೇಟೆಯಲ್ಲಿ ರಸ್ತೆಯನ್ನು ಅಗಲೀಕರಣ ಕಾಮಗಾರಿ ನಡೆಸಿ ರಸ್ತೆಯ ನಡುವೆ ವಿಭಾಜಕವನ್ನು ನಿರ್ಮಿಸಲಾಗಿದ್ದು ಅದರಲ್ಲಿ ದಾರಿ ದೀಪಗಳನ್ನು ಅಳವಡಿಸಲಾಗಿದೆ. ಆದರೆ ದಾರಿದೀಪ ನೋಡಲಷ್ಟೇ ಲಭ್ಯವಿದ್ದು ವಿದ್ಯುತ್ ಸಂಪರ್ಕವಿಲ್ಲದೆ ಜನಸಾಮಾನ್ಯರಿಗೆ ಪ್ರಯೋಜನ ಇಲ್ಲದಂತಾಗಿದೆ.
9 ಲಕ್ಷ ರೂ. ವೆಚ್ಚ
2017ರ ಡಿಸೆಂಬರ್ ತಿಂಗಳಿನಲ್ಲಿ ಸುಮಾರು 9 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ವಿಭಾಜಕದ ನಡುವೆ ದಾರಿದೀಪ ಅಳವಡಿಸಲಾಗಿತ್ತು. ಈಗ ನಾಲ್ಕು ತಿಂಗಳು ಕಳೆದರೂ ಇನ್ನೂ ಸಹ ಈ ದಾರಿದೀಪಗಳಿಗೆ ವಿದ್ಯುತ್ ಸಂಪರ್ಕ ದೊರೆತಿಲ್ಲ. ಈ ಬಗ್ಗೆ ಮರ್ಣೆ ಪಂಚಾಯತ್ ಡಿ. 14ರಂದು ಹೆಬ್ರಿ ಮೆಸ್ಕಾಂ ಕಚೇರಿಗೆ ನಿರಾಪೇಕ್ಷಣಾ ಪತ್ರ ಸಲ್ಲಿಸಿದೆ.
ದಾರಿದೀಪ ಅಳವಡಿಸಿದ ಗುತ್ತಿಗೆ ದಾರರು ಮೆಸ್ಕಾಂ ನೋಂದಾವಣೆ ಪತ್ರ ನೀಡಿದ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಲಾಗುವುದು ಎಂದು ಪಂಚಾಯತ್ಗೆ ತಿಳಿಸಿದ್ದಾರೆ.ಆದರೆ ಗುತ್ತಿಗೆದಾರರ ನಿಧಾನ ಗತಿಯ ಧೋರಣೆಯಿಂದಾಗಿ ದಾರಿದೀಪ ಅಳವಡಿಸಿಯೂ ದಾರಿಹೋಕರಿಗೆ ಪ್ರಯೋಜನಕ್ಕೆ ಬಾರದೆ ಊಟಕ್ಕಿಲ್ಲದ ಉಪ್ಪಿನಕಾಯಿ ಯಂತಾಗಿದೆ ಎನ್ನುವುದು ಜನರ ಆರೋಪ
ಗುತ್ತಿಗೆದಾರರ ನಿರ್ಲಕ್ಷ್ಯ
ದಾರಿದೀಪ ಅಳವಡಿಸಲು ಟೆಂಡರ್ ಪಡೆದುಕೊಂಡಿರುವ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ದಾರಿದೀಪಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಈ ಬಗ್ಗೆ ಹಲವು ಬಾರಿ ಗುತ್ತಿಗೆದಾರರನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನ ಇಲ್ಲವಾಗಿದೆ.
– ದಿನೇಶ್ ಕುಮಾರ್
ಅಧ್ಯಕ್ಷರು, ಮರ್ಣೆ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…