ಅಜೆಕಾರು: ಕಾರು -ಬೈಕ್ ಢಿಕ್ಕಿ, ಸವಾರ ಸಹಿತ ಮಗು ಗಂಭೀರ
Team Udayavani, Dec 31, 2022, 1:30 AM IST
ಅಜೆಕಾರು: ಕಾರು ಹಾಗೂ ಬೈಕ್ ಮುಖಾಮುಖೀ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಡಿ. 30ರಂದು ಸಂಭವಿಸಿದೆ.
ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್ (32) ಹಾಗೂ ಅವರ ಸಹೋದರಿಯ ಎಂಟು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸವಾರ ನಿತ್ಯಾನಂದ ತನ್ನ ಪತ್ನಿಯನ್ನು ಕಾರ್ಕಳಕ್ಕೆ ಬಿಟ್ಟು ಮತ್ತೆ ಅಂಡಾರು ಕಡೆ ಸಹೋದರಿಯ ಮಗುವನ್ನು ಬೈಕ್ನಲ್ಲಿ ಕೂರಿಸಿಕೊಂಡು ಕಾರ್ಕಳದಿಂದ ಅಂಡಾರು ಕಡೆಗೆ ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಬಲೆನೊ ಕಾರು ಢಿಕ್ಕಿ ಹೊಡೆದಿದೆ. ಬೈಕ್ ನಜ್ಜುಗುಜ್ಜಾಗಿದೆ.
ನಿತ್ಯಾನಂದ ಕುಲಾಲ್ ಅವರ ಸಹೋದರಿಯ ಮಗು ರಿಷಿಕಾ ಅಜ್ಜಿ ಮನೆಗೆಂದು ಡಿ. 29ರಂದು ಬಂದಿದ್ದು, ಈಕೆ ಶಂಕರಪುರ ಆಂಗ್ಲಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ. ಗಂಭೀರ ಗಾಯಗೊಂಡ ಮಗುವಿಗೆ ಮಣಿಪಾಲ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್