ಅಜೆಕಾರು: ಗಾಳಿ ಮಳೆಗೆ ಅಪಾರ ಹಾನಿ
Team Udayavani, Apr 25, 2019, 6:15 AM IST
ಅಜೆಕಾರು: ಮಂಗಳವಾರ ಸಂಜೆ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಮರ್ಣೆ, ಕಡ್ತಲ, ವರಂಗ, ಹಿರ್ಗಾನ, ಬೈಲೂರು ಪಂಚಾಯತ್ ವ್ಯಾಪ್ತಿಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಕೃಷಿ, ಮನೆಗಳಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.
ರಸ್ತೆಗಳ ಮೇಲೆ ಮರಗಳು ಉರುಳಿ ಸಂಚಾರ ಸ್ಥಗಿತಗೊಂಡರೆ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿತ್ತು.
ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ನ ಕಟ್ಟಡಕ್ಕೆ ಹಾನಿಯಾಗಿ ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿದೆ. ಮುನಿಯಾಲು, ಎಳ್ಳಾರೆ ಭಾಗದಲ್ಲಿ ಅಡಿಕೆ ಮರಗಳು ಗಾಳಿಗೆ ಉರುಳಿ ಬಿದ್ದು ಕೃಷಿಗೆ ಹಾನಿ ಉಂಟಾಗಿದೆ.
ಕಡ್ತಲ ಗ್ರಾ.ಪಂ. ವ್ಯಾಪ್ತಿಯ ಎಳ್ಳಾರೆ, ಪಾಲ್ಜಡ್ಡು, ಕುಕ್ಕುಜೆ, ದೊಂಡೇರಂಗಡಿ, ವರಂಗ ಪಂಚಾಯತ್ ವ್ಯಾಪ್ತಿಯ ಮುನಿಯಾಲು, ಚಟ್ಕಲ್ಪಾದೆ, ಮಾತಿ ಬೆಟ್ಟು, ಮರ್ಣೆ ಗ್ರಾ.ಪಂ. ವ್ಯಾಪ್ತಿಯ ದೆಪ್ಪುತ್ತೆ, ಹಿರ್ಗಾನ ಪಂಚಾಯತ್ ವ್ಯಾಪ್ತಿಯ ಚಿಕ್ಕಲ್ಬೆಟ್ಟು ಪ್ರದೇಶಗಳ ಬಹುತೇಕ ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ವಿದ್ಯುತ್ ಸಂಪರ್ಕ ಕಡಿತಗೊಂಡಿರು ವುದರಿಂದ ಮೆಸ್ಕಾಂ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಕಂದಾಯ ಇಲಾಖೆಯ ಅಧಿಕಾರಿಗಳು ಹಾನಿಗೊಂಡ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?