ಅಜೆಕಾರು: ಬರಿದಾದ ದೆಪ್ಪುತ್ತೆ ಕಿಂಡಿ ಅಣೆಕಟ್ಟು , ಸಮಸ್ಯೆ ಉಲ್ಬಣ
Team Udayavani, May 17, 2019, 6:28 AM IST
ಅಜೆಕಾರು: ಮರ್ಣೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಹಿಂದೆಂದಿಗಿಂತಲೂ ನೀರಿನ ಸಮಸ್ಯೆ ತೀವ್ರ ಉಲ್ಬಣಿಸಿದ್ದು ಹೊಳೆ ಹಳ್ಳಗಳ ನೀರು ಬರಿದಾಗಿದೆ.
ದೆಪ್ಪುತ್ತೆ ಹೊಳೆಗೆ ಕಿಂಡಿ ಅಣೆಕಟ್ಟು ನಿರ್ಮಿಸಿ ಹಲವು ವರ್ಷಗಳಿಂದ ಪರಿಸರದ ನಾಗರಿಕರಿಗೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಬೇಗನೆ ಕಿಂಡಿ ಅಣೆಕಟ್ಟಿನ ನೀರು ಬತ್ತಿ ಹೋಗಿದ್ದು ಸ್ಥಳೀಯರಿಗೆ ನೀರು ಪೂರೈಸುವುದು ಪಂಚಾಯತ್ ಆಡಳಿತಕ್ಕೆ ಸಮಸ್ಯೆಯಾಗಿದೆ.
ದೆಪ್ಪುತ್ತೆ ಕಿಂಡಿ ಅಣೆಕಟ್ಟಿನ ಮೇಲ್ಭಾಗದ ಹೊಳೆಯಲ್ಲಿರುವ ಕೆಲ ಗುಂಡಿಗಳಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಶೇಖರಣೆಗೊಂಡಿದ್ದು ಈ ನೀರನ್ನು ತೋಡುಗಳ ನಿರ್ಮಿಸುವ ಮಾಡುವ ಮೂಲಕ ಕಿಂಡಿಅಣೆಕಟ್ಟಿಗೆ ನೀರು ಸರಬರಾಜು ಮಾಡಿ ನೀರು ಪೂರೈಕೆಗೆ ಮರ್ಣೆ ಪಂಚಾಯತ್ ಆಡಳಿತ ಕ್ರಮ ಕೈಗೊಂಡಿದೆ.
ಜೆಸಿಬಿ ಮೂಲಕ ಹೊಳೆಯಲ್ಲಿ ತೋಡುಗಳನ್ನು ನಿರ್ಮಿಸಿ ನೀರನ್ನು ಹರಿಸಲಾಗುತ್ತಿದ್ದು ಇದು ಸಹ ಕೆಲ ದಿನಗಳಿಗಷ್ಟೇ ಸಾಕಾಗಬಹುದು. ಅನಂತರದ ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ನೀರಿನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ.
ಹಳ್ಳಗಳಿಂದ ನೀರು ಹರಿಸಲು ತೋಡು ನಿರ್ಮಾಣ ಮಾಡುವ ಸಂದರ್ಭ ಪಂಚಾಯತ್ ಅದ್ಯಕ್ಷ ದಿನೇಶ್ ಕುಮಾರ್, ಪಿಡಿಒ ತಿಲಕ್ರಾಜ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ