ಅಪಾಯಕಾರಿ ರೀತಿಯಲ್ಲಿ ರಸ್ತೆಗೆ ವಾಲಿಕೊಂಡಿವೆ ಅಕೇಶಿಯಾ ಮರಗಳು
Team Udayavani, Jun 12, 2018, 6:05 AM IST
ಕಾಪು: ಕಾಪು – ಶಿರ್ವ ರಸ್ತೆಯ ಚಂದ್ರನಗರದಲ್ಲಿ ಅಕೇಶಿಯಾ ಮರಗಳೆರಡು ಅಪಾಯವನ್ನು ಆಹ್ವಾನಿಸುವ ರೀತಿಯಲ್ಲಿ ರಸ್ತೆಗೆ ವಾಲಿ ನಿಂತಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಲೋಕೋಪಯೋಗಿ ರಸ್ತೆಯಲ್ಲಿ ಸಾಗುವಾಗ ಮಜೂರು – ಕಳತ್ತೂರು ಮಧ್ಯೆ ಸಿಗುವ ಚಂದ್ರನಗರ ಬಸ್ ನಿಲ್ದಾಣಕ್ಕಿಂತ ಅನತಿ ದೂರದಲ್ಲಿ ರಸ್ತೆ ಮತ್ತು ಚರಂಡಿಯ ನಡುವೆ ಸಿಲುಕಿಕೊಂಡಂತೆ ಮರ ವಾಲಿಕೊಂಡಿದೆ.
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಮಾರಣಾಂತಿಕ ಎಂಬಂತೆ ಬೀಸುತ್ತಿರುವ ಗಾಳಿ – ಮಳೆಯ ಅವಾಂತರಕ್ಕೆ ಸಿಲುಕಿ ಮರವೇನಾದರೂ ಉರುಳಿ ಬಿದ್ದರೆ ರಸ್ತೆ, ವಿದ್ಯುತ್ ಕಂಬ ಮತ್ತು ತಂತಿ ಹಾಗೂ ಅದರ ಮುಂಭಾಗದಲ್ಲಿರುವ ಮನೆಗೂ ಹಾನಿಯುಂಟಾಗುವ ಸಾಧ್ಯತೆಗಳಿವೆ. ಇದರಿಂದ ರಸ್ತೆ ಸಂಚಾರಿಗಳಿಗೂ ತೊಂದರೆ ಉಂಟಾಗುವ ಸಾಧ್ಯತೆಗಳಿವೆ.
ಅಚ್ಚರಿ ಮೂಡಿಸಿದ ಕಾಮಗಾರಿ
ಕಾಪು – ಶಿರ್ವ ರಸ್ತೆಯ ವಿಸ್ತರಣೆ ಮತ್ತು ಡಾಮರೀಕರಣ ಕಾಮಗಾರಿಯ ಬಳಿಕ ಮಳೆ ನೀರು ಹರಿಯಲೆಂದು ರಸ್ತೆ
ಪಕ್ಕದಲ್ಲಿ ಚರಂಡಿಯನ್ನು ನಿರ್ಮಿಸಲಾಗಿತ್ತು. ಆದರೆ ಇಲ್ಲಿ ಚರಂಡಿ ಬಿಡಿಸುವ ಸಂದರ್ಭ ಚರಂಡಿಯ ಗುಡ್ಡದಲ್ಲೇ ಬೆಳೆದಿರುವ ಎರಡು ಮರಗಳನ್ನು ಕೂಡಾ ಹಾಗೆಯೇ ಉಳಿಸಿ, ಚರಂಡಿ ನಿರ್ಮಿಸಿರುವುದು ಆಶ್ಚರ್ಯ ಮೂಡಿಸಿದೆ.
ರಸ್ತೆ ಬದಿಯಲ್ಲಿರುವ ಮಣ್ಣಿನ ದಿಬ್ಬದ ಮೇಲೆಯೇ ಮರ ವಾಲಿಕೊಂಡಂತೆ ಇದ್ದರೂ ಅದನ್ನು ಸ್ಥಳೀಯಾಡಳಿತ ಸಂಸ್ಥೆಯಾಗಲೀ, ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆಯಾಗಲೀ ಇನ್ನೂ ಕೂಡಾ ಗಮನಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್