ಅಕ್ಷಯ ತೃತೀಯಾ: ಆಭರಣ ಖರೀದಿ ಸಡಗರ
Team Udayavani, May 8, 2019, 6:14 AM IST
ಮಂಗಳೂರು: ಅಕ್ಷಯ ತೃತೀಯಾ ದಿನವಾದ ಮಂಗಳವಾರ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ, ಚಿನ್ನಾಭರಣ ವ್ಯಾಪಾರ ಭರ್ಜರಿಯಾಗಿ ನಡೆಯಿತು.
ಅಕ್ಷಯ ತೃತೀಯಾದಂದು ಚಿನ್ನಾ ಭರಣ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಭಾರತೀಯರಲ್ಲಿದೆ. ಇದಕ್ಕನುಗುಣ ವಾಗಿ ತಲೆತಲಾಂತರದಿಂದಲೂ ಅಕ್ಷಯ ತೃತೀಯಾದಂದು ಚಿನ್ನ, ವಜ್ರಾಭರಣ ಖರೀದಿ ಮಾಡುವ ಸಂಪ್ರದಾಯ ಬೆಳೆದುಬಂದಿದೆ. ಅದರಂತೆ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ಆಭರಣ ಪ್ರಿಯರು ಚಿನ್ನ ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು.
ಸಾಮಾನ್ಯವಾಗಿ ಅಕ್ಷಯ ತೃತೀಯಾದ ಆಸುಪಾಸಿನಲ್ಲಿ ಚಿನ್ನಾ ಭರಣ ಖರೀದಿಸಲು ಹೋಗುವ ಗ್ರಾಹಕರು ಮುಂಗಡ ಕಾದಿರಿಸಿ
ಅಕ್ಷಯ ತೃತೀಯಾದಂದು ಮನೆ ಗೊಯ್ಯುವ ಸಂಪ್ರದಾಯವನ್ನು ರೂಢಿಸಿಕೊಂಡು ಬಂದಿದ್ದಾರೆ.
ಚಿನ್ನಾಭರಣ ಖರೀದಿ ಸಂಬಂಧ ಮಾರುಕಟ್ಟೆಯ ಬಗ್ಗೆ ಪರಿಶೀಲಿಸಿದಾಗ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ವ್ಯವಹಾರ ನಡೆದಿದೆ ಎನ್ನುತ್ತಾರೆ ಚಿನ್ನಾಭರಣಗಳ ಮಳಿಗೆಯ ಮಾಲಕರು. ವಿವಿಧ ಚಿನ್ನಾಭರಣ ಮಳಿಗೆಗಳು ದರ ಕಡಿತ, ಉಡುಗೊರೆ, ಉಚಿತ ಚಿನ್ನ-ಬೆಳ್ಳಿಯ ನಾಣ್ಯಗಳನ್ನು ಪ್ರಕಟಿಸಿ ಗ್ರಾಹಕರನ್ನು ಆಕರ್ಷಿಸಿದ್ದವು. ಇದರಿಂದ ಸಹಜವಾಗಿ ಗ್ರಾಹಕರೂ ಆಕರ್ಷಿತರಾಗಿ ಚಿನ್ನ ಖರೀದಿಯಲ್ಲಿ ತೊಡಗಿದ್ದರು. ರಾತ್ರಿ ವೇಳೆಯಲ್ಲಿಯೂ ಚಿನ್ನದಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಅಧಿಕವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?