ಎಲ್ಲಾ ಜನಪ್ರತಿನಿಧಿಗಳು ಕ್ರೀಡೋತ್ಸವ ಆಯೋಜಿಸಿ ಕ್ರೀಡಾ ಕ್ರಾಂತಿ ಮಾಡಬೇಕು: ಅನುರಾಗ್‌ ಸಿಂಗ್‌ ಠಾಕೂರ್‌

ಉಡುಪಿ ಬಿಜೆಪಿ 'ಅಟಲ್‌ ಉತ್ಸವ’ದಲ್ಲಿ ಕೇಂದ್ರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ

Team Udayavani, Dec 24, 2022, 10:37 PM IST

1-d-adadsa

ಉಡುಪಿ : ದೇಶದಲ್ಲಿ ಎಲ್ಲಾ ಎಲ್ಲಾ ಜನಪ್ರತಿನಿಧಿಗಳು ಕ್ರೀಡೋತ್ಸವ ಆಯೋಜಿಸುವ ಮೂಲಕ ಕ್ರೀಡಾ ಕ್ರಾಂತಿ ನಡೆಸಬೇಕು ಎಂದು ಕೇಂದ್ರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಕರೆ ನೀಡಿದರು.

ಡಿ. 24ರಂದು ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಹಮ್ಮಿಕೊಂಡ “ಅಟಲ್‌ ಉತ್ಸವ’ದ ಪ್ರಯುಕ್ತ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಮುಕ್ತ ಪ್ರೊ ಕಬಡ್ಡಿ ಪಂದ್ಯಾಟದಲ್ಲಿ ಭಾಗಿಯಾಗಿ ಮಾತನಾಡಿ, ನಾನು ಇಂತಹ ಕ್ರೀಡೆಯನ್ನು ಉತ್ತೇಜಿಸುವ ಕಾರ್ಯಕ್ರಮಕ್ಕೆ ಕರೆದರೆ ಒಂದು ಬಾರಿಯಲ್ಲ ಹತ್ತು ಬಾರಿಯಾದರೂ ಬರುತ್ತೇನೆ ಎಂದರು.

545 ಲೋಕಸಭಾ ಸಂಸದರು 245 ರಾಜ್ಯಸಭಾ ಸಂಸದರು 4000 ಮಂದಿ ಶಾಸಕರು ಇಂತಹ ಟ್ರೋಫಿಗಳನ್ನು ಆಯೋಜಿಸಿದರೆ ದೇಶದಲ್ಲಿ ಕ್ರೀಡಾ ಕ್ರಾಂತಿ ನಡೆಸಬಹುದು. ಎಲ್ಲಾ ಕಡೆ ಇಂತಹ ಕ್ರೀಡೋತ್ಸವ ಆಯೋಜಿಸುವ ರಘುಪತಿ ಭಟ್ ಅವರಂತಹ ಹೆಚ್ಚಿನ ನಾಯಕರು ಬೇಕಾಗಿದೆ ಎಂದರು.

ಹಿಂದೆ ಕ್ರಿಕೆಟ್ ಅನ್ನು ದೇಶದಲ್ಲಿ ಬಹುವಾಗಿ ಮೆಚ್ಚಲಾಗಿತ್ತು, ಈಗ ಪ್ರೊ ಕಬಡ್ಡಿ ಮೂಲಕ ಕ್ರೀಡಾಳುಗಳ ಮೌಲ್ಯ ಕ್ರಿಕೆಟ್ ನಂತೆ ಕೋಟಿ ರೂ.ಗೆ ಏರಿಕೆಯಾಗಿದೆ ಎಂದರು.

3195 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಖೇಲೋ ಇಂಡಿಯಾಗಾಗಿ, ಕರ್ನಾಟಕದಲ್ಲಿ ಹೊಸ ದಾಖಲೆ ಬರೆಯಲಾಗಿದೆ. ಹರಿಯಾಣದಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಹಲವು ದಾಖಲೆಗಳನ್ನು ಮುರಿಯಲಾಗಿದೆ ಎಂದರು. 5000 ಕ್ರೀಡಾ ಪಟುಗಳು ಕರ್ನಾಟಕಕ್ಕೆ ಆಗಮಿಸಿ ಯಶಸ್ವೀ ಖೇಲೋ ಇಂಡಿಯಾ ಆಯೋಜಿಸಲಾಗಿದೆ ಎಂದರು.

ಅಟಲ್ ಜಿ ಅವರು ಅಂದು ವಿಶ್ವಸಂಸ್ಥೆಯಲ್ಲಿ ಹಿಂದಿ ಯಲ್ಲಿ ಮಾತನಾಡಿದರು ಭಾರತದ ಶಕ್ತಿಯನ್ನು ಪೊಖ್ರಾನ್ ಅಣು ಸ್ಪೋಟದ ಮೂಲಕ ಜಗತ್ತಿಗೆ ತೋರಿದರು. ಭಾರತದ 50 ನೇ ಸ್ವಾತಂತ್ರ್ಯದ ವೇಳೆ ನಾನು ವ್ಯಾಪಾರ ಮೇಳಕ್ಕೆ ಅಮೆರಿಕಕ್ಕೆ ಹೋಗಿದ್ದೆ.ಆಗ ಹಾವು ಮೋಡಿ ಮಾಡುವವರು ಮತ್ತು ಭಿಕ್ಷುಕರು ಎಂದು ಅಲ್ಲಿನ ಪತ್ರಿಕೆಯಲ್ಲಿ ಬರೆಯಲಾಗಿತ್ತು. ಆದರೆ ಪೊಖ್ರಾನ್ ಅಣು ಸ್ಪೋಟದ ಬಳಿಕ ಭಾರತ ಹೊರ ಹೊಮ್ಮುತ್ತಿರುವ ದೊಡ್ಡ ಶಕ್ತಿ ಎಂದು ಅಟಲ್ ವಿಶ್ವಕ್ಕೆ ತೋರಿಸಿಕೊಟ್ಟರು ಎಂದರು.

ಆರ್ ಎಸ್ ಎಸ್ ಶಾಖೆ ಯಲ್ಲಿ ಅಟಲ್ ಜಿ ಅವರು ಕಬಡ್ಡಿ ಆಡಲು ಶುರು ಮಾಡಿದರು. ಅವರು ತನ್ನ ಉತ್ತರದಲ್ಲೇ ಎಲ್ಲರ ಪ್ರಶಂಸೆ ಪಡೆಯುತ್ತಿದ್ದರು. ಅವರು ಕ್ರಿಕೆಟ್ ಅನ್ನು ಕೂಡ ಮೆಚ್ಚುತ್ತಿದ್ದರು ಎಂದರು.

ಜಗತ್ತಿನ ಅತೀದೊಡ್ಡ ಜಿಡಿಪಿ ಬೆಳವಣಿಗೆ ದರ 7.2 ಭಾರತದ್ದಾಗಿದೆ. ದೊಡ್ಡ ದೊಡ್ಡ ದೇಶಗಳನ್ನು ಹಿಂದಿಕ್ಕಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಾಧ್ಯವಾಗಿದೆ ಎಂದರು. ಕೋವಿಡ್ ವ್ಯಾಕ್ಸಿನ್ 200 ಕೋಟಿ ಎರಡು ಡೋಸ್ ಕೊಡುವ ಕೆಲಸ ನಮ್ಮ ಸರಕಾರ ಮಾಡಿದೆ ಎಂದರು.

ಬಿಎಫ್ 7 ಬಂದಿದೆ. ಚೀನದಲ್ಲಿ ಸಾವಿರರು ಜನರು ಬಲಿಯಾಗಿದ್ದಾರೆ. ನೀವು ಕೋವಿಡ್ ಪ್ರೋಟೋಕಾಲ್ ಗಳನ್ನು ಅನುಸರಿಸಿ ಎಂದು ಕರೆ ನೀಡಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿದರು. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಾದ ದೆಹಲಿ, ಹರ್ಯಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ರಾಜ್ಯಗಳ ಒಟ್ಟು 12 ತಂಡಗಳು ಭಾಗವಹಿಸಿವೆ. ಅನುಕ್ರಮವಾಗಿ 1 ಲ.ರೂ., 75,000 ರೂ., 50,000 ರೂ., 25,000 ರೂ. ಬಹುಮಾನಗಳನ್ನು ಪ್ರಶಸ್ತಿ ಫ‌ಲಕಗಳೊಂದಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನಗಳ ವಿಜೇತರಿಗೆ ನೀಡಲಾಗುತ್ತಿದೆ.

5 ಅಡಿ ಎತ್ತರದ ಟ್ರೋಫಿ
ಜೀವನದ ಉದ್ದಕ್ಕೂ ನೆನಪಿಸುವಂತೆ ಸುಮಾರು 5 ಅಡಿ ಎತ್ತರದ ಆಕರ್ಷಕ ಟ್ರೋಫಿಗಳನ್ನು ಬಹುಮಾನವಾಗಿ ಕೊಡಲಾಗುತ್ತಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.