ಬೈಂದೂರು ತಾಲೂಕಿಗೆ ಅಗ್ನಿಶಾಮಕ ಠಾಣೆ ಮಂಜೂರು
ಅಭಿವೃದ್ಧಿ ಯೋಜನೆಗಳ ಸಾಕಾರಕ್ಕೆ ಬೇಕು ಇನ್ನಷ್ಟು ವೇಗ
Team Udayavani, Feb 4, 2020, 5:23 AM IST
ಬೈಂದೂರು: ಕಳೆದ ಹಲವು ಸಮಯದಿಂದ ಬೇಡಿಕೆಯಿರುವ ಬೈಂದೂರು ತಾಲೂಕು ಅಗ್ನಿಶಾಮಕ ಠಾಣೆಗೆ ಸರಕಾರದಿಂದ ಮಂಜೂರಾತಿ ದೊರೆತಿದೆ. ಈ ಮೂಲಕ ಬೈಂದೂರು ತಾಲೂಕು ಅಭಿವೃದ್ಧಿಗೆ ಇನ್ನಷ್ಟು ವೇಗ ಕಂಡುಕೊಳ್ಳಬೇಕಾಗಿದೆ. ಸಂಸದರು ಹಾಗೂ ಶಾಸಕರು ಈ ಕುರಿತು ವಿಶೇಷ ಮುತುವರ್ಜಿ ವಹಿಸಿದ್ದು ಇನ್ನಷ್ಟು ಯೋಜನೆಗಳ ಸಾಕಾರವಾಗುವ ಮೂಲಕ ತಾಲೂಕು ಕೇಂದ್ರದ ಅಭಿವೃದ್ಧಿ ಮತ್ತುಷ್ಟು ಚುರುಕು ಕಾಣಬೇಕಾಗಿದೆ.
ಅಗ್ನಿಶಾಮಕ ಠಾಣೆ
ಬೈಂದೂರಿಗೆ ಯಾಕೆ ಅವಶ್ಯ?
ಬೈಂದೂರು ಕ್ಷೇತ್ರದ ಭೌಗೋಳಿಕ ವಿನ್ಯಾಸ ಆತ್ಯಂತ ವಿಭಿನ್ನ ಹಾಗೂ ವಿಶಿಷ್ಟವಾಗಿದೆ.ಸುಮಾರು 500ಕ್ಕೂ ಅಧಿಕ ಕೈಗಾರಿಕಾ ಘಟಕಗಳಿವೆ. ಸಹ್ಯಾದ್ರಿ ಮಲೆನಾಡು ಹಾಗೂ ಕರಾವಳಿ ಭಾಗವನ್ನೊಳಗೊಂಡಿದೆ. ಪ್ರತಿನಿತ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತದೆ.ರಸ್ತೆ ಅವಘಡ, ಕಾಡ್ಗಿಚ್ಚು ಸಂಭವಿಸಿದಾಗ ಕುಂದಾಪುರ ಹಾಗೂ ಭಟ್ಕಳದಿಂದ ಅಗ್ನಿಶಾಮಕ ವಾಹನಗಳು ಬರಬೇಕಾಗುತ್ತದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಜತೆಗೆ ಮೀನುಗಾರಿಕೆ ಬಂದರು ದೋಣಿ ನಿರ್ಮಾಣ ಕೇಂದ್ರ ಕೂಡ ಇದೆ. ಕೈಗಾರಿಕೆಗಳು ಅಭಿವೃದ್ಧ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರಿನಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸಬೇಕು ಎಂದು ಸ್ಥಳೀಯರು ಹಲವು ಸಮಯದಿಂದ ಬೇಡಿಕೆ ಸಲ್ಲಿಸಿದ್ದರು ಕಳೆದ ಮೂರು – ನಾಲ್ಕು ವರ್ಷದ ಹಿಂದೆ ಇಲ್ಲಿನ ನಾಗರೀಕರ ಒತ್ತಡಕ್ಕೆ ಸ್ಪಂದಿಸಿದ ಅಂದಿನ ಶಾಸಕ ಕೆ. ಗೋಪಾಲ ಪೂಜಾರಿಯವರು ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯೋಜನಾನಗರದ ಬಳಿ ಸರ್ವೆ ನಂಬರ್ 263/ಪಿ2 ರಲ್ಲಿ ಒಂದು ಏಕ್ರೆ ಸರ್ಕಾರಿ ಜಾಗವನ್ನು ಗುರುತಿಸಿ, ಜಿಲ್ಲಾಧಿಕಾರಿಗಳ ಮೂಲಕ ಇಲಾಖೆಯ ಹೆಸರಿಗೆ ಮಂಜೂರು ಮಾಡಿಸಿದ್ದರು. ಪಹಣೆ ಕೂಡಾ ಇಲಾಖೆಯ ಹೆಸರಿಗೆ ದಾಖಲಾಗಿದೆ. ಬಳಿಕ ಅಗ್ನಿಶಾಮಕ ಠಾಣೆಯ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು ಕೂಡ ಕಾರಣಾಂತರದಿಂದಾಗಿ ನೆನೆಗುದಿಗೆ ಬಿದ್ದಿತ್ತು. ಪ್ರಸ್ತುತ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿಯವರ ಅವಿರತ ಶ್ರಮದ ಫಲವಾಗಿ ಅಗ್ನಿಶಾಮಕ ಠಾಣೆಗೆ ಸರ್ಕಾರದ ಮಂಜೂರಾತಿ ದೊರಕಿದೆ.
ಮಂಜೂರಾದ ಹುದ್ದೆ
ಬೈಂದೂರು ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ತೆರೆಯುವ ಪ್ರಸ್ತಾವನೆಯನ್ನು ಸರ್ಕಾರ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಂಜೂರು ಮಾಡಿದೆ.
ಒಂದು ಅಗ್ನಿಶಾಮಕ ಠಾಣಾಧಿಕಾರಿ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ, 4 ಪ್ರಮುಖ ಅಗ್ನಿಶಾಮಕರು, 4 ಅಗ್ನಿಶಾಮಕ ಚಾಲಕರು, 1 ಚಾಲಕ ತಂತ್ರಜ್ಞ, 16 ಅಗ್ನಿಶಾಮಕರು, 2 ದ್ವಿತೀಯ ದರ್ಜೆ ಸಹಾಯಕರು ಸೇರಿದಂತೆ 29 ಸಿಬ್ಬಂದಿ ಹಾಗೂ ಠಾಣೆಗೆ ಅಗತ್ಯವಿರುವ 2 ಜಲವಾಹನ, 2 ಪೋರ್ಟ್ಬಲ್ ಪಂಪು, ಮೋಟಾರ್ ಸೈಕಲ್, ಏರ್ ಕಂಪ್ರಷರ್ನ್ನು ಸರ್ಕಾರ ಮಂಜೂರು ಮಾಡಿದೆ.
ಹಲವು ಸಮಯದಿಂದ ಬೈಂದೂರಿನಲ್ಲಿ ಪ್ರತ್ಯೇಕ ಅಗ್ನಿಶಾಮಕ ಠಾಣೆ ಆರಂಭಿಸು ವಂತೆ ಜನಪ್ರತಿನಿಧಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಹಿಂದಿನ ಶಾಸಕರು ಅಗ್ನಿಶಾಮಕ ಠಾಣೆಗೆ ಸ್ಥಳ ಮಂಜೂರಾತಿ ಗೊಳಿಸಿದ್ದರು. ಹಾಲಿ ಶಾಸಕರು ಹಾಗೂ ಸಂಸದರ ಸಹಕಾರದಿಂದ ಅಗ್ನಿಶಾಮಕ ಠಾಣೆಗೆ ಮಂಜೂರಾತಿ ದೊರಕಿರುವುದು ಸಂತಸದ ವಿಷಯ ಆದಷ್ಟು ಬೇಗ ನಿರ್ಮಾಣ ಕಾರ್ಯ ನಡೆಯಬೇಕಿದೆ.
ಶೀಘ್ರ ಸುಸಜ್ಜಿತ ಕಟ್ಟಡ ನಿರ್ಮಾಣ
ಬೈಂದೂರು ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಸಂಸದರ ಸಹಕಾರದಿಂದ, ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ, ನೂತನ ಬೈಂದೂರು ತಾಲೂಕಿಗೆ ಅಗ್ನಿಶಾಮಕ ಠಾಣೆ ಮಂಜೂರಾತಿ ದೊರಕಿಸಿಕೊಡಲಾಗಿದೆ. ಸದ್ಯ ತಾತ್ಕಾಲಿಕ ಕಟ್ಟಡದಲ್ಲಾದರೂ ಕಾರ್ಯಾರಂಭ ಮಾಡಿಸಿ, ಶೀಘ್ರ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುವುದು.
– ಬಿ.ಎಂ. ಸುಕುಮಾರ ಶೆಟ್ಟಿ, ಶಾಸಕರು
ಅಗತ್ಯ ಕ್ರಮ
ಬೈಂದೂರಿನಲ್ಲಿ ನೂತನ ಅಗ್ನಿ ಶಾಮಕ ಠಾಣೆ ತೆರೆಯುವ ಸಂಬಂಧ ಸರ್ಕಾರ ಮಂಜೂರಾತಿ ದೊರಕಿರುವುದು ವಿವಿಧ ಮೂಲದ ಮೂಲಕ ಗಮನಕ್ಕೆ ಬಂದಿದೆ. ಇಲಾಖಾಧಿಕಾರಿಗಳ ಮೂಲಕ ಅಧಿಕೃತ ಆದೇಶ ಇನ್ನಷ್ಟೆ ಬರಬೇಕಾಗಿದೆ.ಆ ಬಳಿಕ ಇದರ ಕಾರ್ಯಾರಂಭದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
– ವಸಂತ, ಜಿಲ್ಲಾ
ಅಗ್ನಿಶಾಮಕದಳ ಅಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ