ಪ್ರವಾಸಿ ತಾಣವಾಗಿ ಬಾರಕೂರು: ಜಯಮಾಲಾ ಭರವಸೆ


Team Udayavani, Jan 26, 2019, 12:30 AM IST

250119astro30.jpg

ಉಡುಪಿ/ಬ್ರಹ್ಮಾವರ: ಬಾರಕೂರನ್ನು ಪ್ರವಾಸಿ ತಾಣವಾಗಿ ಘೋಷಿಸಲು ಪ್ರಯತ್ನಿಸುವುದಾಗಿ ಸಚಿವೆ ಡಾ| ಜಯಮಾಲಾ ಭರವಸೆ ನೀಡಿದರು. 

ಜಿಲ್ಲಾಡಳಿತ, ಜಿ.ಪಂ., ಪ್ರವಾಸೋದ್ಯಮ ಇಲಾಖೆ, ಕನ್ನಡ ಸಂಸ್ಕೃತಿ ಇಲಾಖೆ, ತೋಟಗಾರಿಕಾ ಇಲಾಖೆ ಸಹಭಾಗಿತ್ವದಲ್ಲಿ ಬಾರಕೂರು ಕೋಟೆ ಪ್ರದೇಶದಲ್ಲಿ ಆರಂಭಗೊಂಡ 3 ದಿನಗಳ “ಆಳುಪೋತ್ಸವ 2019’ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯ ನೆಲ, ಸಂಸ್ಕೃತಿ ಅದ್ಭುತವಾದುದು. ಅಳುಪರು ಮೊದಲು ಮಂಗಳೂರು, ಬಳಿಕ ಉದ್ಯಾವರ, ಅನಂತರ ಬಾರಕೂರನ್ನು ರಾಜಧಾನಿಯಾ ಗಿರಿಸಿಕೊಂಡು ಆಳಿದ್ದರು. ಆಳುಪೋತ್ಸವದ ಈ ಸಂದರ್ಭ ಬಾರಕೂರನ್ನು ಪ್ರವಾಸಿ ತಾಣವಾಗಿ ಘೋಷಿಸಲು ಪ್ರವಾಸೋದ್ಯಮ ಸಚಿವರಿಗೂ ಆಸಕ್ತಿ ಇದೆ. ಅವರಲ್ಲಿ ಮಾತನಾಡಿ ಇದಕ್ಕಾಗಿ ಪ್ರಯತ್ನಿಸುತ್ತೇನೆ ಎಂದರು.

ರಾಜರ ಸಾಂಸ್ಕೃತಿಕ ಕೊಡುಗೆಗಳಿಂದಾಗಿ ಇಂದಿಗೂ ಕರಾವಳಿಯ ನಾವು ಸುಸಂಸ್ಕೃತರಾಗಿ ಬದುಕುತ್ತಿದ್ದೇವೆ. ನಮ್ಮ ಸರಕಾರ ಮುಂದಿನ ಪೀಳಿಗೆಗೆ ಹಿಂದಿನವರ ಕೊಡುಗೆ ತಿಳಿಯುವಂತಾಗಲು ದಸರ, ಕದಂಬ, ಚಾಲುಕ್ಯ, ಕರಾವಳಿ, ಲಕ್ಕುಂಡಿ ಮೊದಲಾದ ಉತ್ಸವ ಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು.

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂತಹ ಉತ್ಸವ ಪ್ರತಿವರ್ಷ ನಡೆಯುವಂತಾಗಬೇಕು. ಹೀಗಾದರೆ ಯುವ ಪೀಳಿಗೆಗೆ ಗತ ವೈಭವದ ಅರಿವು ಉಂಟಾಗುತ್ತದೆ ಎಂದರು.

ಬಾರಕೂರು ಸಂಸ್ಥಾನದ ಡಾ| ವಿಶ್ವ ಸಂತೋಷ ಭಾರತಿ ಗುರೂಜಿ, ಇಗರ್ಜಿಯ ಧರ್ಮಗುರು ವಂ| ಫಿಲಿಪ್‌ ಮೇರಿ ಅರಾನ್ಹ, ಮಸೀದಿಯ ಧರ್ಮಗುರು ಮೌಲಾನ ಮಹಮ್ಮದ್‌ ರಫೀಕ್‌ ಶುಭ ಕೋರಿದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿ.ಪಂ. ಸಿಇಒ ಸಿಂಧು ರೂಪೇಶ್‌, ಎಡಿಸಿ ವಿದ್ಯಾಕುಮಾರಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌, ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷರಾದ ಬಾರಕೂರಿನ ಶೈಲಜಾ ಡಿ’ಸೋಜಾ, ಯಡ್ತಾಡಿಯ ಪ್ರಕಾಶ್‌ ಶೆಟ್ಟಿ, ತಾ.ಪಂ. ಸದಸ್ಯ ಅರುಣ್‌, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ, ಬಾರಕೂರಿನ ಮುಂದಾಳು ಶಾಂತಾರಾಮ ಶೆಟ್ಟಿ, ಜಾನಪದ ಜಾತ್ರೆ ನಿರ್ದೇಶಕ ಪಿಚ್ಚಳ್ಳಿ ಶ್ರೀನಿವಾಸ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ಉಪಸ್ಥಿತರಿದ್ದರು. ಅಂಚೆ ಇಲಾಖೆ ಹೊರತಂದ ವಿಶೇಷ ಲಕೋಟೆಯನ್ನು ಸಚಿವರು ಬಿಡುಗಡೆಗೊಳಿಸಿದರು. 

ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸ್ವಾಗತಿಸಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಪ್ರಸ್ತಾವನೆಗೈದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ವಂದಿಸಿದರು. ಬೆಂಗಳೂರಿನ ಗಣೇಶ ಪ್ರಸಾದ್‌ ನಿರ್ವಹಿಸಿದರು. ಸಿಂಹಾಸನ ಗುಡ್ಡೆಯಿಂದ ಕೋಟೆವರೆಗೆ ಆಕರ್ಷಕ ಹೆರಿಟೇಜ್‌ ವಾಕ್‌ ಜಾಥಾ ನಡೆಯಿತು.

ಉಲ್ಲೇಖವಿಲ್ಲದ ಪ್ರಾಚೀನತೆ
ಸುಮಾರು ಎಂಟು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಬಾರಕೂರಿನ ಭಂಡಾರಕೇರಿ ಮಠದ ಉಲ್ಲೇಖ ಆಳುಪೋತ್ಸವದಲ್ಲಿ ಎಲ್ಲಿಯೂ ಕಂಡುಬರಲಿಲ್ಲ. 

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.