ಬಿ.ಆರ್‌. ಅಂಬೇಡ್ಕರ್‌ ಭವನ: ಮಂಜೂರು 39; ನಿರ್ಮಾಣ 3 ಮಾತ್ರ!


Team Udayavani, Feb 20, 2023, 7:00 AM IST

ಬಿ.ಆರ್‌. ಅಂಬೇಡ್ಕರ್‌ ಭವನ: ಮಂಜೂರು 39; ನಿರ್ಮಾಣ 3 ಮಾತ್ರ!

ಉಡುಪಿ: ಮೂರು ವರ್ಷಗಳಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ 39 ಡಾ| ಬಿ.ಆರ್‌. ಅಂಬೇಡ್ಕರ್‌ ಭವನ/ ಡಾ| ಬಾಬು ಜಗಜೀವನ್‌ರಾಮ್‌ ಭವನವು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ನಿರ್ಮಾಣ ವಾಗಿರುವುದು ಕೇವಲ ಮೂರು!

ಭವನ ನಿರ್ಮಾಣಕ್ಕೆ ಸಮುದಾಯದಿಂದ ಬಂದಿರುವ ಬೇಡಿಕೆ ಆಧರಿಸಿ ತಾಲೂಕಿಗೆ ಒಂದು ಅಥವಾ ಎರಡರಂತೆ ಹಂಚಿಕೆ ಮಾಡಲಾಗಿತ್ತು. ರಾಜ್ಯದಲ್ಲಿ ಒಟ್ಟು 484 ಭವನ ನಿರ್ಮಾಣಕ್ಕೆ ಆಯಾ ಜಿಲ್ಲೆ, ತಾಲೂಕುಗಳಿಗೆ ಹಂಚಿಕೆ ಮಾಡಲಾಗಿದೆ. 121.16 ಕೋ.ರೂ. ಮೀಸಲಿಡಲಾಗಿದ್ದು, ಮೊದಲ ಕಂತಿನಲ್ಲಿ 46.73 ಕೋ.ರೂ. ಬಿಡುಗಡೆ ಮಾಡಲಾಗಿದೆ; 78 ಭವನ ನಿರ್ಮಾಣವಾಗಿದೆ.

ಇವುಗಳಲ್ಲಿ ಉಡುಪಿಗೆ 15, ದಕ್ಷಿಣ ಕನ್ನಡಕ್ಕೆ 24 ಭವನ ಮಂಜೂರಾಗಿದೆ. ದ.ಕ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 24 ಭವನ ನಿರ್ಮಾ ಣಕ್ಕೆ 4.80 ಕೋ.ರೂ. ಅನುದಾನ ಮೀಸಲಿಟ್ಟಿದ್ದು, ಮೊದಲ ಕಂತಿನಲ್ಲಿ 1.44 ಕೋ.ರೂ. ಬಿಡುಗಡೆ ಮಾಡಲಾಗಿದೆ. ಉಡುಪಿಗೆ ಮಂಜೂರಾಗಿರುವ 15 ಭವನ ನಿರ್ಮಾಣಕ್ಕೆ 3 ಕೋ.ರೂ. ಮೀಸಲಿಟ್ಟಿದ್ದು 98 ಲಕ್ಷ ರೂ. ಬಿಡುಗಡೆಯಾಗಿದೆ. ಮೂರು ಭವನ ನಿರ್ಮಾಣ ಕಾರ್ಯವೂ ಪೂರ್ಣಗೊಂಡಿದೆ.

ನಿರ್ಮಾಣ ಹಂತದಲ್ಲಿ ಹಲವು
ಉಭಯ ಜಿಲ್ಲೆಗೆ ಮಂಜೂರಾ ಗಿರುವ 39 ಭವನಗಳಲ್ಲಿ 20ಕ್ಕೂ ಅಧಿಕ ಭವನ ನಿರ್ಮಾಣ ಹಂತ ಅಥವಾ ಗುದ್ದಲಿ ಪೂಜೆ ಪೂರ್ಣಗೊಂಡು ಕಾಮಗಾರಿ ಈಗಷ್ಟೇ ಆರಂಭವಾಗಿದೆ. ಕಾಮಗಾರಿ ಆರಂಭವಾಗಿರುವ ಭವನಗಳಿಗೆ ಮೊದಲ ಕಂತಿನ ಹಣ ಬಂದಿದೆ. ಸ್ಥಳ ಗುರುತಿಸಿದ್ದು, ಭವನ ನಿರ್ಮಾಣ ಕಾಮಗಾರಿ ಆರಂಭವಾಗದ ಕಡೆಗಳಿಗೆ ಇನ್ನೂ ಅನುದಾನ ಹೋಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿ ರುವುದರಿಂದ ವಿವಿಧ ಕಾಮಗಾರಿಗಳಿಗೆ ವೇಗ ಸಿಕ್ಕಿದೆ. ಅದೇ ಮಾದರಿಯಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಭವನ/ ಡಾ| ಬಾಬು ಜಗಜೀವನ್‌ರಾಮ್‌ ಭವನ ನಿರ್ಮಾಣ ಕಾಮಗಾರಿಯನ್ನು ಚುನಾವಣೆ ಘೋಷಣೆಯೊಳಗೆ ಆದಷ್ಟು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮೌಖೀಕ ಸೂಚನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಡಾ| ಬಿ.ಆರ್‌. ಅಂಬೇಡ್ಕರ್‌ ಭವನ/ ಡಾ| ಬಾಬು ಜಗಜೀವನ್‌ರಾಮ್‌ ಭವನ ನಿರ್ಮಾಣಕ್ಕೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುತ್ತಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಘೋಷಣೆಯಾಗಿರುವ ಬಹುತೇಕ ಎಲ್ಲ ಭವನಗಳ ನಿರ್ಮಾಣ ಕಾರ್ಯ ಆರಂಭವಾಗಿದೆ.

– ಕೋಟ ಶ್ರೀನಿವಾಸ ಪೂಜಾರಿ, ಸಚಿವ, ಸಮಾಜ ಕಲ್ಯಾಣ ಹಾಗೂ ಹಿಂ. ವರ್ಗಗಳ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.