ಸಾಂಪ್ರದಾಯಿಕ ಮೀನುಗಾರಿಕೆ ಇಲ್ಲದೆ ಕಳೆಯುತ್ತ ಬಂತು ಯಾಂತ್ರೀಕೃತ ಮೀನುಗಾರಿಕೆ ರಜೆ


Team Udayavani, Jul 27, 2019, 5:33 AM IST

2607MLE7

ಮಲ್ಪೆ: ಉಡುಪಿ ಜಿಲ್ಲೆಯ ಕರಾವಳಿಯ ಭಾಗದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಇಲ್ಲದೆ ಈ ವರ್ಷ ಮಳೆಗಾಲದ ಯಾಂತ್ರೀಕೃತ ಮೀನುಗಾರಿಕೆ ರಜಾ ಅವಧಿ ಮುಗಿಯುವ ಲಕ್ಷಣ ಕಂಡು ಬರುತ್ತಿದೆ. ಆ.1ರಿಂದ ಯಾಂತ್ರಿಕ ಮೀನುಗಾರಿಕೆ ಆರಂಭಗೊಳ್ಳಲಿರುವುದರಿಂದ ಮಳೆಗಾಲದ ನಾಡದೋಣಿ ಮೀನುಗಾರಿಕೆಗೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರ ಉಳಿದಿದೆ. ಕರಾವಳಿಯಲ್ಲಿ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕಡಲ ಅಬ್ಬರ ಕೂಡ ಹೆಚ್ಚಾಗಿದೆ. ಪರಿಣಾಮ ಒಂದು ವಾರದಿಂದ ನಾಡದೋಣಿ ಮೀನುಗಾರಿಕೆಯೂ ಸ್ಥಗಿತಗೊಂಡಂತಾಗಿತ್ತು.

ತೂಫಾನ್‌ ಆದರೂ ಮೀನಿಲ್ಲ
ಸಾಮಾನ್ಯವಾಗಿ ಸಮುದ್ರದಲ್ಲಿ ತೂಫಾನ್‌ ಎದ್ದರೆ ಮಾತ್ರ ನಾಡದೋಣಿ ಮೀನುಗಾರರಿಗೆ ಮೀನು ಬೇಟೆಗೆ ಪೂರಕವಾಗಿರುತ್ತದೆ. ಆದರೆ ಈ ಬಾರಿ ತಡವಾಗಿ ತೂಫಾನ್‌ ಆಗಿದ್ದರೂ ಕಡಲಿಗಿಳಿದ ಮೀನುಗಾರರು ಸಮುದ್ರ ಜಾಲಾಡಿದರೂ ಮೀನು ಸಿಗುವ ಲಕ್ಷಣ ಕಂಡು ಬರುತ್ತಿಲ್ಲ.

ಇದೀಗ ಕಳೆದ ಮೂರ್‍ನಾಲ್ಕು ದಿನಗಳಿಂದ ಮೀನು ಗಾರಿಕೆ ತೆರದ ಮೀನುಗಾರರಿಗೆ ಮೀನು ಸಿಗದೇ ಬರಿಗೈಯಲ್ಲಿ ವಾಪಾಸಾಗುತ್ತಿದ್ದಾರೆ. ಒಂದಡೆ ಪ್ರತಿಕೂಲ ವಾತಾವರಣ ದಿಂದಾಗಿ ಕಡಲಿಗಿಳಿಯಲು ಸಾಧ್ಯವಾಗದ ನಾಡದೋಣಿ ಮೀನುಗಾರರಿಗೆ ಇನ್ನೊಂದಡೆ ಮತ್ಸéಕ್ಷಾಮ ಬಾಧಿಸಿದ್ದು ಆರ್ಥಿಕ ಹೊಡೆತವನ್ನು ನೀಡಿದೆ.ಇನ್ನು ಕೆಲವೇ ದಿನಗಳಲ್ಲಿ ಯಾಂತ್ರಿಕ ಮೀನುಗಾರಿಕೆ ಅವಧಿ ಆರಂಭಗೊಳ್ಳಲಿದೆ. ಈ ನಡುವೆ ಗಳಿಕೆಯ ಕನಸು ಕಂಡಿದ್ದ ನಾಡದೋಣಿ ಮೀನುಗಾರರು ನಿರಾಸೆ ಅನುಭವಿಸುತ್ತಿದ್ದಾರೆ.

ಕೋಟ್ಯಂತರ ರೂ. ನಷ್ಟ
ಈ ಬಾರಿ ಮಳೆಗಾಲದ ನಾಡದೋಣಿ ಮೀನುಗಾರಿಕೆ ಹಿನ್ನಡೆಯಾದ್ದರಿಂದ ಮೀನುಗಾರಿಕೆ ಉದ್ಯಮಕ್ಕೆ ಕೋಟ್ಯಂ ತರ ರೂಪಾಯಿ ನಷ್ಟವಾಗಿದೆ. ಕಳೆದ ಬಾರಿ ಇಷ್ಟೊತ್ತಿಗೆ ನಾಡದೋಣಿ ಮೀನುಗಾರರು ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿದ್ದರು. ಮಳೆಗಾಲದಲ್ಲಿ ಸಿಗುವ ಸಿಗಡಿ ಮೀನಿಗೆ ಉತ್ತಮ ಬೆಲೆ ಇರುತ್ತದೆ. ಆದರೆ ಈ ಬಾರಿ ನಾಡದೋಣಿ ಮೀನುಗಾರರು ಇನ್ನೂ ಮೀನು ದೊರಕದಿರುವುದು ಪ್ರತಿಯೊಂದು ದೋಣಿಗಳಿಗೆ ಕನಿಷ್ಟ 1.5ರಿಂದ 2 ಲಕ್ಷ ರೂಪಾಯಿ ನಷ್ಟವನ್ನು ಅನುಭವಿಸಬೇಕಾಗಿದೆ.

ತಾಜಾ ಮೀನಿನ ಕೊರತೆ
ನಾಡದೋಣಿಗಳು ಕಡಲಿಗೆ ಇಳಿಯದ ಕಾರಣ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಕೊರತೆ ಉಂಟಾಗಿದೆ. ಮಂಗಳೂರು ಉಡುಪಿ ಮಾರುಕಟ್ಟೆಗೆ ದೂರದ ತಮಿಳುನಾಡು, ಮಹಾರಾಷ್ಟ್ರದ ರತ್ನಾಗಿರಿ ಯಿಂದ ಮೀನು ಸಂಸ್ಕರಣಾ ಘಟಕಗಳಿಂದ ಮೀನುಗಳನ್ನು ಆಮದು ಮಾಡಿ ಮಾರಾಟ ಮಾಡಲಾಗುತ್ತದೆ.

ಮೀನಿನ
ಛಾಯೆಯೇ ಇಲ್ಲ
ಈ ಸಲ ಇದುವರೆಗೂ ಗಾಳಿ ನೀರು ಮೀನುಗಾರಿಕೆಗೆ ಪೂರಕವಾಗಿ ಇರಲಿಲ್ಲ. ವಾರದ ಹಿಂದೆ ಕಡಲಲ್ಲಿ ಮೀನಿನ ಲಕ್ಷಣ ಕಂಡು ಬಂದಿದ್ದರೂ, ಅದನ್ನು ಹಿಡಿಯುವ ವೇಳೆ ಒಮ್ಮೆಲೆ ತೂಫಾನ್‌ ಆಗಿರುವ ಕಾರಣ ಆ ಮೀನು ವಲಸೆ ಹೋಗಿದೆ. ಇದೀಗ ಎಲ್ಲಿಯೂ ಮೀನಿನ ಛಾಯೆಯೇ ಕಾಣುತ್ತಿಲ್ಲ
– ಕೃಷ್ಣ ಎಸ್‌. ಸುವರ್ಣ, ಪಡುತೋನ್ಸೆ

ಸಂಪಾದನೆ ಇಲ್ಲ
ಜು. 31ರಂದು ಯಾಂತ್ರಿಕೃತ ಮೀನುಗಾರಿಕೆಯ ರಜೆ ಮುಗಿಯಲಿದೆ. ಸಾಂಪ್ರಾಯಿಕ ಮೀನುಗಾರರು ವರ್ಷದ ಎರಡು ತಿಂಗಳು ಒಂದಷ್ಟು ಅಧಿಕ ಸಂಪಾದನೆ ಗಳಿಸಲು ಅವಕಾಶವಿರುವ ಈ ಅವಧಿಯಲ್ಲಿ ಕೆಲವರು ಕಡಲಿಗೆ ಇಳಿದಿದ್ದರೂ ಸಂಪಾದನೆ ಆಗಿಲ್ಲ. ಹೆಚ್ಚಿನವರು ಕಡಲಿಗೆ ಇಳಿದೇ ಇಲ್ಲ.
-ರಮೇಶ್‌ ಕಾಂಚನ್‌, ವಾಸು ಕುಂದರ್‌,
ನಾಡದೋಣಿ ಮೀನುಗಾರರು

-ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.