ಜಿಲ್ಲೆಯ ವಿವಿಧ ಭಾಗಗಳಿಗೆ ಬುಟ್ಟಿ ಪೂರೈಸುತ್ತಿರುವ ಆಂಧ್ರದ ಕುಟುಂಬ

4 ದಶಕಗಳಿಂದ ಬುಟ್ಟಿ ತಯಾರಿ

Team Udayavani, Nov 22, 2019, 5:52 AM IST

ADID+UDUPI

ಉಡುಪಿ: ಪ್ರಸ್ತುತ ಆಧುನಿಕತೆಗೆ ಸಿಲುಕಿ ಗ್ರಾಮೀಣ ಭಾಗದ ಕಸಬುಗಳು ಅವನತಿಯ ಹಾದಿ ತುಳಿಯುತ್ತಿರುವ ಸಂದರ್ಭ ಕಳೆದ 40 ವರ್ಷಗಳಿಂದ ಆಂಧ್ರಪ್ರದೇಶದ ಕುಟುಂಬವೊಂದು ಚಿತ್ತೂರಿನ ಬುಟ್ಟಿಯನ್ನು ಉಡುಪಿ ಸೇರಿದಂತೆ ರಾಜ್ಯದ ವಿವಿಧ ಕಡೆಯಲ್ಲಿ ಮಾರಾಟ ಮಾಡುವ ಮೂಲಕ ಕುಲಕಸುಬು ಉಳಿವಿಗಾಗಿ ಶ್ರಮಿಸುತ್ತಿದೆ.

4 ದಶಕಗಳಿಂದ ಬುಟ್ಟಿ ತಯಾರಿ
ಆಂಧ್ರಪ್ರದೇಶದ ಚಿತ್ತೂರಿನ ಸಿದ್ಧಯ್ಯ ಅವರ ಕುಟುಂಬ ಕಳೆದ ಒಂದು ವಾರದಿಂದ ಆದಿಉಡುಪಿ ಸಮೀಪದಲ್ಲಿ ಬುಟ್ಟಿ ಹೆಣೆಯುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಕಳೆದ 4 ದಶಕಗಳಿಂದ ವರ್ಷದಲ್ಲಿ 2 ತಿಂಗಳು ಉಡುಪಿಯಲ್ಲಿ ಕುಟುಂಬ ಸಮೇತರಾಗಿ ವಾಸ್ತವ್ಯ ಹೂಡಿ ಬುಟ್ಟಿ ಮಾರಾಟ ಮಾಡುತ್ತಿದ್ದಾರೆ. ಒಂದೇ ಕಡೆ ಬುಟ್ಟಿಗಳನ್ನು ಮಾರಾಟ ಮಾಡಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಸಿದ್ಧಯ್ಯ ಅವರ ತಂದೆ ಊರೂರು ತಿರುಗಿ ಬುಟ್ಟಿ ಮಾರಾಟ ಮಾಡಿದ್ದರು. ಅದೇ ಹಾದಿಯನ್ನು ಅವರ ಮಗನೂ ಇದೀಗ ಅನುಸರಿಸುತ್ತಿದ್ದಾರೆ.

ನಿತ್ಯ 70 ಬುಟ್ಟಿ ತಯಾರಿಕೆ
ಸಿದ್ಧಯ್ಯ ಅವರು ಕುಟುಂಬ ಸಮೇತರಾಗಿ ಉಡುಪಿಗೆ ಬಂದು ವಾರ ಕಳೆದಿದೆ. ಪ್ರಸ್ತುತ ಸುಮಾರು 15 ಜನರು ಬುಟ್ಟಿ ಹೆಣೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಆಂಧ್ರಪ್ರದೇಶ ಚಿತ್ತೂರಿನಿಂದ ಬಾಡಿಗೆ ವಾಹನಗಳಲ್ಲಿ ಬುಟ್ಟಿ ಮಾಡಲು ಅಗತ್ಯವಿರುವ ಕಾಜೂರು ಮರದ ಗರಿಯನ್ನು ತಂದಿದ್ದಾರೆ. ದಿನನಿತ್ಯ ಬೆಳಗ್ಗೆಯಿಂದ ಸಂಜೆಯ ವರೆಗೆ ಸುಮಾರು 15ರಿಂದ 20 ದೊಡ್ಡ ಕೋಳಿಗೂಡು, 20ರಿಂದ 30 ಅನ್ನ ಬಾಗುವ ಬುಟ್ಟಿ, 15 ಹೂವಿನ ಬುಟ್ಟಿಗಳನ್ನು ತಯಾರಿಸುತ್ತಾರೆ.

ಉಡುಪಿಯಲ್ಲಿ ಉತ್ತಮ ಸ್ಪಂದನೆ
ದಿನಂಪ್ರತಿ 8ರಿಂದ 10 ಕೋಳಿ ಗೂಡುಗಳು, 15ರಿಂದ 20 ಹೂವಿನ ಬುಟ್ಟಿ ಹಾಗೂ ಅನ್ನದ ಬುಟ್ಟಿಗಳು ಮಾರಾಟವಾಗುತ್ತಿದೆ.

ಸ್ಥಳೀಯರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಇತರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಉಡುಪಿಯಲ್ಲಿ ಬುಟ್ಟಿಗಳ ಮಾರಾಟ ಜೋರಾಗಿದೆ. ಇನ್ನೂ ಎರಡು ತಿಂಗಳು ಉಡುಪಿಯಲ್ಲಿ ಇರುತ್ತೇವೆ ಎಂದು ಬುಟ್ಟಿ ತಯಾರಕ ವೆಂಕಟೇಶ್‌ ಹೇಳುತ್ತಾರೆ.

ದುಬಾರಿ ಬೆಲೆ
ಕಳೆದೆರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಸಕ್ತ ಸಾಲಿನಲ್ಲಿ ಬುಟ್ಟಿ ದರ ದುಬಾರಿಯಾಗಿದೆ. ನಗರದಲ್ಲಿ ಮಾರಾಟ ಮಾಡಲಾಗುತ್ತಿರುವ ದೊಡ್ಡ ಗಾತ್ರದ ಕೋಳಿ ಗೂಡುಗಳಿಗೆ 400-500 ರೂ., ಸಣ್ಣ ಗಾತ್ರದ ಬುಟ್ಟಿ 250-300 ರೂ., ಹೂವಿನ ಬುಟ್ಟಿ 100-200 ರೂ.ಗಳಿಗೆ ಮಾರಾಟವಾಗುತ್ತಿದೆ.

ಚಿತ್ತೂರಿನ ಬುಟ್ಟಿ
ಕಾಜೂರು ಮರದ ಗರಿ ಆಂಧ್ರಪ್ರದೇಶದ ಚಿತ್ತೂರು ಹೊರತು ಪಡಿಸಿದರೆ ಬೇರೆ ಕಡೆ ಸಿಗುವುದಿಲ್ಲ. ಹಳ್ಳದ ಬದಿಯಲ್ಲಿ ಬೆಳೆಯುವ ಈ ಮರದ ಗರಿ ಕಡಿದು ತರುವುದು ಕಷ್ಟ. ಅದಕ್ಕಾಗಿ ಇವರು ಈ ಮರ ಬೆಳೆಯುವ ಸ್ಥಳಗಳಿಗೆ ಕುಟುಂಬ ಸಮೇತ ತೆರಳಿ ವಾಸ್ತವ್ಯವಿದ್ದು, ಮರದ ಗರಿ ಸಂಗ್ರಹಿಸುವ ಕೆಲಸ ಮಾಡುತ್ತಾರೆ.

ಕುಟುಂಬಕ್ಕೆ ಸಹಕಾರಿ
ನಮ್ಮ ಕುಟುಂಬ ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದೆ. ತಂದೆ ಕಾಲದ ಅನಂತರ ಅದರ ಸಂಪೂರ್ಣ ಜವಾಬ್ದಾರಿ ನಾನು ವಹಿಸಿಕೊಂಡಿದ್ದೇನೆ. ಕಳೆದ 40 ವರ್ಷಗಳಿಂದ ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುಟ್ಟಿ ತಯಾರಿಸಿ ಮಾರಾಟ ಮಾಡಿದ್ದೇನೆ. ಜೀವನ ನಿರ್ವಹಣೆಗೆ ಈ ಉದ್ಯೋಗ ನಮ್ಮ ಕುಟುಂಬಕ್ಕೆ ಸಹಕಾರಿಯಾಗಿದೆ.
-ಸಿದ್ಧಯ್ಯ,ಕುಟುಂಬದ ಮುಖ್ಯಸ್ಥ

ಬಹುಕಾಲ ಬಾಳಿಕೆ
ಹಿಂದೆ ಸಂತೆ ಮಾರುಕಟ್ಟೆಗಳಲ್ಲಿ ಕೃಷಿ, ಹೈನುಗಾರಿಕೆ ಬೇಕಾಗುವ ಬುಟ್ಟಿಗಳು ಸಾಕಷ್ಟು ಪ್ರಮಾಣದಲ್ಲಿ ದೊರಕುತ್ತಿದ್ದವು. ಆದರೆ ಇದೀಗ ಕಣ್ಮರೆಯಾಗಿದೆ. ಇಲ್ಲಿ ದೊರಕುವ ಕೋಳಿಗೂಡುಗಳು ಗಟ್ಟಿಮುಟ್ಟಾಗಿದ್ದು, ಬಹುಕಾಲ ಬಾಳಿಕೆ ಬರಲಿದೆ.
-ನವೀನ್‌ ಶೆಟ್ಟಿ,
ಉಡುಪಿ ನಿವಾಸಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.