ಆನೆಕೆರೆ: ಸದ್ಯೋಜಾತ ಪಾರ್ಕ್‌ನಲ್ಲಿ ಕೇಳಿಸುತ್ತಿಲ್ಲ ಮಕ್ಕಳ ಕಲರವ

ಕೋವಿಡ್ ಹಿನ್ನೆಲೆ: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಪಾರ್ಕ್‌

Team Udayavani, Oct 25, 2020, 1:13 PM IST

ಆನೆಕೆರೆ: ಸದ್ಯೋಜಾತ ಪಾರ್ಕ್‌ನಲ್ಲಿ  ಕೇಳಿಸುತ್ತಿಲ್ಲ ಮಕ್ಕಳ ಕಲರವ

ಕಾರ್ಕಳ, ಅ. 24:  ರಜಾ ದಿನಗಳಲ್ಲಿ  ಪ್ರವಾಸಿಗರಿಂದ  ತುಂಬಿರುತ್ತಿದ್ದ ಆನೆಕೆರೆ ಸದ್ಯೋಜಾತ ಪಾರ್ಕ್‌ ಬಿಕೋ ಎನ್ನುತ್ತಿದೆ. ಕೋವಿಡ್  ಮಹಾಮಾರಿಯಿಂದಾಗಿ ಪ್ರವಾಸೋದ್ಯಮ ನೆಲಕಚ್ಚಿದ್ದು, ಪಾರ್ಕ್‌ ನಲ್ಲಿ ಪ್ರವಾಸಿಗರಿಲ್ಲ.

ಹೊಸತನ ಮೈಗೂಡಿಸಿಕೊಂಡಿದ್ದ ಆನೆಕೆರೆ ಪಾರ್ಕ್‌ ಜನತೆಯ ಆಕರ್ಷಕ ಕೇಂದ್ರವಾಗಿ ಮಾರ್ಪಟ್ಟಿತ್ತು. ಕಾರ್ಕಳ ಗೊಮ್ಮಟೇಶ್ವರ  ಬೆಟ್ಟ,  ಪುರಾತನ ಬಸದಿ  ವೀಕ್ಷಣೆ ಸಹಿತ  ಪ್ರಮುಖ ಪ್ರವಾಸಿ ಸ್ಥಳಗಳನ್ನು ಸಂದರ್ಶಿಸಲು ನಾಡಿನ ವಿವಿಧೆಡೆಯಿಂದ ಪ್ರವಾಸಿಗರು ನಗರಕ್ಕೆ  ಬರುತ್ತಿದ್ದರು. ಹೀಗೆ ಬರುತ್ತಿದ್ದ ಪ್ರವಾಸಿಗರೆಲ್ಲ ಆನೆಕೆರೆ ಪಾರ್ಕ್‌ ಸಂದರ್ಶಿಸದೆ ಇರುತ್ತಿರಲಿಲ್ಲ.

25 ಎಕರೆ ವಿಶಾಲವಾದ ಆನೆಕೆರೆಯೂ ಭೈರವರಸರ  ಆಳ್ವಿಕೆಯ ಕಾಲಕ್ಕೆ ಸೇರಿ ದ್ದಾಗಿದೆ. ಇದರ ಮಧ್ಯದಲ್ಲಿ  ಬಸದಿ ಇದ್ದು, ತಟದಲ್ಲಿರುವ ಪಾರ್ಕ್‌ ಆಧುನಿಕ  ಸೌಲಭ್ಯಗಳನ್ನು ಹೊಂದಿದೆ. ಪರಿಣಾಮ ದಿನದಿಂದ ದಿನಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಕೂಡ  ಹೆಚ್ಚಿತ್ತು. ಎಲ್ಲ  ಪ್ರತ್ಯೇಕ ವ್ಯವಸ್ಥೆ  ಕಲ್ಪಿಸಿದ್ದ ಪಾರ್ಕ್‌ ಪ್ರವಾಸಿಗರಿಲ್ಲದೆ  ಈಗ ಖಾಲಿ ಬಿದ್ದಿದೆ.

ಪಾರ್ಕ್‌ ಅಭಿವೃದ್ಧಿ :

ಆರಂಭದಲ್ಲಿ ಪುರಸಭೆ ನಿಧಿಯಿಂದ 15 ಲಕ್ಷ ರೂ. ವ್ಯಯಿಸಿ ಗಾರ್ಡನ್‌, ಆಸನ, ವಾಕಿಂಗ್‌ ಟ್ರ್ಯಾಕ್‌ ಮತ್ತು ಕಾಂಪೌಂಡ್‌ ನಿರ್ಮಾಣದೊಂದಿಗೆ ಪಾರ್ಕ್‌ಗೆ ಪುನರುಜ್ಜೀವನ ಕಲ್ಪಿಸಲಾಗಿತ್ತು. ಬಳಿಕ ಪಾರ್ಕ್‌ನ ಮಧ್ಯೆ ದಾನಿಗಳ ನೆರವಿನಿಂದ ಸುಮಾರು 1.50 ಲಕ್ಷ ರೂ. ವೆಚ್ಚದಲ್ಲಿ ಹುತಾತ್ಮರ ಸ್ಮಾರಕ ನಿರ್ಮಿಸಲಾಗಿತ್ತು. ಬಳಿಕ 13 ಲಕ್ಷ ರೂ. ವೆಚ್ಚದಲ್ಲಿ ಮಕ್ಕಳ ಆಟವಾಡುವ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವ್ಯಾಯಾಮ ಸಲಕರಣೆಗಳನ್ನು ಮಾಡಲಾಗಿದೆ. ಧ್ವನಿವರ್ಧಕ ವ್ಯವಸ್ಥೆಯೂ ಇದೆ.

ಖಾಸಗಿಗೆ ಹೊಣೆ; ಚಿಂತನೆ : ಸೋಂಕು ಹರಡುವ ಮುನ್ನೆಚ್ಚರಿಕೆಯಾಗಿ ಪಾರ್ಕ್‌ನಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಜತೆಗೆ ಪ್ರವಾಸಿಗರೂ ಬರುತ್ತಿಲ್ಲ. ಪುರಸಭೆ ಕಡೆಯಿಂದ ಪಾರ್ಕ್‌ ಅನ್ನು ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ  ನಿರ್ವಹಣೆಯುನ್ನು ಖಾಸಗಿಯವರಿಗೆ ವಹಿಸಿಕೊಡುವ ಬಗ್ಗೆಯೂ ಚಿಂತನೆಗಳಿವೆ. ರೇಖಾ ಜೆ ಶೆಟ್ಟಿ, ಮುಖ್ಯಾಧಿಕಾರಿ ಪುರಸಭೆ, ಕಾರ್ಕಳ

ನಿರ್ಲಕ್ಷ್ಯ ಸಲ್ಲದು : ಪುರಸಭೆ ಅನುದಾನ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ದಾನಿಗಳ ನೆರವಿನಿಂದ ಪಾರ್ಕ್‌ ಅತ್ಯಾಕರ್ಷಕವಾಗಿ ನಿರ್ಮಾಣಗೊಂಡಿದ್ದು ಇದೀಗ ಪ್ರವಾಸಿಗರಿಲ್ಲದೆ  ಕಳೆಗುಂದುತ್ತಿದೆ. ಪಾರ್ಕ್‌ನಲ್ಲಿ  ನಿರ್ವಹಣೆ ಕೊರತೆ ಕಂಡು ಬರುತ್ತಿದೆ.  ನಿರ್ವಹಣೆ ಬಗ್ಗೆ ಗಮನಹರಿಸುವ ಅಗತ್ಯವಿದೆ.ಶುಭದ ರಾವ್‌, ಪುರಸಭೆ ಸದಸ್ಯ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.