ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ


Team Udayavani, Jul 8, 2018, 6:00 AM IST

0707kdpp1.jpg

ಕುಂದಾಪುರ: ಕನಿಷ್ಠ ವೇತನ, ಕನಿಷ್ಠ ಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಶನಿವಾರ ಕುಂದಾಪುರದಲ್ಲಿ ಕಾಲ್ನಡಿಗೆ ಜಾಥಾದ ಮೂಲಕ ಬೃಹತ್‌ ಪ್ರತಿಭಟನೆ ನಡೆಸಿತು. 

ಕುಂದಾಪುರದ ತಾ.ಪಂ. ಕಚೇರಿ ಮುಂಭಾಗದಿಂದ ಆರಂಭವಾದ ಜಾಥಾವು ಶಾಸಿŒ ಸರ್ಕಲ್‌ ಮೂಲಕವಾಗಿ ಮಿನಿವಿಧಾನಸೌಧದವರೆಗೆ ನಡೆಯಿತು. ಅಲ್ಲಿ ಘೋಷಣೆಗಳನ್ನು ಕೂಗಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಬಳಿಕ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್‌ ಅವರಿಗೆ ಮನವಿ ಸಲ್ಲಿಸಿದರು. 

ಮಳೆಯ ನಡುವೆಯೂ ಜಾಥಾ
ಜೋರಾಗಿ ಸುರಿಯುತ್ತಿರುವ ಮಳೆಯ ಮಧ್ಯೆಯೂ ಕರೆ ನೀಡಿದ್ದ ಮುಷ್ಕರದಿಂದ ಹಿಂದೆ ಸರಿಯದೇ ಪ್ರತಿಭಟನೆಯನ್ನು ನಡೆಸಿದರು. ಭಾರೀ ಮಳೆಯ ನಡುವೆಯೂ 13 ವಲಯಗಳ ಸುಮಾರು 500ಕ್ಕೂ ಅಧಿಕ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದ್ದರು. 

ಪ್ರತಿಭಟನೆಯಲ್ಲಿ ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯ ಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡೀಸ್‌, ಕಾರ್ಯದರ್ಶಿ ನಾಗರತ್ನಾ ಹವಾಲ್ದಾರ್‌, ಕೋಶಾಧಿಕಾರಿ ಶೋಭಾ, ಉಪಾಧ್ಯಕ್ಷರಾದ ಗುಲಾಬಿ ಬೆಳ್ವೆ, ಪದ್ಮಾವತಿ ಬಾಳೇಕೆರೆ, ದಾಕ್ಷಿಯಿಣಿ, ಇಂದಿರಾ ಬೈಂದೂರು, ಸವಿತಾ ಬಸ್ರೂರು, ನಾಗರತ್ನಾ ತೆಂಕಬೆಟ್ಟು ಮತ್ತಿತರರು ಪಾಲ್ಗೊಂಡಿದ್ದರು. 

ಸರಕಾರದ ಗಮನಕ್ಕೆ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉತ್ತಮ ಕೆಲಸ ಮಾಡುತ್ತಿದ್ದು, ಅವರ ಕುರಿತು ಒಳ್ಳೆಯ ಭಾವನೆಯಿದೆ. ಇದೇ ಕಾರ್ಯವನ್ನು ಇನ್ನೂ ಕೂಡ ಮುಂದುವರಿಸಿಕೊಂಡು ಹೋಗಿ. ನಿಮ್ಮ ಬೇಡಿಕೆಗಳನ್ನು ಡಿಸಿ ಅವರ ಮೂಲಕ ಸರಕಾರದ ಗಮನಕ್ಕೆ ತರಲಾಗುವುದು.
– ಟಿ. ಭೂಬಾಲನ್‌, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ  

ಬೇಡಿಕೆಗಳೇನು?
– ಕನಿಷ್ಠ ವೇತನ 18 ಸಾವಿರ ರೂ. ಜಾರಿ
– ನಿವೃತ್ತಿಯಾದ, ನಿವೃತ್ತಿಯಾಗಲಿರುವ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಕನಿಷ್ಠ ಮಾಸಿಕ ಪಿಂಚಣಿ 6 ಸಾವಿರ ರೂ. 
– ನೂತನ ಬಾಲವಿಕಾಸ ಸಮಿತಿ ರಚನೆ ಆದೇಶದಲ್ಲಿ ಅಧ್ಯಕ್ಷರ ಅನುಮತಿ ಪಡೆದು ರಜೆ ಮಾಡಬೇಕೆಂಬ ಆದೇಶ ಹಿಂಪಡೆಯುವುದು
– ಕಾರ್ಯಕರ್ತೆಯರಿಗೆ ಮೇಲ್ವಿಚಾರಕರ ಹುದ್ದೆ ನೀಡುವಾಗ ಇಲಾಖೆ ಪರೀಕ್ಷೆ ಮಾಡಿ ನೇಮಿಸಬೇಕು. ಈ ಹಿಂದೆ ಲೋಕ ಸೇವಾ ಆಯೋಗ ನಡೆಸಿದ ಪರೀಕ್ಷೆ ರದ್ದು ಮಾಡಿ, ಸೇವಾ ಹಿರಿತನದ ಆಧಾರದಲ್ಲಿ ಭಡ್ತಿ 
– ಪ್ರತಿ ತಿಂಗಳ ಗೌರವ ಧನ ಹಾಗೂ ಮೊಟ್ಟೆ ಹಣವನ್ನು ಪ್ರತಿ ತಿಂಗಳ 5 ರೊಳಗೆ ನೀಡಬೇಕು
– ಸೇವಾವಧಿ ಆಧಾರದಲ್ಲಿ ಗೌರವಧನ/ ವೇತನ ಹೆಚ್ಚಳ
– ಸಾದಿಲ್ವಾರು ವೆಚ್ಚವನ್ನು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕು
– ಅನಾರೋಗ್ಯದಲ್ಲಿರುವ ನೌಕರರಿಗೆ ಸ್ವಯಂ ನಿವೃತ್ತಿಗೆ ಅವಕಾಶ 
– ಅಂಗನವಾಡಿ ನೌಕರರನ್ನು ಸಿ, ಡಿ ಗ್ರೂಪ್‌ ನೌಕರರನ್ನಾಗಿ ಕೇಂದ್ರ ಸರಕಾರ ಘೋಷಿಸಬೇಕು
– ಬೇಸಿಗೆ ರಜೆ ಅಂಗನವಾಡಿಗೂ ನೀಡಬೇಕು.
– ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ- ಯುಕೆಜಿ ಸರಕಾರದ ವತಿಯಿಂದ ಪ್ರಾರಂಭಿಸಿದರೆ, ಆ ಶಾಲೆಗೆ ಅಂಗನವಾಡಿ ನೌಕರ ಆಯ್ಕೆ ಮಾಡಬೇಕು
– ಮಾತೃಪೂರ್ಣ ಯೋಜನೆ ಹೊರೆಯಾಗುತ್ತಿದ್ದು, ಕೆಲವು ಅಂಗನವಾಡಿಗಳಲ್ಲಿ ಸಹಾಯಕಿಯರಿಲ್ಲದೆ ಸಮಸ್ಯೆ ಯಾಗಿದೆ. ಜಿಲ್ಲೆಯಲ್ಲಿ ಈ ಹಿಂದಿನಂತೆ ಕಿಟ್‌ ರೂಪದಲ್ಲಿ ಕೊಡಲಿ.

ಕಾರ್ಕಳದಲ್ಲೂ  ಪ್ರತಿಭಟನೆ
ಕಾರ್ಕಳ:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯ ಕರ್ತೆಯರು, ಸಹಾಯಕಿಯರ ಸಂಘದ ವತಿಯಿಂದ ಜು. 7ರಂದು ಕಾರ್ಕಳ ತಾ.ಪಂ. ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಯಿತು.

ಕೇಂದ್ರ ಸರಕಾರ ಜಾರಿಗೊಳಿಸಿರುವ ಯೋಜನೆಯಾದ ಪೌಷ್ಟಿಕಾಹಾರವನ್ನು ಪ್ಯಾಕೇಜ್‌ ರೂಪದಲ್ಲಿ ಹಾಗೂ ನೇರ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿದ ಕಾರ್ಯಕರ್ತೆಯರು ರಾಜ್ಯ ಸರಕಾರದ ಮಾತೃಪೂರ್ಣ ಯೋಜನೆಯನ್ನು ಹಿಂದಿನಂತೆಯೇ ಫ‌ಲಾನುಭವಿಗಳಿಗೆ ನೀಡಲು ಆಗ್ರಹಸಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೂ ಮೊದಲು ಕೆಇಬಿಯಿಂದ ಬಂಡೀಮಠ ಬಸ್ಸು ನಿಲ್ದಾಣದ ಮೂಲಕ ತಹಶೀಲ್ದಾರ್‌ ಕಚೇರಿವರೆಗೆ ಜಾಥ ನಡೆಸಿ ದರು. ಕಾರ್ಕಳ ತಾಲೂಕಿನ 9 ವಲಯಗಳ ಸುಮಾರು ಸುಮಾರು 450 ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿ ಭಟನೆಯ ಬಳಿಕ ವಿವಿಧ ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್‌ ಮೂಲಕ ಸರಕಾರಕ್ಕೆ ಸಲ್ಲಿಸಿದರು.

ಸಂಘದ ಅಧ್ಯಕ್ಷೆ ಪದ್ಮಾವತಿ, ಕಾರ್ಯದರ್ಶಿ ಸಾಕಮ್ಮ, ಕೋಶಾಧಿಕಾರಿ ಚಂದ್ರಕಲಾ, ಉಪಾಧ್ಯಕ್ಷೆ ಗೀತಾ, ಪ್ರಮುಖರಾದ ಪ್ರಮೀಳಾ, ಮಮತಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.