ಅಂಗನವಾಡಿ ನೌಕರರ ಮುಷ್ಕರ : ಗ್ರಾಮೀಣ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ
Team Udayavani, Jul 11, 2019, 5:12 AM IST
ತೆಕ್ಕಟ್ಟೆ : ಅಂಗನವಾಡಿ ಕೇಂದ್ರದಲ್ಲಿ ಆಂಗ್ಲ ಮಾಧ್ಯಮ ಶಾಲಾ ಪೂರ್ವ ಶಿಕ್ಷಣ (ಎಲ್ಕೆಜಿ,ಯುಕೆಜಿ)ಕ್ಕೆ ಒತ್ತಾಯಿಸಿ ಜು.10 ರಂದು ರಾಜ್ಯವ್ಯಾಪಿ ಅಂಗನವಾಡಿ ಬಂದ್ ಮಾಡಿ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಮುಷ್ಕರಕ್ಕೆ ಕರೆ ನೀಡಿದರಾದರೂ ಗ್ರಾಮೀಣ ಭಾಗದ ಕುಂಭಾಸಿ, ಕೊರವಡಿ, ತೆಕ್ಕಟ್ಟೆ , ಮಾಲಾಡಿ, ಮಲ್ಯಾಡಿ , ಅಂಗನವಾಡಿ ಕೇಂದ್ರಗಳಲ್ಲಿ ಮುಷ್ಕರಕ್ಕೆ ಬೆಂಬಲ ನೀಡದೆ ಎಂದಿನಂತೆ ಕೇಂದ್ರಗಳು ತೆರೆದಿದ್ದು, ಪುಟಾಣಿಗಳು ಹಾಜರಿರುವ ದೃಶ್ಯ ಕಂಡು ಬಂದಿದೆ.
ಮುಷ್ಕರಕ್ಕೆ ಬೆಂಬಲ
ಬೇಳೂರು ಹಾಗೂ ಕೊರ್ಗಿ ಗ್ರಾ.ಪಂ. ವ್ಯಾಪ್ತಿಯ ಕೊರ್ಗಿ, ಹೊಸಮಠ, ಬೇಳೂರು, ಬೇಳೂರು ದೇವಸ್ಥಾನಬೆಟ್ಟು, ಬಡಾಬೆಟ್ಟು, ಗುಳ್ಳಾಡಿ, ಮೊಗೆಬೆಟ್ಟು ಭಾಗದಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮುಷ್ಕರದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಬೀಗ ಹಾಕಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಮಿಶ್ರ ಪ್ರತಿಕ್ರಿಯೆಗೆ ಕಾರಣ
ಕುಂದಾಪುರ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘಟನೆಗಳು ಎರಡೆರಡು ಇರುವ ಕಾರಣದಿಂದಾಗಿ ತಾಲೂಕಿನ ಕೆಲವು ಭಾಗಗಳಲ್ಲಿ ಮುಷ್ಕರದ ಬಗ್ಗೆ ಮಾಹಿತಿಯೇ ಇಲ್ಲ ಎನ್ನುವ ಮಾತು ಕೇಳಿ ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ