ಮಕ್ಕಳ ಎದುರಲ್ಲಿ ಪ್ರಾಣಿ ವಧೆ ಸರಿಯಲ್ಲ: ಪೇಜಾವರ ಶ್ರೀ

ಎಲ್ಲರ ಮುಂದೆ ಮಾಂಸ ನೇತು ಹಾಕುವುದು ಸರಿಯಲ್ಲ....

Team Udayavani, Jan 11, 2023, 5:06 PM IST

1-asdasd

ಉಡುಪಿ: ಸಮಾಜದಲ್ಲಿ ಹಿಂಸೆ ಮತ್ತು ಕ್ರೌರ್ಯ ಇರಬಾರದು. ಮಕ್ಕಳ ದೇಶ, ಸಮಾಜದ ಭವಿಷ್ಯ ಎಂಬುದನ್ನು ಯಾರೂ ಮರೆಯಬಾರದು. ಹೀಗಾಗಿ ಮಕ್ಕಳ ಎದುರಿನಲ್ಲಿ ಪ್ರಾಣಿವಧೆ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಶಿಕ್ಷಣದ ಮೌಲ್ಯವರ್ಧನೆ ಸಹಿತ ವಿವಿಧ ವಿಷಯಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದಿದ್ದ ಧಾರ್ಮಿಕ ಮುಖಂಡರ ದುಂಡು ಮೇಜಿನ ಸಭೆಯ ಕುರಿತು ಬುಧವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಸಮಾಜ ಬಯಸದ್ದನ್ನು ಮಕ್ಕಳಿಂದ ದೂರ ಇಡಬೇಕು ಎಂದರು.

ಕ್ರೌರ್ಯ ಮಕ್ಕಳ ಕಣ್ಣಿಗೆ ಯಾವತ್ತು ಬೀಳಬಾರದು. ಮಾಂಸಾಹಾರ ಮಾಡುವುದು ತಪ್ಪಲ್ಲ. ಆದರೆ, ಮಕ್ಕಳ ಕಣ್ಮುಂದೆ ಪ್ರಾಣಿ ವಧೆ ಮಾಡುವುದು ಸರಿಯಲ್ಲ. ಪ್ರಾಣಿ ಚೀರಾಡುವುದು, ನರಳಾಡುವುದನ್ನು ಮಕ್ಕಳಿಗೆ ತೋರಿಸಬಾರದು. ಚೀರಾಟ, ದುಃಖ, ಆಕ್ರಂದನ ಮಕ್ಕಳ ಮೇಲೆ ತುಂಬ ದುಷ್ಪರಿಣಾಮ ಬೀರುತ್ತದೆ. ಮಾಂಸದಂಗಡಿ ಇಡುವುದೂ ತಪ್ಪಲ್ಲ, ವ್ಯವಹಾರ ಮಾಡುವುದು ತಪ್ಪಲ್ಲ. ಆದರೆ, ಎಲ್ಲರ ಮುಂದೆ ಮಾಂಸ ನೇತು ಹಾಕುವುದು ಸರಿಯಲ್ಲ. ಮಾಂಸವನ್ನು ನೇತು ಹಾಕದೆ ಒಳಗೆ ಇಟ್ಟುಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಮಕ್ಕಳಿಗೆ ಸಸ್ಯಾಹಾರ ಮತ್ತು ಮಾಂಸಾಹಾರ ಯಾವುದು ಬೇಕಾದರೂ ನೀಡಿ. ಆದರೆ ಅದು ಸಾತ್ವಿಕ ಆಹಾರವಾಗಿದ್ದರೆ ಒಳ್ಳೆಯದು. ಆಹಾರ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಆಯುರ್ವೇದ ಶಾಸ್ತ್ರ ಇದನ್ನೇ ಹೇಳುತ್ತದೆ. ಮನಸ್ಸು ತಾಮಸ ಆಗುವ ಯಾವುದೇ ಆಹಾರ ಮಕ್ಕಳಿಗೆ ಕೊಡುವುದು ಸರಿಯಲ್ಲ. ಮಕ್ಕಳು ಯಾವ ಆಹಾರವನ್ನು ತಿನ್ನಬೇಕೆಂದು ಹಿರಿಯರು ನಿರ್ಧರಿಸಬೇಕು. ಹಿರಿಯರು ಯಾವ ತೀರ್ಮಾನ ಮಾಡಿದರೂ ಅದಕ್ಕೆ ನಮ್ಮ ವಿರೋಧ ಇಲ್ಲ. ಸಮಾಜದಲ್ಲಿ ಕ್ರೌರ್ಯ, ಹಿಂಸೆ ಬೇಡವಾದರೆ ಅದಕ್ಕೆ ಅನುಗುಣವಾದ ಆಹಾರ ನೀಡಬೇಕು. ಕ್ರೌರ್ಯ ಹಿಂಸೆ ಮಕ್ಕಳ ಮೇಲೆ ಪರಿಣಾಮ ಬೀರದ ಹಾಗೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿಯಾಗಿದೆ ಎಂದರು.

ಶಾಲೆಯಲ್ಲಿ ಪುರಾಣ ಪಾತ್ರಗಳ ಮೂಲಕ ಮಕ್ಕಳಲ್ಲಿ ಮೌಲ್ಯ ತುಂಬಬೇಕು. ಮಕ್ಕಳಲ್ಲಿ ಆದರ್ಶ ತುಂಬುವುದು ಬಹು ಮುಖ್ಯ. ರಾಮಾಯಣ, ಮಹಾಭಾರತದ ಪ್ರಸಂಗಳನ್ನು ಮಕ್ಕಳಿಗೆ ತಿಳಿಸಬೇಕು. ಇವುಗಳನ್ನು ಶಾಲೆಯಲ್ಲಿ ಮಕ್ಕಳಿಗೆ ಕಲಿಸಲು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಸಭೆಯಲ್ಲಿ ಸಲಹೆ ನೀಡಿದ್ದೇವೆ. ಮಕ್ಕಳ ನೈತಿಕ ಮೌಲ್ಯ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಅಭಿಪ್ರಾಯಗಳನ್ನು ಕೊಟ್ಟಿದ್ದಾರೆ. ಯಾರಲ್ಲೂ ಅಭಿಪ್ರಾಯ ಭೇದ ಬಂದಿಲ್ಲ ಎಂದರು.

ಮುಕ್ತ ಮತ್ತು ಸ್ವತಂತ್ರವಾಗಿ ಅಭಿಪ್ರಾಯಗಳು ಮಂಡನೆ ಆಗಿವೆ. ಧರ್ಮ ಗುರುಗಳು ನೀಡಿದಂತಹ ವಿಚಾರದಲ್ಲಿ ಯಾರೂ ಪ್ರತಿರೋಧ ಮಾಡಿಲ್ಲ. ಮುಸ್ಲಿಂ, ಕ್ರೈಸ್ತ, ಹಿಂದೂ ಸಮಾಜದ ಎಲ್ಲ ಪಂಗಡ, ಸಮಾಜದ ಸಾಧು- ಸಂತರು ಭಾಗವಹಿಸಿದ್ದರು. ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು ಎಂಬುದೇ ಎಲ್ಲರ ಒಟ್ಟಾರೆ ಅಭಿಪ್ರಾಯವಾಗಿತ್ತು ಎಂದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.