ಶಬರಿಮಲೈಯಲ್ಲಿ ಅಣ್ಣಾಮಲೈ; ಅಲ್ಲೂ ಸೆಲ್ಫಿ ಅಭಿಮಾನಿಗಳು!


Team Udayavani, Jun 18, 2019, 9:49 AM IST

ANNAMALAI

ಕಾಪು: ಕುಟುಂಬದೊಂದಿಗೆ ಕಾಲಕಳೆಯುವ ಇಚ್ಛೆಯೊಂದಿಗೆ ಪೊಲೀಸ್‌ ಹುದ್ದೆಗೆ ರಾಜೀನಾಮೆ ನೀಡಿರುವ ಕರುನಾಡ ಸಿಂಗಂ ಖ್ಯಾತಿಯ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ರವಿವಾರ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ.

ಅದೇ ಸಂದರ್ಭ ಅಲ್ಲಿದ್ದ ಉಡುಪಿ, ದಕ್ಷಿಣ ಕನ್ನಡ ಮೂಲದ ಅಯ್ಯಪ್ಪ ಭಕ್ತರು ಅಣ್ಣಾಮಲೈ ಅವರನ್ನು ಗುರುತುಹಿಡಿದು ಅವರೊಂದಿಗೆ ಸೆಲ್ಫಿ ತೆಗೆದು ಸಂಭ್ರಮಿಸಿದರು. ತಮಿಳುನಾಡಿನಿಂದ ಬಂದ ಭಕ್ತರೂ ಅಣ್ಣಾಮಲೈ ಹೆಸರು ಕೇಳಿದಾಗ ಅವರೂ ಸೆಲ್ಫಿ ತೆಗೆಸಿಕೊಂಡರು.

ಅಣ್ಣಾಮಲೈ ಅವರು ಟೀ ಶರ್ಟ್‌, ಕಪ್ಪು ಲುಂಗಿ ಧರಿಸಿ ಹೆಗಲಿಗೊಂದು ಕಪ್ಪು ಶಾಲು ಹಾಕಿಕೊಂಡು ಸಂಕ್ರಾಂತಿಯ ದಿನ ಮಣಿಕಂಠನ ದರ್ಶನ ಮಾಡಲು ಶಬರಿಮಲೆಗೆ ಬಂದಿದ್ದರು. ಶಬರಿಮಲೆಯ ಸಂಪ್ರದಾಯದಂತೆ ಹದಿನೆಂಟು ಮೆಟ್ಟಿಲನ್ನೇರಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಅವರು ಬೆಟ್ಟ ಹತ್ತಿ, ಇಳಿಯುವ ಸಂದರ್ಭದಲ್ಲೂ ಕರಾವಳಿಯ ಭಕ್ತರ ಜತೆಗೆ ಮುಕ್ತವಾಗಿ ಮಾತುಕತೆ ನಡೆಸಿದರು.

ಸಿಂಗಂ ಜತೆ ಕೈ ಕುಲುಕಿ ಮಾತನಾಡಿದಾಗ ಪೊಲೀಸ್‌ ವೃತ್ತಿಗೆ ಗುಡ್‌ ಬೈ ಹೇಳಿರುವುದು ಸರಿಯಲ್ಲ ಎಂಬ ಮಾತನ್ನೂ ಕೆಲವರು ಹೇಳಿದರೆಂದು ತಿಳಿದು ಬಂದಿದೆ. ಅಣ್ಣಾಮಲೈ ಅವರು ಶಬರಿಮಲೆಗೆ ಭೇಟಿ ನೀಡಿರುವ ವಿಚಾರ ತಿಳಿದು ಸ್ಥಳೀಯ ಪೊಲೀಸ್‌ ವರಿಷ್ಠಾಧಿಕಾರಿಗಳು ಶಬರಿಮಲೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಹಲವು ವರ್ಷಗಳ ಕನಸು ನನಸು
ಹಲವು ಸಮಯಗಳ ಹಿಂದೆಯೇ ಶಬರಿಮಲೆಗೆ ತೆರಳುವ ಸಂಕಲ್ಪ ಮಾಡಿದ್ದೆ. ಆದರೆ ಕೆಲಸದ ಒತ್ತಡದಿಂದ ಇದು ಸಾಧ್ಯವಾಗಿರಲಿಲ್ಲ. ಈಗ ಹುದ್ದೆಗೆ ರಾಜೀನಾಮೆ ನೀಡಿರುವುದರಿಂದ ಅದು ಸ್ವೀಕೃತವಾಗಲು ಒಂದೆರಡು ವಾರ ಬೇಕು. ಈಗ ದೇವರ ದರ್ಶನ ಪಡೆಯಲು ಅವಕಾಶ ಸಿಕ್ಕಿದೆ. ಈ ಮೂಲಕ ಹಲವು ವರ್ಷಗಳ ಕನಸು ನನಸಾಗಿದೆ. ಅಯ್ಯಪ್ಪನ ದರ್ಶನದಿಂದ ಹೊಸ ಚೈತನ್ಯ ಸಿಕ್ಕಿದಂತಾಗಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಮುಂದೇನು ? ಮತ್ತೆ ತಿಳಿಸುವೆ
“ಶಬರಿಮಲೆಯಲ್ಲಿ ಉಡುಪಿಯ ಸ್ನೇಹಿತರು ಸಿಕ್ಕಿರುವುದು ಖುಷಿ ಕೊಟ್ಟಿದೆ. ಸಾಮಾನ್ಯ ವ್ಯಕ್ತಿಯಾಗಿ ಉಡುಪಿಗೆ ಬರಬೇಕೆಂದಿದ್ದೇನೆ. ಈಗ ನಿವೃತ್ತಿಯನ್ನು ಎಂಜಾಯ್‌ ಮಾಡುತ್ತಿದ್ದೇನೆ. ಮುಂದೇನು ಎನ್ನುವ ಬಗ್ಗೆ ಈವರೆಗೆ ಯೋಚನೆ ಮಾಡಿಲ್ಲ. ಮುಂದೆ ಈ ಬಗ್ಗೆ ತಿಳಿಸುತ್ತೇನೆ’ ಅಣ್ಣಾಮಲೈ ಮಾಧ್ಯಮ ಮಿತ್ರರ ಬಳಿ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.