ಉಡುಪಿಯಲ್ಲೇ ‘ಸಿಂಗಂ’ ಬಿರುದು ಗಿಟ್ಟಿಸಿಕೊಂಡಿದ್ದ ಅಣ್ಣಾಮಲೈ!


Team Udayavani, May 30, 2019, 6:09 AM IST

annamalai

ಉಡುಪಿ: ಅಣ್ಣಾಮಲೈ ಕಾರ್ಕಳದಲ್ಲಿ ಎಎಸ್‌ಪಿಯಾಗಿ ಸೇವೆ ಆರಂಭಿಸಿದಾಗಲೇ ತನ್ನ ಕಾರ್ಯ ವೈಖರಿಯಿಂದ ಜಿಲ್ಲೆಯ, ಅದರಲ್ಲೂ ಮುಖ್ಯವಾಗಿ ಯುವಜನತೆಯ ಗಮನ ಸೆಳೆದಿದ್ದರು. ನೇರಾ ನೇರ ಮಾತು, ಖಡಕ್‌ ನಿರ್ಧಾರದಿಂದ ಜನರಿಗೆ ಹತ್ತಿರವಾಗುತ್ತಾ ಹೋದರು. ಬೈಂದೂರಿನ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ಭೇದಿಸಿ ಜನತೆಯ ವಿಶ್ವಾಸ ಗಳಿಸಿದ್ದರು.

ರೌಡಿಗಳಿಗೆ ಸಿಂಹಸ್ವಪ್ನ

ಉಡುಪಿ ಎಸ್‌ಪಿ ಆದ ಅನಂತರ ಮಣಿಪಾಲ, ಉಡುಪಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೌಡಿಗಳನ್ನು ಚಟುವಟಿಕೆಯನ್ನು ನಿಯಂತ್ರಿಸಿದ್ದರು. ಬಾರ್‌ಗಳು ತಡರಾತ್ರಿಯೂ ತೆರೆದಿರಲು ಅವಕಾಶ ನೀಡಿರಲಿಲ್ಲ. ಮಟ್ಕಾ ದೊರೆಗಳಿಗೂ ಆತಂಕ ಹುಟ್ಟಿಸಿದ್ದರು.

ವಿದ್ಯಾರ್ಥಿಗಳ ಕಣ್ಮಣಿ

ಹೆಲ್ಮೆಟ್ ಧಾರಣೆ ಸೇರಿದಂತೆ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಂಡಿದ್ದ ಅಣ್ಣಾಮಲೈ ಅನೇಕ ಬಾರಿ ತಾನೇ ಸ್ವತಃ ರಸ್ತೆಬದಿ ನಿಂತು ನಿಯಮ ಉಲ್ಲಂಘಿಸುವವರ ವಿರುದ್ಧ ಕೇಸು ದಾಖಲಿಸಿಕೊಳ್ಳುತ್ತಿದ್ದರು. ವಿಶೇಷವಾಗಿ ಮಣಿಪಾಲ ಭಾಗದಲ್ಲಿ ವಿದ್ಯಾರ್ಥಿಗಳು ಸಂಚಾರ ನಿಯಮ ಪಾಲಿಸುವಂತೆ ಹೆಚ್ಚಿನ ನಿಗಾ ವಹಿಸಿದ್ದರು. ಒಂದೆಡೆ ಕಾನೂನು ಕ್ರಮ, ಇನ್ನೊಂದೆಡೆ ಮನವೊಲಿಕೆ ಅವರ ವಿಶೇಷತೆಯಾಗಿತ್ತು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಸೇರಿಸಿ ಎಸ್‌ಪಿ ಕಚೇರಿಯಂದಲೇ ಹೆಲ್ಮೆಟ್ ಜಾಥಾ ಜಾಗೃತಿ ಏರ್ಪಡಿಸಿದ್ದರು. ಡ್ರಗ್ಸ್‌ ವಿರುದ್ಧದ ಅಭಿಯಾನ ಆಯೋಜಿಸಿದ್ದರು. ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯ ಯುವಜನತೆ ಅಣ್ಣಾಮಲೈ ಜತೆ ಸೆಲ್ಫಿಗಾಗಿ ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಚಿಕ್ಕಮಗಳೂರಿಗೆ ವರ್ಗಾವಣೆಗೊಂಡ ಅನಂತರವೂ ಉಡುಪಿಯಲ್ಲಿ ನಡೆದ ಬೃಹತ್‌ ಡ್ರಗ್ಸ್‌ ವಿರುದ್ಧದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಣ್ಣಾಮಲೈ ಆಗಮಿಸಿದ್ದರು. ಉಡುಪಿಯಲ್ಲಿ ಸೈಕ್ಲಿಂಗ್‌ ಕ್ರೇಜ್‌ ಹೆಚ್ಚಿಸಿದ ಹೆಗ್ಗಳಿಕೆಯೂ ಅಣ್ಣಾಮಲೈಗೆ ಸಲ್ಲುತ್ತದೆ. ಸಂಚಾರ ದಟ್ಟಣೆ ಅಥವಾ ವ್ಯತ್ಯಯ ಉಂಟಾದಾಗ ಸ್ವತಃ ತಾನೇ ಲಾಠಿ ಹಿಡಿದು ನಿಂತು ಸಾರ್ವಜನಿಕರ ಮನಗೆದ್ದಿದ್ದರು.

ಮಾರುವೇಷ ಕಾರ್ಯಾಚರಣೆ?

ಮಹಿಳೆಯರಿಗೆ ಉಪಟಳ ನೀಡುವವರ ವಿರುದ್ಧ, ಡ್ರಗ್ಸ್‌ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಲು ಅಣ್ಣಾಮಲೈ ಅವರು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ಮಾತು ಸಾರ್ವಜನಿಕರಲ್ಲಿ ಸಾಮಾನ್ಯವಾಗಿತ್ತು. ಆದರೆ ಈ ಬಗ್ಗೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿರಲಿಲ್ಲ.

ಅಣ್ಣಾಮಲೈ ಅವರ ಕಾರ್ಯದಕ್ಷತೆ, ಜನಸಂಪರ್ಕ, ತನ್ನ ಅಧೀನ ಅಧಿಕಾರಿ, ಸಿಬಂದಿ ಕ್ಷೇಮ ಪಾಲನೆ, ಸಾರ್ವಜನಿಕರ ಹಿತರಕ್ಷಣೆ ಇವೆಲ್ಲವುಗಳ ಹಿನ್ನೆಲೆಯಲ್ಲಿ ಉಡುಪಿಯ ಯುವಜನತೆ ‘ಸಿಂಗಂ’ ಎಂದೇ ಸಂಬೋಧಿಸಲಾರಂಭಿಸಿದರು. ಇದು ಅನಂತರ ಖಾಯಂ ಆಯಿತು!.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.