ಜಾಗರೂಕತೆ, ಮುನ್ನೆಚ್ಚರಿಕೆ ಕ್ರಮಗಳಿಂದ ಅಪರಾಧಗಳಿಗೆ ತಡೆ
Team Udayavani, Dec 5, 2018, 1:05 AM IST
ಪಡುಬಿದ್ರಿ: ನಮ್ಮ ಜಾಗರೂಕತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳಿಂದ ಅಪರಾಧಗಳನ್ನು ತಡೆಗಟ್ಟಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣಾ ಪಿಎಸ್ಐ ಸತೀಶ್ ಎಂ. ಪಿ. ಹೇಳಿದರು. ಅವರು ಡಿ. 4ರಂದು ಹೆಜಮಾಡಿಯ ಪ.ಪೂ. ಕಾಲೇಜಿನಲ್ಲಿ ಪಡುಬಿದ್ರಿ ರೋಟರಿ ಹಾಗೂ ಜೇಸಿಐ ಪಡುಬಿದ್ರಿ ಸಹ ಯೋಗದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾಜದಲ್ಲಿ ವಿದ್ಯಾರ್ಥಿಗಳು, ಯುವಜನತೆ ಪಾತ್ರ, ಅಪರಾಧ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾಲುದಾರಿಕೆ ವಿಚಾರದಲ್ಲಿ ಮಾತನಾಡಿ ಮಾಹಿತಿಗಳನ್ನು ನೀಡಿದರು.
ದಾರಿ ತಪ್ಪದಿರಿ
ಭಾರತದಲ್ಲಿ ಯುವ ಜನರಿಗೆ ಉತ್ತಮ ಭವಿಷ್ಯವಿದೆ. ಯುವ ಜನತೆ, ಯುವ ಶಕ್ತಿ ಭಾರತದ ಅಭಿವೃದ್ಧಿಗಾಗಿ ಬಳಕೆಯಾಗಬೇಕು. ಆದರೆ ಈ ವಯೋಮಾನದಲ್ಲಿ ಯುವಕರು ದಾರಿ ತಪ್ಪುತ್ತಿದ್ದಾರೆ. ಸಮಸ್ಯೆಗಳಿಂದ ತೊಳಲಾಡುತ್ತಿದ್ದಾರೆ. ಈ ಸಂಕುಚಿತ ಸಂದರ್ಭಗಳಲ್ಲಿ ಪೊಲೀಸರ ನೆರವನ್ನು ಪಡೆಯಿರಿ. ಉತ್ತಮ ಪ್ರಜೆಗಳಾಗಿರಿ ಎಂದು ವಿದ್ಯಾರ್ಥಿಗಳಿಗೆ ಸತೀಶ್ ಕರೆ ನೀಡಿದರು.
ಸಭೆಯನ್ನು ಉದ್ದೇಶಿಸಿ ಸರಕಾರಿ ಪ. ಪೂ. ಕಾಲೇಜು ಪ್ರಾಂಶುಪಾಲ ಈಶ್ವರ್ ಎ. ಮಾತನಾಡಿದರು. ವೇದಿಕೆಯಲ್ಲಿ ಪಡುಬಿದ್ರಿ ಠಾಣಾ ಎಎಸ್ಐ ದಿವಾಕರ ಸುವರ್ಣ, ಸರಕಾರಿ ಪ್ರೌಢಶಾಲೆ, ಹೆಜಮಾಡಿಯ ಮುಖ್ಯ ಶಿಕ್ಷಕಿ ಸವಿತಾ ನಾಯಕ್ ಉಪಸ್ಥಿತರಿದ್ದರು. ಜೇಸಿಐ ಪಡುಬಿದ್ರಿಯ ಅಧ್ಯಕ್ಷ ಅನಿಲ್ ಶೆಟ್ಟಿ ಸ್ವಾಗತಿಸಿದರು. ಪತ್ರಕರ್ತ ಹರೀಶ್ ಕುಮಾರ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಪಡುಬಿದ್ರಿಯ ಅಧ್ಯಕ್ಷ ಗಣೇಶ್ ಆಚಾರ್ಯ ಎರ್ಮಾಳು ವಂದಿಸಿದರು.
ವಿದ್ಯಾರ್ಥಿ ದೆಸೆಯಲ್ಲಿ ಮೊಬೈಲ್ ಬೇಡ
ಮಕ್ಕಳು ಮೊಬೈಲ್ ಚಾಳಿಯಿಂದ ದೂರವಿರಬೇಕು. ಮೊಬೈಲ್ ಕೊಟ್ಟು ಮಕ್ಕಳಿಗೆ ಊಟ ನೀಡುವುದನ್ನು ಪೋಷಕರೂ ಬಿಟ್ಟು ಬಿಡಬೇಕು. ಇಂದಿನ ಮಕ್ಕಳು ಟಿವಿ, ಮೊಬೈಲ್ಗಳೊಂದಿಗೇ ಆಟವಾಡುತ್ತಾರಲ್ಲದೇ ಅಂಗಳದಲ್ಲಿ ಆಟವಾಡುವುದನ್ನೇ ಬಿಟ್ಟಿರುವಂತಿದೆ ಎಂದೂ ಬೆಟ್ಟು ಮಾಡಿದ ಪಿಎಸ್ಐ ಸತೀಶ್ ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ನಿಮ್ಮೊಂದಿಗಿರದಿದ್ದರೆ ಉತ್ತಮ ಭವಿಷ್ಯ ನಿಮ್ಮದಾಗಲಿದೆ.
– ಸತೀಶ್ ಎಂ. ಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ