ಎನ್‌ಇಟಿ ಜಾರಿಯಿಂದ ಸೇವಾನಿರತ ಶಿಕ್ಷಕರಿಗೆ ಹಿಂಭಡ್ತಿ ಆತಂಕ

7ನೇ ತರಗತಿವರೆಗೆ ಬೋಧಿಸುತ್ತಿರುವವರು 5ನೇ ತರಗತಿವರೆಗೆ ಸೀಮಿತವಾಗುವ ಭೀತಿ

Team Udayavani, Mar 31, 2022, 7:00 AM IST

ಎನ್‌ಇಟಿ ಜಾರಿಯಿಂದ ಸೇವಾನಿರತ ಶಿಕ್ಷಕರಿಗೆ ಹಿಂಭಡ್ತಿ ಆತಂಕ

ಸಾಂದರ್ಭಿಕ ಚಿತ್ರ.

ಉಡುಪಿ: ಸರಕಾರಿ ಶಾಲಾ ಶಿಕ್ಷಕರಾಗಿ ಹಲವು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಈಗ ಹಿಂಭಡ್ತಿಯ ಆತಂಕ ಎದುರಾಗಿದೆ.

1ರಿಂದ 7ನೇ ತರಗತಿಯವರೆಗೆ ಬೋಧಿಸುತ್ತಿದ್ದ ಶಿಕ್ಷಕರು ಇನ್ನು ಮುಂದೆ 5ನೇ ತರಗತಿಯವರೆಗೆ ಮಾತ್ರ ಬೋಧಿಸಬೇಕಾಗುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ 7ನೇ ತರಗತಿಯವರೆಗೆ ಬೋಧಿಸುತ್ತಿರುವ ಶಿಕ್ಷಕರಿಗೆ ಮುಂಭಡ್ತಿ ಇಲ್ಲದೆ ಹೊಸ ನೇಮಕಾತಿಗೆ ಸರಕಾರ ಮುಂದಾಗಿರುವುದು ಶಿಕ್ಷಕರಲ್ಲಿ ಅಸಮಾಧಾನ ಮೂಡಿಸಿದೆ.
15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಸೇವೆಯಲ್ಲಿ ಇರುವವರಲ್ಲಿ ಅನೇಕ ಪದವೀಧರರಿದ್ದರೂ ಅವ ರಿಗೆ ಪದೋ ನ್ನತಿಗೆ ಪರೀಕ್ಷೆ ನಡೆಸುತ್ತಿಲ್ಲ. ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನವಾಗುತ್ತಿರುವ ಹಿನ್ನೆಲೆಯಲ್ಲಿ ಇವರನ್ನು 1ರಿಂದ 7ರ ಬದಲಿಗೆ ಪೂರ್ವ ಪ್ರಾಥಮಿಕ(ಎಲ್‌ಕೆಜಿ, ಯುಕೆಜಿ)ದಿಂದ 5ನೇ ತರಗತಿಗೆ ಸೀಮಿತಗೊಳಿಸಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗುತ್ತಿದೆ.

ಸರಕಾರಿ ಶಾಲೆಯಲ್ಲಿ ಪದವೀಧರ ಪ್ರತಿಭಾನ್ವಿತ ಶಿಕ್ಷಕರ ಕೊರತೆಯಿದೆ. ಈ ಹಿಂದೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾದಾಗಲೂ 3,200 ಶಿಕ್ಷಕರನ್ನು ಮಾತ್ರ ಭರ್ತಿ ಮಾಡಿಕೊಳ್ಳಲು ಸಾಧ್ಯವಾಗಿತ್ತು. ಸೇವಾ ನಿರತರಿಗೆ ಮೊದಲ ಆದ್ಯತೆಯಲ್ಲಿ ಮುಂಭಡ್ತಿ ನೀಡಬೇಕು ಎಂಬುದು ಶಿಕ್ಷಕರ ಆಗ್ರಹವಾಗಿದೆ.

ಮುಕ್ತ ಸ್ಪರ್ಧೆ ಮಾಡಬೇಕು
ಪದವೀಧರ ಶಿಕ್ಷಕರ ಹುದ್ದೆಗೆ ಸರಕಾರ ನಡೆಸ ಲಿರುವ ನೇಮಕಾತಿಯಲ್ಲಿ ಸದ್ಯ ಸೇವೆಯಲ್ಲಿರುವವರು ಅರ್ಜಿ ಸಲ್ಲಿಸಿ ಪರೀಕ್ಷೆ ಬರೆಯ ಬಹುದು. ಆದರೆ ಅವರನ್ನು ಸೇವಾ ನಿರತರ ಶಿಕ್ಷಕ ರಾಗಿ ಪರಿಗಣಿಸುವುದಿಲ್ಲ. ಬದಲಾಗಿ ಹೊಸ ಅಭ್ಯರ್ಥಿ ಯಾಗಿಯೇ ಪರಿಗಣಿಸುತ್ತೇವೆ. ಸೇವಾ ನಿರತರ ಶಿಕ್ಷಕರಿಗೆ ಸದ್ಯ ಪದೋನ್ನತಿ ಪರೀಕ್ಷೆ ನಡೆಸುವ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ| ಆರ್‌. ವಿಶಾಲ್‌ ತಿಳಿಸಿದ್ದಾರೆ.

ಪದವಿಯಾಗಿದ್ದರೂ ಪದವೀಧರ ಶಿಕ್ಷಕರಲ್ಲ !
ಸರಕಾರಿ ಶಾಲೆಯಲ್ಲಿ 5 ವರ್ಷಕ್ಕಿಂತಲೂ ಹೆಚ್ಚುಕಾಲ ಸೇವೆ ಸಲ್ಲಿಸುತ್ತಾ ಬಂದಿರುವ ಪದವಿ ಹಾಗೂ ಬಿ.ಇಡಿ. ಮಾಡಿರುವವರಿಗೆ ಪದವೀಧರ ಶಿಕ್ಷಕರ ಪಟ್ಟ ಸಿಕ್ಕಿಲ್ಲ. ಇದಕ್ಕೆ ಶಿಕ್ಷಕರಲ್ಲಿರುವ ಕೆಲವು ಗೊಂದಲಗಳೂ ಕಾರಣವಾಗಿವೆ. ಹಲವು ಶಿಕ್ಷಕರು (ಈಗಾಗಲೇ ಬಿ.ಇಡಿ. ಮಾಡಿಕೊಂಡಿರುವವರು) ಪದೋನ್ನತಿಗೆ ನೇರ ನೇಮಕಾತಿ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಡಿ.ಇಡಿ. ಮಾಡಿಕೊಂಡಿರುವ (ಬಿ.ಇಡಿ. ಆದವರೂ ಇದ್ದಾರೆ) ಕೆಲವು ಹಿರಿಯ ಶಿಕ್ಷಕರು ಪದವೀಧರ ಶಿಕ್ಷಕರಾಗಿ ಪದೋನ್ನತಿಗೆ ಪರೀಕ್ಷೆ ನಡೆಸುವುದು ಬೇಡ, ನೇರ ಸೇವಾಹಿರಿತನದ ಆಧಾರದಲ್ಲಿ ಭಡ್ತಿ ನೀಡಬೇಕು ಎನ್ನುವ ವಾದವನ್ನು ಇಲಾಖೆಯ ಮುಂದಿಟ್ಟಿದ್ದಾರೆ. ಶಿಕ್ಷಕರ ಸಂಘವೂ ಈ ವಿಷಯದಲ್ಲಿ ಸ್ವಲ್ಪಮಟ್ಟಿನ ಮೌನವನ್ನೇ ವಹಿಸಿದೆ. ಹೀಗಾಗಿ ಸೇವಾ ನಿರತರಲ್ಲಿ ಅರ್ಹರಿಗೂ ಪದವೀಧರ ಶಿಕ್ಷಕರಾಗಲು ಆಗುತ್ತಿಲ್ಲ.

ಸೇವೆಯಲ್ಲಿರುವವರಿಗೆ ಪದ ವೀಧರ ಶಿಕ್ಷಕರಾಗಲು ಭಡ್ತಿ ಸಂಬಂಧ ಪರೀಕ್ಷೆ ನಡೆಸುವ ಪ್ರಸ್ತಾವನೆ ಈಗಿಲ್ಲ. ಪರೀಕ್ಷೆ ನಡೆಸದೆ ಇರುವುದು ಕಾನೂನಾತ್ಮಕವಾಗಿ ತಪ್ಪಾಗಲಾರದು. 5ನೇ ತರಗತಿ ವರೆಗೆ ಬೋಧಿಸಲು ನೇಮಕವಾಗಿರುವವರು 7ನೇ ತರಗತಿ ವರೆಗೆ ಹೆಚ್ಚುವರಿಯಾಗಿ ಬೋಧಿಸು ತ್ತಿದ್ದರೆ, ಹೊಸ ನೇಮಕವಾದ ಬಳಿಕ 5ನೇ ತರಗತಿವರೆಗಷ್ಟೇ ಬೋಧಿಸಬೇಕಾದೀತು.
– ಡಾ| ಆರ್‌. ವಿಶಾಲ್‌, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ

ಪ್ರಾಥಮಿಕ ಶಾಲೆಯಲ್ಲಿ ರುವ ಪದವೀಧರ ಶಿಕ್ಷಕ ರಿಗೆ ಭಡ್ತಿ ನೀಡುವ ಸಂಬಂಧ ಪರೀಕ್ಷೆ ನಡೆಸಲು ಹಲವು ಬಾರಿ ಮನವಿ ಮಾಡಿದ್ದೇವೆ. ಮೂರು ನೇಮ  ಕಾತಿ ಸಂದರ್ಭದಲ್ಲೂ ಅವಗಣಿ ಸಿರು ವುದು ಸರಿಯಲ್ಲ. ಇನ್ನೊಮ್ಮೆ ಶಿಕ್ಷಣ ಸಚಿವರು ಹಾಗೂ ಆಯುಕ್ತರ ಗಮನಕ್ಕೂ ತರಲಿದ್ದೇವೆ.
– ಚಂದ್ರಶೇಖರ ನೂಗ್ಲಿ,
ರಾಜ್ಯ ಪ್ರ. ಕಾರ್ಯದರ್ಶಿ,
ಸ. ಪ್ರಾ. ಶಾ. ಶಿಕ್ಷಕರ ಸಂಘ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.