ಔಷಧ ಅಡ್ಡ ಪರಿಣಾಮ ವರದಿಗೆ ಆ್ಯಪ್‌ ಅಭಿವೃದ್ಧಿ

ಮಣಿಪಾಲ ಆಸ್ಪತ್ರೆಯಲ್ಲಿ ಬಿಡುಗಡೆ

Team Udayavani, Oct 24, 2019, 4:57 AM IST

q-28

ಮಣಿಪಾಲ: ಆ್ಯಂಡ್ರಾಯ್ಡ ಆ್ಯಪ್‌ ಅನ್ನು ಡಾ| ಎಚ್‌.ಎಸ್‌. ಬಲ್ಲಾಳ್‌ ಮತ್ತು ಡಾ| ಪೂರ್ಣಿಮಾ ಬಾಳಿಗಾ ಬಿಡುಗಡೆಗೊಳಿಸಿದರು.

ಉಡುಪಿ: ಮಣಿಪಾಲ ಕೆಎಂಸಿಯ ಫಾರ್ಮಕಾಲಜಿ ವಿಭಾಗ ಮತ್ತು ಎಂಐಟಿಯ ಮಾಹಿತಿ ಮತ್ತು ಸಂವಹನ ವಿಭಾಗಗಳು ರೋಗಿಗಳ ಸುರಕ್ಷೆಗಾಗಿ ಔಷಧಗಳ ಪ್ರತಿಕೂಲ ಪರಿಣಾಮಗಳನ್ನು ವರದಿ ಮಾಡಲು ಅಭಿವೃದ್ಧಿ ಪಡಿಸಿದ ಆ್ಯಂಡ್ರಾಯ್ಡ ಆ್ಯಪ್‌ ಅನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮತ್ತು ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗಾ ಬುಧವಾರ ಬಿಡುಗಡೆಗೊಳಿಸಿದರು. ಈ ಆ್ಯಪ್‌ಗೆ ADRRIA (ಅಡ್ವರ್ಸ್‌ ಡ್ರಗ್‌ ರಿಯಾಕ್ಷನ್‌ ರಿಪೋರ್ಟಿಂಗ್‌, ಐಡೆಂಟಿಫಿಕೇಶನ್‌ ಆ್ಯಂಡ್‌ ಅಸೆಸೆ¾ಂಟ್‌) ಎಂದು ಹೆಸರಿಡಲಾಗಿದೆ.

ಈ ವಿಶಿಷ್ಟ ಆ್ಯಪ್‌ ಅನ್ನು ಫಾರ್ಮಕಾಲಜಿ ವಿಭಾಗದ ಡಾ| ನವೀನ್‌ ಪಾಟೀಲ್‌ ಮತ್ತು ಡಾ| ವೀಣಾ ನಾಯಕ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಅಕ್ಷಯ ಎಂ.ಜೆ. ಮತ್ತು ಅರಿಫ್ ರಾಜಾ ಅಭಿವೃದ್ಧಿ ಪಡಿಸಿದ್ದಾರೆ. “ಆ್ಯಪ್‌ ಮಾಹೆಯ ಪ್ರತಿಷ್ಠೆಯನ್ನು ಹೆಚ್ಚಿಸಲಿದೆ. ಕೆಲವು ಸಮಯದ ಬಳಿಕ ಮಣಿಪಾಲ ಸಮೂಹದ ಮಂಗಳೂರು, ಉಡುಪಿ, ಕಾರ್ಕಳದ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು’ ಎಂದು ಡಾ| ಬಲ್ಲಾಳ್‌ ಹೇಳಿದರು. ಹೊಸ ಸಂಶೋಧನೆ ಮತ್ತು ಸೃಜನಶೀಲತೆಗಳು ಹೆಚ್ಚಿ ಮಾಹೆಯ ಘನತೆ ಹೆಚ್ಚುವಂತಾಗಲಿ ಎಂದು ಡಾ| ಪೂರ್ಣಿಮಾ ಬಾಳಿಗಾ ಶುಭ ಹಾರೈಸಿದರು.

ಎಂಐಟಿ ಜಂಟಿ ನಿರ್ದೇಶಕ ಡಾ| ಬಿ.ಎಚ್‌.ವಿ. ಪೈ, ಕೆಎಂಸಿ ಡೀನ್‌ ಡಾ| ಶರತ್‌ ರಾವ್‌, ಆಸ್ಪತ್ರೆ ಸಿಒಒ ಸಿ.ಜಿ. ಮುತ್ತಣ, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ ಉಪಸ್ಥಿತರಿದ್ದರು.

ಸಾವಿಗೂ ಕಾರಣವಾದೀತು
ಔಷಧಗಳನ್ನು ಸೇವಿಸಿದಾಗ ಆಗುವ ನೋವು ಅದರ ಪ್ರತಿಕೂಲ ಅಡ್ಡಪರಿಣಾಮ (ಎಡಿಆರ್‌). ಇದು ಒಂದು ಬಗೆಯ ಔಷಧ ಅಥವಾ ಸುದೀರ್ಘ‌ ಕಾಲದಿಂದ ತೆಗೆದುಕೊಳ್ಳುವ ಔಷಧ ಅಥವಾ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಬಗೆಯ ಔಷಧಗಳಿಂದ ಉಂಟಾಗುವ ನೋವು ಆಗಿರಬಹುದು. ಔಷಧಗಳ ಅಡ್ಡ ಪರಿಣಾಮವೂ ರೋಗ ಹೆಚ್ಚಳ ಮತ್ತು ಸಾವಿಗೆ ಪ್ರಮುಖ ಕಾರಣವಾಗುತ್ತದೆ ಎಂದು ಡಾ| ನವೀನ್‌ ಪಾಟೀಲ್‌ ವಿವರಿಸಿದರು.

ಫಾರ್ಮಕಾಲಜಿ ವಿಭಾಗವು ಭಾರತದ ಫಾರ್ಮ ಕೋವಿಜಿಲೆನ್ಸ್‌ ಕಾರ್ಯಕ್ರಮದ ಔಷಧ ಅಡ್ಡ ಪರಿಣಾಮ ನಿಯಂತ್ರಣ ಕೇಂದ್ರದ ಮಾನ್ಯತೆಯನ್ನು ಹೊಂದಿದೆ. ಔಷಧ ಪ್ರತಿಕೂಲ ಪರಿಣಾಮದ ವರದಿಯು ನಿಯಂತ್ರಣ ಪ್ರಾಧಿಕಾರದ ಪರಿಶೀಲನೆ ಬಳಿಕ ಸಿಗಲಿದೆ. ಇದು ಔಷಧಗಳ ಬಗೆಗಿನ ಎಚ್ಚರಿಕೆ ಅಥವಾ ಔಷಧಗಳನ್ನು ನಿಲ್ಲಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.