ಅನಧಿಕೃತ ಸಾಗುವಳಿ ಸಕ್ರಮಕ್ಕೆ ‘ನಮೂನೆ 57’ ಅರ್ಜಿ


Team Udayavani, Feb 8, 2019, 1:00 AM IST

tahashildar.jpg

ಮಣಿಪಾಲ: ಸರಕಾರಿ ಭೂಮಿಯಲ್ಲಿರುವ ಅನಧಿಕೃತ ಸಾಗುವಳಿ ಸಕ್ರಮ ಗೊಳಿಸುವುದಕ್ಕೆ ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 94-ಎ(4)ನ್ನು ತಿದ್ದುಪಡಿ ಮಾಡಲಾಗಿದ್ದು ಅದರಂತೆ ಭೂ ಕಂದಾಯ ನಿಯಮಾವಳಿಗಳು 1966ರ ನಿಯಮ 108 ಸಿಸಿ ಬಳಿಕ 108 ಸಿಸಿಸಿಯನ್ನು ಸೇರ್ಪಡೆಗೊಳಿಸಿ ಹೊಸದಾಗಿ ನಮೂನೆ 57ರ ಮೂಲಕ ಅರ್ಜಿ ಸಲ್ಲಿಕೆಗೆ ಸರಕಾರ ಅವಕಾಶ ನೀಡಲಾಗಿದೆ.

ಅನಧಿಕೃತ ಅದಿಭೋಗವನ್ನು ಸಕ್ರಮಗೊಳಿಸಲು ಈ ಹಿಂದೆ ಇದ್ದ 14-4-1990ರ ಕಟ್ಆಫ್ ದಿನಾಂಕವನ್ನು 1-1-2005ಕ್ಕೆ ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ 16-3-2019ರ ವರೆಗೆ ಅವಕಾಶ ನೀಡಲಾಗಿದೆ.

ನಿರ್ಬಂಧಿತ ಅಂತರ

ಸಾಗುವಳಿ ಸಕ್ರಮಕ್ಕೆ ಅರ್ಹ ಗ್ರಾಮಗಳನ್ನು ಗುರುತಿಸುವುದಕ್ಕಾಗಿ ನಿರ್ಬಂಧಿತ ಭೂ ಅಂತರವನ್ನು ನಿಗದಿ ಪಡಿಸಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಿಂದ 18 ಕಿ.ಮೀ., ಮಹಾನಗರ ಪಾಲಿಕೆಗಳಿಂದ 10 ಕಿ.ಮೀ., ನಗರಸಭೆಗಳಿಂದ 5 ಕಿ.ಮೀ., ಪುರಸಭೆ, ಪಟ್ಟಣ ಪಂಚಾಯತ್‌ಗಳಿಂದ 3 ಕಿ.ಮೀ. ನೇರ ಅಂತರದಲ್ಲಿರುವ ಗ್ರಾಮ ಗಳ ಜನರು ನಮೂನೆ 57ರ ಅರ್ಜಿ ಸಲ್ಲಿಸಬಹುದು. ನಿರ್ದಿಷ್ಟ ಗ್ರಾಮಗಳ ಮಾಹಿತಿಯನ್ನು ಗ್ರಾಮ ಕರಣಿಕರಿಂದ ಪಡೆದುಕೊಳ್ಳಬಹುದು.

ಹೀಗೆ ಅರ್ಜಿ ಸಲ್ಲಿಸಿ

ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಮೂಲಕ ಸೂಕ್ತ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ರೂ. 100 ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಈ ಹಿಂದೆ ಕೈ ಬರಹದಲ್ಲಿ ನೀಡ ಲಾದ ಅರ್ಜಿಗಳನ್ನು ಕೂಡಲೇ ತಂತ್ರಾಂಶದಲ್ಲಿ ನಮೂದಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಂತ್ರಾಂಶದಲ್ಲಿರದ ಅರ್ಜಿಗಳ ಪ್ರಕ್ರಿಯೆ ಮುಂದು ವರಿಸುವಂತಿಲ್ಲ.

ಜ್ಯೇಷ್ಠತೆ ಆಧಾರದಲ್ಲಿ ದಾಖಲು

ಅರ್ಜಿಗಳನ್ನು ಸ್ವೀಕೃತಿ ಜ್ಯೇಷ್ಠತೆ ಆಧಾರದಲ್ಲಿ ನಮೂನೆ 58ರ ರಿಜಿಸ್ಟರ್‌ನಲ್ಲಿ ದಾಖಲಿಸಲು ತಹಶೀಲುದಾರರಿಗೆ ಭೂ ಮಂಜೂರಾತಿ ವಿಭಾಗದ (ಕಂದಾಯ ಇಲಾಖೆ) ಸರಕಾರದ ಅಧೀನ ಕಾರ್ಯದರ್ಶಿ ಸೂಚಿಸಿದ್ದಾರೆ.

ಇವರಿಗೆ ಅವಕಾಶವಿಲ್ಲ

ಸಾಗುವಳಿಯನ್ನು ಸಕ್ರಮಗೊಳಿಸಲು ಕಲಂ 94(ಎ) ನಮೂನೆ 50 ಮತ್ತು ಕಲಂ 94 (ಬಿ) ನಮೂನೆ 53ರ ಅಡಿಯಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿದವರು ಹೊಸದಾಗಿ ನಮೂನೆ 57ರಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಪರಂಬೋಕು ಪ್ರದೇಶಗಳು, ಕೇಂದ್ರ ಸರಕಾರ, ಸರಕಾರಿ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಭೂಮಿ, ಪ್ರಸ್ತುತದ ಹಾಗೂ ಪ್ರಸ್ತಾವಿತ ರಸ್ತೆ, ಹೆದ್ದಾರಿಗೆ ಮೀಸಲಾದ ಪ್ರದೇಶ, ಉದ್ಯಾನ, ಕ್ರೀಡಾಂಗಣಕ್ಕೆ ಮೀಸಲಿರುವ ಪ್ರದೇಶ, ಭೂ ಸ್ವಾಧೀನಕ್ಕೆ ಪ್ರಸ್ತಾವಿತ ಪ್ರದೇಶ ಇದ್ದರೆ ಇವುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.

ವ್ಯವಸಾಯೇತರ ಉದ್ದೇಶಕ್ಕೆ ಬಳಸುವಂತಿಲ್ಲ

ಸಕ್ರಮಗೊಳಿಸಲಾದ ಭೂಮಿಯನ್ನು ಮುಂದಿನ 25 ವರ್ಷದ ವರೆಗೆ ಪರಭಾರೆ ಮಾಡುವುದು ಮತ್ತು ವ್ಯವಸಾಯೇತರ ಉದ್ದೇಶಕ್ಕೆ ಬಳಸುವುದಕ್ಕೆ ಅವಕಾಶ ಇಲ್ಲ. ನಮೂನೆ 50, 53ರ ಅಡಿ ಅರ್ಜಿ ಸಲ್ಲಿಸಿದವರು ಭೂಮಿ ಪರಭಾರೆ ಮಾಡಬೇಕಾದರೆ ನಿಗದಿತ ಅವಧಿ ಮುಗಿದ ಬಳಿಕ ಸರಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನೀಡಿದ ನಿರಕ್ಷೇಪಣಾ ಪತ್ರಗಳನ್ನು ಹಿಂಪಡೆದು ಸಬ್‌ ರಿಜಿಸ್ಟ್ರಾರ್‌ಗಳಿಗೆ ಸೂಚನೆ ನೀಡಲು ಸರಕಾರ ತಹಶೀಲ್ದಾರರಿಗೆ ಆದೇಶಿಸಿದೆ.

ಪಾರದರ್ಶಕತೆಗೆ ಸೂಚನೆ

ನಮೂನೆ 57ರ ಅರ್ಜಿಗಳ ವಿಲೇಗೆ ಸಂಬಂಧಿಸಿದಂತೆ ಪಾರದರ್ಶಕತೆ ಪಾಲಿಸಲು ಹಾಗೂ ಅರ್ಜಿಗಳನ್ನು ಪರಿಶೀಲಿಸಿ ಸಕ್ರಮೀಕರಣ ಸಮಿತಿ ಮುಂದಿರಿಸಿ ಇತ್ಯರ್ಥಪಡಿಸಲು ತಹಶೀಲ್ದಾರರಿಗೆ ಸರಕಾರ ಆದೇಶಿಸಿದೆ.

ನಿಯಮಾನುಸಾರ ಇತ್ಯರ್ಥ

ಸಮರ್ಪಕ ದಾಖಲೆಗಳೊಂದಿಗೆ ಅಟಲ್‌ಜೀ ಜನಸ್ನೇಹಿ ಕೇಂದ್ರಗಳ ಮೂಲಕ ನಮೂನೆ 57ರ ಅರ್ಜಿ ಸಲ್ಲಿಸಬಹುದು. ಕೈ ಬರಹದಲ್ಲಿ ನೀಡಿದ ಅರ್ಜಿಗಳನ್ನು ತಂತ್ರಾಂಶಕ್ಕೆ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಸ್ವೀಕೃತ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥಪಡಿಸಲಾಗುವುದು.

-ಪ್ರದೀಪ್‌ ಕುರ್ಡೇಕರ್‌, ಉಡುಪಿ ತಹಶೀಲ್ದಾರ್‌

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.