ಇಚ್ಛಾಶಕ್ತಿ ಇದ್ದಲ್ಲಿ ಅರ್ಜಿಗಳು ತ್ವರಿತಗತಿಯಲ್ಲಿ ವಿಲೇವಾರಿ
ಕಾಪು ತಾಲೂಕು ಪಹಣಿ ವಿತರಣಾ ಕೇಂದ್ರ ಉದ್ಘಾಟಿಸಿ ಶಾಸಕ ಲಾಲಾಜಿ ಮೆಂಡನ್
Team Udayavani, Jun 18, 2019, 5:54 AM IST
ಕಾಪು: ಕಾಪು ತಾಲೂಕು ಕಚೇರಿಯ ಕೆಳ ಮಹಡಿಯಲ್ಲಿ ಪ್ರಾರಂಭಿ ಸಲಾದ ತಾಲೂಕಿನ ನೂತನ ಪಹಣಿ (ಆರ್ಟಿಸಿ) ವಿತರಣಾ ಕೇಂದ್ರವನ್ನು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಜೂ. 17ರಂದು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಕಾಪು ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳ ವಿಶೇಷ ಮುತುವರ್ಜಿ ಯಿಂದಾಗಿ ತಾಲೂಕು ಕಚೇರಿಯಲ್ಲಿ ಪ್ರತೀಯೊಂದು ಅರ್ಜಿಗಳು ಕೂಡಾ ತ್ವರಿತಗತಿಯಲ್ಲಿ ವಿಲೇವಾರಿಯಾಗುತ್ತಿವೆ. ಇದಕ್ಕೆ ಅಧಿಕಾರಿಗಳ ಇಚ್ಛಾಶಕ್ತಿಯೇ ಮೂಲ ಕಾರಣವಾಗಿದೆ. ಸಾರ್ವಜನಿಕರು ತಾಲೂಕು ಕಚೇರಿ ಹಾಗೂ ಪಹಣಿ ವಿತರಣಾ ಕೇಂದ್ರದ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ತಾಲೂಕಿನ ಜನತೆಯ ಬಹು ಸಮಯದ ಬೇಡಿಕೆ ಯಾಗಿದ್ದ ಪಹಣಿ ಕೇಂದ್ರ ಸ್ಥಾಪನೆಯು ಇದೀಗ ಅನುಷ್ಠಾನಕ್ಕೆ ಬಂದಿದೆ. ನೂತನ ಪಹಣಿ ಕೇಂದ್ರದಲ್ಲಿ ತಾಲೂಕಿನ ಜನತೆ ಅಗತ್ಯದ ಸೌಕರ್ಯಗಳಾದ ಆರ್.ಟಿ.ಸಿ. ಮತ್ತು ಮ್ಯುಟೇಶನ್ ಪ್ರತಿಗಳು ದೊರಕಲಿವೆ. ಇದರಿಂದಾಗಿ ಕಾಪು ತಾಲೂಕಿನ ಜನತೆ ಪಹಣಿ ಪತ್ರ, ಮ್ಯುಟೇಶನ್ ಪ್ರತಿಗಳಿಗಾಗಿ ಉಡುಪಿಗೆ ತೆರಳುವುದನ್ನು ತಪ್ಪಿಸಬಹುದಾಗಿದೆ ಎಂದರು.ಕಾಪು ತಾಲೂಕು ಡೆಪ್ಯುಟಿ ತಹ ಶೀಲ್ದಾರ್ ಕಲ್ಲಮುರುಡಪ್ಪ, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಮತ್ತು ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ