28 ಸ್ಥಳಗಳಲ್ಲಿ ಮರಳುಗಾರಿಕೆಗೆ ಅನುಮೋದನೆ
Team Udayavani, Aug 15, 2017, 8:05 AM IST
ಉಡುಪಿ: ಕರ್ನಾಟಕ ಕರಾವಳಿ ವಲಯ ನಿರ್ವಹಣಾ ಸಮಿತಿ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡಿದ 28 ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ.
ರಾಜ್ಯ ಸಮಿತಿಯು ನೀಡಿದ ನಿಬಂಧನೆ ಗಳು, ಒಪ್ಪಂದ ಪತ್ರದ ಮಾರ್ಗಸೂಚಿಗಳನ್ನು ಪರಿಶೀಲಿಸಿದ ಸಮಿತಿಯು ಈಗಾಗಲೇ ಮರಳುಗಾರಿಕೆ ನಡೆಸಲು ನೋಂದಣಿಯಾದ 173 ಅರ್ಜಿದಾರರಲ್ಲಿ ಆಯ್ಕೆ ಮಾಡಲು ಚಿಂತನೆ ನಡೆಸಿತು. ಇವರ ಕುರಿತು ತಹಶೀಲ್ದಾರರಿಂದ ವರದಿ ತರಿಸಿಕೊಂಡ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಮುಂದೆ ಪರಿಶೀಲನೆ ನಡೆಸಲಿದೆ. ಇನ್ನೆರಡು ದಿನಗಳಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲು ಸಭೆ ನಿರ್ಧರಿಸಿತು. ಇದುವರೆಗೆ ಅರ್ಜಿ ಸಲ್ಲಿಸದವರು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಜನರಿಗೆ ಮರಳುಗಾರಿಕೆ ನಡೆಸಲು ಮತ್ತು ಹೊರಜಿಲ್ಲೆಗೆ ರವಾನೆಯಾಗದೆ ಸ್ಥಳೀಯವಾಗಿ ಬಳಸಲು ಸಭೆ ನಿರ್ಧರಿಸಿತು.
ಸುಮಾರು ಒಂದು ವಾರದಲ್ಲಿ ಮರಳುಗಾರಿಕೆ ಆರಂಭವಾಗಿ ಮರಳು ಜನರಿಗೆ ದೊರಕಬಹುದು ಎಂದು ಅಂದಾಜಿಸಲಾಗಿದೆ. ಸಭೆಯಲ್ಲಿ ಸಹಾಯಕ ಕಮಿಷನರ್ ಶಿಲ್ಪಾ ನಾಗ್, ಎಸ್ಪಿ ಡಾ| ಸಂಜೀವ ಪಾಟೀಲ್, ಸಿಆರ್ಝಡ್ ಅಧಿಕಾರಿ ವಿಜಯ ಕುಮಾರ್, ಪರಿಸರ ಅಧಿಕಾರಿ ಲಕ್ಷ್ಮೀಕಾಂತ್, ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಕೋದಂಡರಾಮಯ್ಯ ಮೊದಲಾ ದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ