ಔರಾದ್ಕರ್‌ ವರದಿ ಜಾರಿ, ಪೊಲೀಸರ ವೇತನ ತಾರತಮ್ಯ ನೀಗಿಸಲು ಪರ್ಯಾಯ ದಾರಿ: ಸಚಿವ ಆರಗ ಜ್ಞಾನೇಂದ್ರ


Team Udayavani, Nov 24, 2022, 8:55 AM IST

ಪೊಲೀಸರ ವೇತನ ತಾರತಮ್ಯ ನೀಗಿಸಲು ಪರ್ಯಾಯ ದಾರಿ : ಸಚಿವ ಆರಗ ಜ್ಞಾನೇಂದ್ರ

ಪಡುಬಿದ್ರಿ : ಔರಾದ್ಕರ್‌ ವರದಿಯು ಹೊಸದಾಗಿ ನೇಮಕಗೊಂಡಿರುವ ಪೊಲೀಸ್‌ ಸಿಬಂದಿಗೆ ಮಾತ್ರ ಅನ್ವಯವಾಗುವಂತಿದೆ. ಹಿರಿಯ ಸಿಬಂದಿಗೆ ಕೆಲವೊಂದು ಭತ್ತೆಗಳನ್ನು ನೀಡುವ ಮೂಲಕ ವೇತನ ತಾರತಮ್ಯ ನೀಗಿಸಲು ಯತ್ನಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಆಗಮಿಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವರದಿಯ ಎಲ್ಲ ಅಂಶಗಳನ್ನು ಜಾರಿಗೊಳಿಸಿದಾಗ ಸರಕಾರಕ್ಕೆ ಬಹಳಷ್ಟು ಆರ್ಥಿಕ ಹೊರೆ ಬೀಳಲಿದೆ. ಕಾನ್‌ಸ್ಟೆಬಲ್‌, ದಫೇದಾರ್‌, ಎಎಸ್‌ಐ, ಪಿಎಸ್‌ಐಗಳಿಗೆ ಭತ್ತೆಗಳನ್ನು ಏರಿಸಿ ಸರಿ ಪಡಿಸಿಕೊಳ್ಳಲು ಯತ್ನಿಸಲಾಗಿದೆ. ಶೇ. 25ರಷ್ಟನ್ನು ಇನ್ನು ಸರಿದೂಗಿಸಬೇಕಿದೆ. ವಿತ್ತ ಖಾತೆಯು ಪೂರ್ಣ ಅನುಮತಿಯನ್ನೂ ನೀಡಿಲ್ಲ. ಮಾತುಕತೆ ಈಗಲೂ ನಡೆಯುತ್ತಿದೆ ಎಂದರು.

ತಾಂತ್ರಿಕ ತೊಡಕು
ಮಹಿಳಾ ಠಾಣೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಿಬಂದಿಯನ್ನು ಹೊಂದಾಣಿಕೆ ಮಾಡಿ ಕೊಳ್ಳಲು ಮಹಿಳಾ ಪೊಲೀಸರಿಗೆ ಭಡ್ತಿ ನೀಡಿರುವುದರಿಂದ ಪುರುಷ ಸಿಬಂದಿಗೆ ವೇತನ ತಾರತಮ್ಯವಾಗಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಹಿಳಾ ಠಾಣೆಗಳಿಗೆ ಸಿಬಂದಿ ನೇಮಕಾತಿ ಪ್ರತ್ಯೇಕವಾಗಿಯೇ ನಡೆಯುತ್ತದೆ. ಹಾಗಾಗಿ ವೇತನ ತಾರತಮ್ಯ, ವ್ಯತ್ಯಾಸ ಆಗಿದೆ. ಇಲಾಖೆಯಲ್ಲಿರುವ ಸೇವಾ ಹಿರಿತನದ ಪುರುಷ ಸಿಬಂದಿಗೆ ತಾರತಮ್ಯ ಅನಿಸುತ್ತದೆ. ಇದು ಸೈಬರ್‌ ವಿಭಾಗದಲ್ಲೂ ಇದೆ. ಆದರೆ ಅಲ್ಲಿ ಸಿಬಂದಿ ಅಲ್ಪ ಪ್ರಮಾಣದಲ್ಲಿರುವುದರಿಂದ ಭಡ್ತಿ ಬೇಗ ಆಗುತ್ತದೆ. ಇವುಗಳನ್ನೆಲ್ಲ ಸರಿಪಡಿಸಲು ತಾಂತ್ರಿಕ ತೊಡಕುಗಳೂ ಇವೆ ಎಂದರು. ಶಾಸಕ ಲಾಲಾಜಿ ಮೆಂಡನ್‌, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್‌ ಮಟ್ಟು ಉಪಸ್ಥಿತರಿದ್ದರು.

ಇದನ್ನೂ ಓದಿ: ಆಧಾರ್‌ ಸುರಕ್ಷಿತವಾಗಿಟ್ಟುಕೊಳ್ಳಿ…ಕಳೆದು ಹೋದರೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.