ಆರ್ಬೆಟ್ಟು ಜ್ಞಾನದೇವ ಕಾಮತ್ಗೆ ಭಾರತ ಗೌರವ ಪ್ರಶಸ್ತಿ ಪ್ರದಾನ
Team Udayavani, Aug 17, 2017, 8:15 AM IST
ಹೆಬ್ರಿ: ನವದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ಕಲಾ ಸಂಕುಲ ಸಂಸ್ಥೆಯ ವತಿಯಿಂದ ದೆಹಲಿಯಲ್ಲಿ ಆ.11ರಂದು ನಡೆದ ಅಖೀಲ ಭಾರತ 2ನೇ ವಿಶ್ವಕರ್ಮ ಸಂಸ್ಕೃತಿ ಸಮ್ಮೇಳನದಲ್ಲಿ ಹೆಬ್ರಿ ಸಮೀಪ ಸಂತಕಟ್ಟೆಯ ಸಮಾಜ ಸೇವಕ ಸಾಹಿತಿ ಆರ್ಬೆಟ್ಟು ಜ್ಞಾನದೇವ ಕಾಮತ್ ಅವರಿಗೆ ಸಾಹಿತ್ಯ ಕ್ಷೇತ್ರದ ಸೇವೆಯನ್ನು ಗುರುತಿಸಿ ಭಾರತ ಗೌರವ ಪ್ರಶಸ್ತಿ ಲಭಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಬೆಂಗಳೂರಿನ ಕೆ.ಎಸ್. ಪ್ರಭಾಕರ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸಿದರು. ಕೇಂದ್ರ ಸರಕಾರದ ಜವಳಿ ಸಚಿವ ಅಜಯ್ ಟಮಟ್, ರಾಯಚೂರು ಸಂಸದ ಬಿ.ವಿ.ನಾಯಕ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ನಂದ ಕುಮಾರ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಾಬು ಪತ್ತಾರ್, ನವದೆಹಲಿ ಜನಕಪುರಿ ಕನ್ನಡ ಕೂಟದ ಅಧ್ಯಕ್ಷ ಎನ್.ಆರ್. ಶ್ರೀನಾಥ್, ಕಲಬುರ್ಗಿ ವಿಶ್ವಕರ್ಮ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ವೀರೇಂದ್ರ ಇನಾಂದಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ