ವಿಶೇಷ ಒಲಿಂಪಿಕ್ ಡ್ಯಾನ್ಸ್ ಸ್ಪೋರ್ಟ್ ವಿಶ್ವ ಚಾಂಪಿಯನ್ ಶಿಪ್ ಗೆ ಮಣಿಪಾಲದ ಅರ್ಚನಾ ಜೈವಿಠಲ್
Team Udayavani, Aug 14, 2021, 12:08 PM IST
ಉಡುಪಿ: ಆಸ್ಟ್ರಿಯ ದೇಶದ ಗ್ರಾಮ್ನಲ್ಲಿ ಆ.20ರಂದು ನಡೆಯುವ ಮೊತ್ತಮೊದಲ ವಿಶೇಷ ಒಲಿಂಪಿಕ್ಸ್ ಡ್ಯಾನ್ಸ್ ಸ್ಪೋರ್ಟ್ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಮಣಿಪಾಲದ ಅರ್ಚನಾ ಜೈವಿಠಲ್ ಭಾರತವನ್ನು ಪ್ರತಿನಿಧಿಸಿ ಸ್ಪರ್ಧೆಯೊಂದರಲ್ಲಿ ಭಾಗವಹಿಸಲಿದ್ದಾರೆ.
ಡ್ಯಾನ್ಸ್ ಸ್ಪೋರ್ಟ್ಗೆ ವಿಶೇಷ ಒಲಿಂಪಿಕ್ಸ್ನಲ್ಲಿ ಅಧಿಕೃತ ಮಾನ್ಯತೆ ದೊರಕಿದ್ದು 2019ರಲ್ಲಿ. ಇದೀಗ ಈ ಕ್ರೀಡೆಯ ಮೊತ್ತ ಮೊದಲ ವಿಶ್ವ ಚಾಂಪಿಯನ್ ಶಿಪ್ ಆಸ್ಟ್ರಿಯದಲ್ಲಿ ನಡೆಯಲಿದೆ. ಇದರಲ್ಲಿ ಭಾರತ, ಅಮೆರಿಕ, ನಾರ್ವೆ, ಉಕ್ರೇನ್ ಸೇರಿದಂತೆ ವಿಶ್ವದ 13ದೇಶಗಳ ವಿಶೇಷ ನೃತ್ಯಗಾರರು ನಾಲ್ಕು ವಿಭಾಗಗಳಲ್ಲಿ (ಸೋಲೊ, ಜೋಡಿ, ದಂಪತಿ ಹಾಗೂ ಟೀಮ್) ಸ್ಪರ್ಧಿಸಲಿದ್ದಾರೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಹಾಗೂ ಮಣಿಪಾಲದ ಅರ್ಚನಾ ಟ್ರಸ್ಟ್ ನಡೆಸುತ್ತಿರುವ ‘ಆಸರೆ’ ಸಂಸ್ಥೆಯ ಅರ್ಚನಾ ಜೈವಿಠಲ್ ಎಂ.ಜೆ., ಕ್ಲಾಸಿಕಲ್ ಸೋಲೋ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಈ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಏಕೈಕ ಸ್ಪರ್ಧಿ ಇವರಾಗಿದ್ದಾರೆ.
ಇದನ್ನೂ ಓದಿ:ಗಾಂಧಿ ಉಳಿದಿದ್ದ ಮನೆಯ ಹೆಸರು ಇಡೀ ವಾರ್ಡ್ಗೆ !
ಅರ್ಚನಾ ಅವರು ಆ.19-20ರಂದು 90ನಿಮಿಷಗಳ ಕಾಲ ಏಕಾಂಗಿಯಾಗಿ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಿ ಪ್ರದರ್ಶನ ನೀಡಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅರ್ಚನಾ ಭರತನಾಟ್ಯದಲ್ಲಿ ವಿಶೇಷ ತರಬೇತಿ ಯನ್ನು ಪಡೆಯುತಿದ್ದಾರೆ. ಕೋವಿಡ್ನ ಸಾಂಕ್ರಾಮಿಕದ ಅವಧಿಯಲ್ಲೂ ಅವರು ನಿರಂತರವಾಗಿ ತರಬೇತಿಯನ್ನು ಪಡೆಯುತ್ತಿದ್ದರು.
2013ರಲ್ಲಿ ನಡೆದ ವಿಶೇಷ ಒಲಿಂಪಿಕ್ಸ್ನ ಈಜು ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಪಡೆದು ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದರು. 2019ರಲ್ಲಿ ಅಬುಧಾಬಿಯ ವಿಶ್ವ ಕ್ರೀಡಾಕೂಟದಲ್ಲಿ ಮತ್ತೊಮ್ಮೆ ಇದೇ ಸಾಧನೆಯನ್ನು ಪುನರಾವರ್ತಿಸಿದ್ದರು. ಡ್ಯಾನ್ಸ್ ಸ್ಪೋರ್ಟ್ನಲ್ಲಿ ದೇಶವನ್ನು ಪ್ರತಿನಿಧಿಸಲು ಅರ್ಚನಾ ಅವರು ಶುಕ್ರವಾರ ಆಸ್ಟ್ರಿಯಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ