ಪಶ್ಚಿಮ ಘಟ್ಟದ ಮಡಿಲಲ್ಲಿ ದುರುಳರ ಅಟ್ಟಹಾಸ

ಕಳ್ಳರ ಪಾಲಾಗುತ್ತಿವೆ ಬೃಹತ್‌ ಮರಗಳು ; ಮೋಜು ಮಸ್ತಿಯಿಂದ ಪರಿಸರ ನಾಶ

Team Udayavani, Sep 10, 2019, 5:15 AM IST

MARA111

ಸುಬ್ರಹ್ಮಣ್ಯ: ಜೀವಸಂಕುಲದ ವೈವಿಧ್ಯಕ್ಕೆ ಹೆಸರಾಗಿರುವ ಪಶ್ಚಿಮ ಘಟ್ಟ ಪರಿಸರದಲ್ಲಿ ದುರುಳರ ಅಟ್ಟಹಾಸ ಮಿತಿಮೀರಿದೆ. ಬೆಲೆಬಾಳುವ ಬೃಹತ್‌ ಮರಗಳು ಕಾಡುಗಳ್ಳರ ಪಾಲಾಗುತ್ತಿದ್ದರೆ, ಅಕ್ರಮವಾಗಿ ಅರಣ್ಯಕ್ಕೆ ನುಗ್ಗಿ ಮೋಜು ಮಸ್ತಿ ನಡೆಸುವವರಿಂದ ಪರಿಸರ ಹಾಳಾಗುತ್ತಿದೆ.

ಜನವಸತಿ ಪ್ರದೇಶಗಳ ಅನುಕೂಲಕ್ಕಾಗಿ ರಸ್ತೆ ನಿರ್ಮಾಣಕ್ಕೆ ತಡೆಯುವ ಅರಣ್ಯ ಇಲಾಖೆಯು ಕಾಡುಗಳ್ಳರು ಅರಣ್ಯದೊಳಗೇ ರಸ್ತೆ ನಿರ್ಮಿಸಿ ಮರಗಳನ್ನು ಹೊತ್ತೂಯ್ದರೂ ಗೊತ್ತೇ ಇಲ್ಲದಂತೆ ಇರುವುದು ಸಂಶಯಕ್ಕೆಡೆ ಮಾಡಿದೆ. ಎರಡು ದಿನಗಳ ಹಿಂದಷ್ಟೇ ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಿಂದ ಬೃಹತ್‌ ಗಾತ್ರದ ಹೆಬ್ಬಲಸಿನ ಮರಗಳು ಕಳವಾಗಿರುವುದು ಇದಕ್ಕೆ ಸಾಕ್ಷಿ.

ಸಿಬಂದಿ ಶಾಮೀಲು?
ಪಶ್ಚಿಮ ಘಟ್ಟದ ಕಾಡುಗಳಿಂದ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸುವ ವ್ಯವಸ್ಥಿತ ಜಾಲವೇ ಇದೆ. ಇದಕ್ಕಾಗಿ ಕಳ್ಳರು ರಸ್ತೆಗಳನ್ನು ರಚಿಸಿಕೊಂಡಿದ್ದಾರೆ. ಸೆ. 3ರಂದು ಭಾಗಿಮಲೆಯಲ್ಲಿ ಬೃಹತ್‌ ಮರಗಳ ಕಳ್ಳತನವಾಗಿದ್ದು, ಇದನ್ನರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಸ್ಥಳೀಯರಿಗೆ ಮತ್ತು ಘಟನೆ ಕುರಿತು ಚಿತ್ರೀಕರಣಕ್ಕೆ ಹೊರಟ ಮಾಧ್ಯಮದವರಿಗೆ ಬಿಳಿನೆಲೆ ವಿಭಾಗದ ಅರಣ್ಯ ಕಾವಲು ಸಿಬಂದಿ ತಡೆ ಒಡ್ಡಿ ಬೆದರಿಸಿರುವುದು ಕೃತ್ಯದಲ್ಲಿ ಸಿಬಂದಿಯೂ ಶಾಮೀಲಾಗಿದ್ದಾರೆಯೇ ಎನ್ನುವ ಸಂದೇಹ ಮೂಡಿಸಿದೆ.

ಮದ್ಯದ ಬಾಟಲಿ,ತ್ಯಾಜ್ಯ ರಾಶಿ
ಪಶ್ಚಿಮ ಘಟ್ಟದ ಪರಿಸರ ಸಂಪೂರ್ಣ ಕಲುಷಿತಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಬಿಸಿಲೆ ಘಾಟಿ ಪ್ರದೇಶದ‌ಲ್ಲಿ ಅಕ್ರಮವಾಗಿ ಅರಣ್ಯಕ್ಕೆ ನುಗ್ಗಿ ಸಹಿತ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ. ಘಾಟಿ ಪ್ರದೇಶದ ಸ್ವತ್ಛತೆಗೆ ತೆರಳಿದ್ದ ಯುವ ಬ್ರಿಗೇಡ್‌ ಮತ್ತು ಕೆಲವು ಪರಿಸರ ಪ್ರೇಮಿ ಸಂಘಟನೆಗಳ ಸದಸ್ಯರು ಟನ್‌ಗಟ್ಟಲೆ ಮದ್ಯದ ಬಾಟಲಿ, ಪ್ಲಾಸ್ಟಿಕ್‌ ತ್ಯಾಜ್ಯವನ್ನು ತೆರವುಗೊಳಿಸಿದ್ದರು.

ಕೋಟ್ಯಂತರ ರೂ.ವ್ಯಯ
ಅರಣ್ಯ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೋಟ್ಯಂತರ ರೂ. ವ್ಯಯಿಸುತ್ತಿವೆ. ಅರಣ್ಯ ಕಾವಲಿಗೆಂದು ಅಧಿಕಾರಿಗಳು, ಸಿಬಂದಿ ಇದ್ದಾರೆ. ಪರಿಸರ ಪ್ರೇಮಿಗಳು ಅರಣ್ಯ ಸಂಪತ್ತು ಉಳಿಸಲು ಚಳವಳಿ, ಜಾಗೃತಿ ಆಂದೋಲನಗಳನ್ನು ನಡೆಸುತ್ತಿದ್ದಾರೆ. ಆದರೆ ಅರಣ್ಯ ಹನನ ನಿತ್ಯನಿರಂತರವಾಗಿದೆ.

ನಕ್ಸಲರ ಭಯ
ಅರಣ್ಯ ಸಿಬಂದಿಯಲ್ಲಿ ಆಧುನಿಕ ಶಸ್ತ್ರಾಸ್ತಗಳಿಲ್ಲ. ಆಗಾಗ ಕಾಣಿಸಿಕೊಳ್ಳುವ ನಕ್ಸಲರ ಭಯದಿಂದ ಸಿಬಂದಿ ಕಾಡಿಗಿಳಿಯಲು ಹೆದರುತ್ತಾರೆ. ನಕ್ಸಲರ ಸೋಗಿನಲ್ಲಿ ದಂಧೆ ನಡೆಸುವವರೂ ಹೆಚ್ಚಿದ್ದಾರೆ.

450 ಪ್ರಭೇದಗಳು
ಸುಮಾರು 1 ಲಕ್ಷ ಹೆಕ್ಟೇರ್‌ ಭೌಗೋಳಿಕ ವಿಸ್ತಿರ್ಣವುಳ್ಳ ಸುಬ್ರಹ್ಮಣ್ಯ ಅರಣ್ಯ ವಲಯವು ಅತೀ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲ್ಪಟ್ಟಿದೆ. 450ಕ್ಕೂ ಅಧಿ ಕ ಸಸ್ಯ ಸಂಕುಲ, ಔಷ ಧೀಯ ಸಸ್ಯಗಳು, ಪ್ರಾಣಿ-ಪಕ್ಷಿ ಸಂಕುಲ, ಅಳಿವಿನ ಅಂಚಿನಲ್ಲಿರುವ ಅಪೂರ್ವ ಸಸ್ಯಗಳು ಇಲ್ಲಿವೆ. ಇವನ್ನೆಲ್ಲ ಕಾಯಬೇಕಿರುವ ಅರಣ್ಯ ಇಲಾಖೆಯ ಶೇ. 60ರಷ್ಟು ಹುದ್ದೆಗಳಲ್ಲಿ ಸಿಬಂದಿಯೇ ಇಲ್ಲ!

ಸಿಬಂದಿ ಕೊರತೆ ಹಿಂದಿಗಿಂತ ಈಗ ಸುಧಾರಿಸಿದೆ. ರಾತ್ರಿ ಗಸ್ತಿಗೆ ಸಿಬಂದಿಯನ್ನು ನಿಯೋಜಿಸುತ್ತಿದ್ದೇವೆ. ಇಷ್ಟಿದ್ದರೂ ದಂಧೆಕೋರರು ಕಣ್ತಪ್ಪಿಸಿ ಮರಕಳ್ಳತನ ನಡೆಸುತ್ತಿದ್ದಾರೆ. ಹತೋಟಿಗೆ ಶ್ರಮಿಸುತ್ತಿದ್ದೇವೆ.
– ಡಾ| ಕರಿಕಲನ್‌ ವಿ.
ಮಂಗಳೂರು ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.