ಉಡುಪಿಯಲ್ಲಿ ಶಂಕಿತ ಉಗ್ರರ ಬಂಧನ!
Team Udayavani, Nov 6, 2019, 9:54 PM IST
ಉಡುಪಿ: ಉಡುಪಿ ಸಂಸ್ಕೃತ ಕಾಲೇಜು ಬಳಿ ಬುಧವಾರ ಸಾಯಂಕಾಲ ದುಷ್ಕೃತ್ಯಕ್ಕೆ ಹೊಂಚುಹಾಕಿದ್ದ ವ್ಯಕ್ತಿ ಹಾಗೂ ರಾತ್ರಿ ಮಲ್ಪೆಯಲ್ಲಿ ಬೋಟ್ನಲ್ಲಿ ಸಂಶಯಾತ್ಮಕವಾಗಿ ಸಂಚರಿಸುತ್ತಿದ್ದ 6 ಮಂದಿಯನ್ನು ಬಂಧಿಸುವ ಮೂಲಕ ಪೊಲೀಸರು ಜಿಲ್ಲೆಯಲ್ಲಿ ನಡೆಯುತ್ತಿದ್ದ ದೊಡ್ಡ ಸಂಚನ್ನು ವಿಫಲಗೊಳಿಸಿ¨ªಾರೆ!
ಆದರೆ ಇವರೆಲ್ಲ ನೈಜ ಉಗ್ರರಲ್ಲ…! ಪೊಲೀಸರು. ಇದು ಭಾರತೀಯ ನೌಕಾಪಡೆ, ಭಾರತೀಯ ತಟರಕ್ಷಣಾ ಪಡೆ, ಕರಾವಳಿ ಕಾವಲು ಪಡೆ, ಜಿಲ್ಲಾ ಪೊಲೀಸ್, ಜಿಲ್ಲಾಡಳಿತ, ಬಂದರು ಮತ್ತು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಕಸ್ಟಮ್ಸ್ ಹಾಗೂ ಇತರ ಇಲಾಖೆಗಳು ಜಂಟಿಯಾಗಿ ನ. 6 ಮತ್ತು 7ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸುತ್ತಿರುವ ಸಾಗರ ಕವಚ ಅಣಕು ಕಾರ್ಯಾಚರಣೆ.
ಕಾರ್ಯಾಚರಣೆಯಲ್ಲಿ 200ಕ್ಕೂ ಅಧಿಕ ಪೊಲೀಸ್ ಸಿಬಂದಿ, 27 ಮಂದಿ ಅಧಿಕಾರಿಗಳು ಭಾಗವಹಿಸಿದ್ದು, 15 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಪಾಳಿಯಲ್ಲಿ 36 ಗಂಟೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಸ್ಫೋಟಕವಸ್ತುಗಳು ಕಂಡುಬಂದರೆ ನಿಷ್ಕ್ರಿಯಗೊಳಿಸಲು ಡಿಆರ್ನಿಂದ 2 ತಂಡ ರಚಿಸಲಾಗಿದ್ದು, ಉಡುಪಿ ಮತ್ತು ಕುಂದಾಪುರದಲ್ಲಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ