ಅಂತಾರಾಜ್ಯ ಕಳ್ಳರಿಬ್ಬರ ಸೆರೆ, ನ್ಯಾಯಾಂಗ ಬಂಧನ
ಕೋಟೇಶ್ವರದ ಮನೆಗೆ ನುಗ್ಗಿ ಕಳ್ಳತನ ಪ್ರಕರಣ
Team Udayavani, Jan 7, 2023, 1:05 AM IST
ಕುಂದಾಪುರ: ಕೋಟೇಶ್ವರದ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ವೃತ್ತಿಪರ ಕಳ್ಳರನ್ನು ಬಂಧಿಸಿದ್ದಾರೆ.
ಕಾಸರಗೋಡಿನ ಹಾಶೀಮ್ ಎ.ಎಚ್. (42) ನನ್ನು ಕಾಸರಗೋಡಿನಲ್ಲಿ ಹಾಗೂ ಅಬೂಬಕ್ಕರ್ ಸಿದ್ದಿಕ್ (48) ನನ್ನು ಮಡಿಕೇರಿಯಲ್ಲಿ ಕುಂದಾಪುರ ಎಸ್ಐಗಳಾದ ಸದಾಶಿವ ಗವರೋಜಿ ಹಾಗೂ ಪ್ರಸಾದ್ ಅವರ ನೇತೃತ್ವದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಆರೋಪಿಗಳನ್ನು ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇವರನ್ನು ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಹೆಚ್ಚಿನ ವಿಚಾರಣೆ ನಡೆಸಿದ್ದು, ಈ ವೇಳೆ ಕುಂದಾ
ಪುರ ಮಾತ್ರವಲ್ಲದೆ, ಉಡುಪಿ ನಗರ, ಮಲ್ಪೆ ಠಾಣೆ ವ್ಯಾಪ್ತಿಯಲ್ಲೂ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
ಕಳ್ಳತನಗೈದ ಚಿನ್ನಾಭರಣ ಗಳನ್ನು ಮಂಜೇಶ್ವರದ ಜುವೆಲರಿ ಮಳಿಗೆಯೊಂದರಲ್ಲಿ ಮಾರಾಟ ಮಾಡಿದ್ದು, 15 ಲಕ್ಷ ರೂ. ಮೌಲ್ಯದ 300 ಗ್ರಾಂ ಚಿನ್ನ ಹಾಗೂ 1 ಲಕ್ಷ ರೂ. ಮೌಲ್ಯದ 1,481 ಗ್ರಾಂ. ಬೆಳ್ಳಿ ಸೇರಿ ಒಟ್ಟು 16 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಅಂತಾರಾಜ್ಯ ವೃತ್ತಿಪರ ಕಳ್ಳರಾಗಿದ್ದು, ಈಗಾಗಲೇ ಕೇರಳ ಸಹಿತ ದ.ಕ. ಜಿಲ್ಲೆಯ ವಿವಿಧೆಡೆ ಕಳ್ಳತನ ಹಾಗೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಎಸ್ಪಿ ಅಕ್ಷಯ್ ಎಂ. ಎಚ್., ಎಎಸ್ಪಿಎಸ್. ಟಿ. ಸಿದ್ದಲಿಂಗಪ್ಪ ಅವರ ನಿರ್ದೇಶನದಂತೆ ಕುಂದಾಪುರ ಡಿವೈಎಸ್ಪಿ
ಬೆಳ್ಳಿಯಪ್ಪ ಕೆ.ಯು. ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ. ಆರ್. ನೇತೃತ್ವದಲ್ಲಿ, ಕುಂದಾಪುರ ಎಸ್ಐಗಳಾದ ಸದಾಶಿವ ಗವರೋಜಿ, ಪ್ರಸಾದ್ ಕುಮಾರ್ ಕೆ. , ಎಎಸ್ಐ ಸುಧಾಕರ, ಸಿಬಂದಿಯಾದ ಸಂತೋಷ ಕುಮಾರ್ ಕೆ.ಯು., ಸಂತೋಷ ಕುಮಾರ್, ರಾಮ ಪೂಜಾರಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ದಿನೇಶ್ ಅವರನ್ನೊಳಗೊಂಡ ತಂಡವು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಹ ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ