ಮತ್ತಿಬ್ಬರು ಶಂಕಿತರ ವಶ

ಉಡುಪಿಯಲ್ಲಿ ಪೊಲೀಸರ ಕಾರ್ಯಾಚರಣೆ

Team Udayavani, Jan 15, 2020, 6:15 AM IST

mk-39

ಸಾಂದರ್ಭಿಕ ಚಿತ್ರ

ಉಡುಪಿ: ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನಷ್ಟು ಬಿರುಸುಗೊಂಡಿದ್ದು, ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ತಮಿಳುನಾಡು ಮೂಲದ ಇಬ್ಬರು ಶಂಕಿತ ಉಗ್ರರನ್ನು ಮಂಗಳವಾರ ಮುಂಜಾನೆ ವಶಕ್ಕೆ ಪಡೆದು ಕೊಳ್ಳಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಇದನ್ನು ಚಿಕ್ಕಮಗಳೂರಿನಲ್ಲಿ ದೃಢಪಡಿಸಿದ್ದಾರೆ.

ಬೆಂಗಳೂರು ಸಿಸಿಬಿ, ಉಡುಪಿ ಜಿಲ್ಲೆಯ ಪೊಲೀಸ ರೊಂದಿಗೆ ಕೇರಳ ಮತ್ತು ತಮಿಳುನಾಡು ಪೊಲೀಸರೂ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಶಂಕಿತ ಉಗ್ರರು ಕೇರಳದಿಂದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮುಂಬಯಿ ಯತ್ತ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಫ್ತಿಯಲ್ಲಿದ್ದು, ಕಾರ್ಯಾ ಚರಣೆ ನಡೆಸಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ.

ಸೋಮವಾರದಿಂದಲೇ ಬೀಡು
ಕೇರಳ ಮೂಲಕ ಇಬ್ಬರು ಶಂಕಿತ ಉಗ್ರರು ಕರಾವಳಿಗೆ ಆಗಮಿಸುತ್ತಿರುವ ಶಂಕೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ಪೊಲೀಸರು ಸೋಮವಾರ ರಾತ್ರಿಯಿಂದ ನಗರ ದೆಲ್ಲೆಡೆ ಬೀಡುಬಿಟ್ಟಿದ್ದರು. ಮಂಗಳವಾರ ಮುಂಜಾನೆ ಕಾರ್ಯಾ ಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಗೂಢ ಸ್ಥಳದಲ್ಲಿ ಉಗ್ರರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಗೌಪ್ಯತೆ ಕಾಯ್ದುಕೊಂಡ ಪೊಲೀಸರು
ಉಗ್ರರ ಬಂಧನ ಎಂಬ ಸುದ್ದಿ ಮಂಗಳವಾರ ಬೆಳಗ್ಗಿ ನಿಂದಲೇ ಹರಡತೊಡಗಿತ್ತು. ಆದರೆ ಪೊಲೀಸರು ಈ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಎಸ್‌ಪಿ ಕಚೇರಿ ಯಲ್ಲಿಯೂ ವರಿಷ್ಠಾಧಿಕಾರಿಗಳು ಇರಲಿಲ್ಲ. ಈ ಬಗ್ಗೆ ಯಾರಿಗೂ ಮಾಹಿತಿ ಕೂಡ ಇರಲಿಲ್ಲ. ಅವರ ಕಾರು ಮಾತ್ರ ಕಚೇರಿ ಆವರಣದಲ್ಲೇ ಇತ್ತು.

ರೈಲು ನಿಲ್ದಾಣದಲ್ಲಿ ಪೊಲೀಸ್‌ ಪಡೆ
ಸೋಮವಾರ ರಾತ್ರಿಯಿಂದಲೇ ಹಲವಾರು ಮಂದಿ ಪೊಲೀಸರು ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಫ್ತಿಯಲ್ಲಿ ಬೀಡುಬಿಟ್ಟಿದ್ದರು. ಮಂಗಳವಾರ ಬೆಳಗ್ಗೆ 6.20ರ ವೇಳೆಗೆ ರೈಲು ಆಗಮಿಸಿದ್ದು, ಈ ವೇಳೆ ಕಾರ್ಯಪ್ರವೃತ್ತರಾದ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದರು. ಆದರೆ ಅದುವರೆಗೂ ಅಲ್ಲಿದ್ದ
ವರು ಪೊಲೀಸರು ಎಂಬುದು ಯಾರಿಗೂ ಗೊತ್ತಾಗಿರಲಿಲ್ಲ. ಕೆಲವರನ್ನು ವಶಕ್ಕೆ ತೆಗೆದುಕೊಂಡು ಕೊಂಡೊಯ್ದಾಗಲೇ ಅವರು ಪೊಲೀಸರೆಂದು ತಿಳಿದುಬಂತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು.

ಗುಜರಾತ್‌ಗೆ ತೆರಳುತ್ತಿದ್ದರೇ?
ಶಂಕಿತ ಉಗ್ರರು ಕೇರಳದಿಂದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆಗಮಿಸುತ್ತಿದ್ದರು. ಇದು ಮಹಾರಾಷ್ಟ್ರ ಮಾರ್ಗ
ವಾಗಿ ಗುಜರಾತ್‌ಗೆ ತೆರಳುತ್ತಿದ್ದು, ಶಂಕಿತರು ಯಾವ ಕಡೆಗೆ ಪ್ರಯಾಣ ಬೆಳೆಸಿದ್ದರು ಮತ್ತು ಅವರ ಉದ್ದೇಶ ಏನಾಗಿತ್ತು ಎಂಬ ಬಗ್ಗೆ ವಿಚಾರಣೆಯಿಂದಷ್ಟೆ ಬಹಿರಂಗವಾಗಬೇಕಿದೆ.

ಟೆಕ್ಕಿಗಳ ಮೇಲೆ ಉಗ್ರರ ಕಣ್ಣು
ಬೆಂಗಳೂರು: ರಾಜ್ಯದಲ್ಲಿ ಐಸಿಸ್‌ ಬೇರುಗಳನ್ನು ಗಟ್ಟಿಗೊಳಿಸಲು ಶತಪ್ರಯತ್ನ ನಡೆಸುತ್ತಿದ್ದ ಮೆಹಬೂಬ್‌ ಪಾಷಾ ಮತ್ತು ಮನ್ಸೂರ್‌ ಖಾನ್‌ ಸಂಘಟನೆಗೆ ತಾಂತ್ರಿಕ ನೈಪುಣ್ಯವುಳ್ಳ ಟೆಕ್ಕಿಗಳನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಿರುವುದು ಬಯಲಾಗಿದೆ. ವಿದೇಶಿ ಉಗ್ರರ ಜತೆ ಡಿಜಿಟಲ್‌ ಸಂಪರ್ಕಕ್ಕೆ ಮತ್ತು ರಹಸ್ಯ “ಡಿಜಿಟಲ್‌ ಕೋಡ್‌’ಗಳ ವಿನಿಮಯಕ್ಕಾಗಿ ಟೆಕ್ಕಿಗಳ ನೇಮಕ ಮಾಡಲು ಹವಣಿಸಲಾಗಿತ್ತು ಎಂಬ ಮಾಹಿತಿಯೂ ಹೊರಬಿದ್ದಿದೆ. “ಜೆಹಾದಿ’ ಚಟುವಟಿಕೆಗಳನ್ನು ನಡೆಸುವ ಸಂಚಿನ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಮೊಹಮದ್‌ ಜೈದ್‌ ವಿಚಾರಣೆ ಹಾಗೂ ಪ್ರಾ. ತನಿಖೆಯಲ್ಲಿ ಈ ಮಾಹಿತಿ ಗೊತ್ತಾಗಿದೆ.

ಕಾರ್ಯಾಚರಣೆಯಲ್ಲಿ ಎನ್‌ಐಎ?
ಮೂಲಗಳ ಪ್ರಕಾರ ಒಟ್ಟು ಕಾರ್ಯಾಚರಣೆಯ ನೇತೃತ್ವವನ್ನು ನ್ಯಾಶನಲ್‌ ಇನ್‌ವೆಸ್ಟಿಗೇಶನ್‌ ಏಜೆನ್ಸಿ (ಎನ್‌ಐಎ) ವಹಿಸಿಕೊಂಡಿತ್ತು. ಪೊಲೀಸರ ಒಂದು ತಂಡ ಮಫ್ತಿಯಲ್ಲಿ ಶಂಕಿತ ಉಗ್ರರೊಂದಿಗೆ ರೈಲಿನಲ್ಲಿತ್ತು ಎನ್ನಲಾಗುತ್ತಿದೆ. ರೈಲಿನಲ್ಲಿ ಆರೋಪಿಗಳ ಚಲನವಲನಗಳನ್ನು ಗಮನಿಸಿ ಮತ್ತಷ್ಟು ಖಚಿತವಾದ ಅನಂತರ ಉಡುಪಿಯಲ್ಲಿ ಬಂಧನ ನಡೆದಿದೆ ಎನ್ನಲಾಗುತ್ತಿದೆ. ಎನ್‌ಐಎ ಯವರು ಮೊದಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಕೇರಳದಿಂದ ತಪ್ಪಿಸಿಕೊಂಡು ಬಂದಿದ್ದ ಇಬ್ಬರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಧ್ವಂಸಕ ಕೃತ್ಯ ನಡೆಸಲು ಇಬ್ಬರು ಉಗ್ರರು ಆಗಮಿಸಿದ್ದರು ಎಂಬ ಗುಪ್ತಚರ ದಳ ಮಾಹಿತಿ ಆಧಾರದ ಮೇಲೆ ಇವರನ್ನು ಉಡುಪಿ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
-ಬಸವರಾಜ ಬೊಮ್ಮಾಯಿ, ಗೃಹ ಸಚಿವರು

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.