ಕಲೆ, ಸಾಹಿತ್ಯದಿಂದ ಅನುಭವ, ಜೀವನ ಮೌಲ್ಯ


Team Udayavani, Mar 16, 2018, 4:40 PM IST

150318us1.jpg

ಉಡುಪಿ: ಯಾರಧ್ದೋ ಮಾತುಗಳನ್ನು ಕೇಳಿ ಬರುವ ಬದುಕಿನ ಮೌಲ್ಯಕ್ಕಿಂತಲೂ ಅನುಭವದಿಂದಲೇ ಒದಗುವ ಮೌಲ್ಯಗಳು ಉತ್ತಮ. ಕಲೆ, ಸಾಹಿತ್ಯದಿಂದ ಇಂತಹ ಅನುಭವ ಮತ್ತು ಜೀವನ ಮೌಲ್ಯಗಳು ದೊರೆಯುತ್ತವೆ ಎಂದು ಸಾಹಿತಿ ಜಯಂತ ಕಾಯ್ಕಿಣಿ ಅಭಿಪ್ರಾಯಪಟ್ಟರು. ಮಾ. 14ರಂದು ಎಂಜಿಎಂ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದ “ನನ್ನ ಸಾಹಿತ್ಯದ ಪ್ರೇರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೈಯಕ್ತಿಕ ವಿಚಾರಗಳನ್ನು ಮೀರಿದ ಸಂಬಂಧವೇರ್ಪಡಿಸಿ ನಮ್ಮನ್ನು ಒಂದುಗೂಡಿಸುವ ಶಕ್ತಿ ಕಲೆ ಮತ್ತು ಸಾಹಿತ್ಯಕ್ಕಿದೆ. ತಾಯಿಯಂತಹ ಕರುಣೆ ಮತ್ತು ಮಗುವಿನಂತಹ ನಿಷ್ಕಪಟ ದೃಷ್ಟಿಯಿಂದ ನೋಡಿದರೆ ಜಗತ್ತು ನಮಗೆ ಸುಂದರ ಮತ್ತು ಸಹನೀಯವಾಗುತ್ತದೆ. ಇಂತಹ ದೃಷ್ಟಿ ಬೆಳೆಸಿಕೊಳ್ಳುವುದನ್ನು ಕಲೆ ಕಲಿಸಿಕೊಡುತ್ತದೆ. ಜಾತಿ, ಮತ, ಅಂತಸ್ತುಗಳ ನರಕದಿಂದ ಮೇಲೆತ್ತುವ ಶಕ್ತಿ ಕೂಡ ಕಲೆಗಿದೆ ಎಂದು ಕಾಯ್ಕಿಣಿ ಅಭಿಪ್ರಾಯಪಟ್ಟರು.

ವ್ಯತ್ಯಾಸ ತಿಳಿಯದ ರಾಜಕಾರಣಿಗಳು
ಇಂದಿನ ದಿನಗಳಲ್ಲಿ ನಾವು ಯೋಚನಾ ಶಕ್ತಿಯನ್ನೇ ಕಳೆದುಕೊಂಡು ಮತ್ತೆ ಶಿಲಾಯುಗದ ಮಾನವರಾಗುವ ಪ್ರಯತ್ನದಲ್ಲಿದ್ದೇವೆ. ಉತ್ತಮ ಮನಸ್ಸುಗಳನ್ನು ಸೃಷ್ಟಿಸುವ, ಬೌದ್ಧಿಕ ಜ್ಞಾನವನ್ನು ಹೆಚ್ಚಿಸುವ ವಿಜ್ಞಾನ, ಕಲೆ ಪದವಿಗಳನ್ನು ಕೀಳಾಗಿ ಕಾಣಲಾಗುತ್ತಿದೆ. ಗುಲಾಮಗಿರಿಯತ್ತ ಕೊಂಡೊಯ್ಯುವ ಐಟಿ -ಬಿಟಿಗೆ ಆದ್ಯತೆ ನೀಡಲಾಗುತ್ತಿದೆ. ಶಿವರಾಮ ಕಾರಂತ, ಕುವೆಂಪು, ದ.ರಾ. ಬೇಂದ್ರೆ ಮೊದಲಾದ ಸಾಹಿತಿಗಳು ಕೂಡ ತಮ್ಮ ಸಾಹಿತ್ಯದಲ್ಲಿ ವಿಜ್ಞಾನ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ನಮಗೆ ಜ್ಞಾನಕೋಶವನ್ನೇ ಒದಗಿಸಿದ್ದಾರೆ. ಆದರೆ ನಾವು ಇದನ್ನು ಮರೆತಿದ್ದೇವೆ; ಓದುವುದು, ಯೋಚನೆ ಮಾಡುವುದನ್ನು ಬಿಟ್ಟಿದ್ದೇವೆ ಎಂದು ಅಭಿಪ್ರಾಯಪಟ್ಟ ಕಾಯ್ಕಿಣಿ, ಹಾಗಾಗಿಯೇ ಇಂದಿನ ರಾಜಕಾರಣಿಗಳಿಗೆ ಕೋಕಾಕೋಲಾ ಕಂಪೆನಿ ಮತ್ತು ಥರ್ಮಲ್‌ ಪವರ್‌ ಪ್ಲಾಂಟ್‌ಗಳ ನಡುವಿನ ವ್ಯತ್ಯಾಸ ಗೊತ್ತಿಲ್ಲ, ಎಲ್ಲದಕ್ಕೂ ಒಪ್ಪಿಗೆ ಕೊಡುತ್ತಾರೆ ಎಂದು ವಿಷಾದಿಸಿದರು.

ಕಾಲೇಜು ಪ್ರಾಂಶುಪಾಲೆ ಡಾ| ಸಂಧ್ಯಾ ಆರ್‌. ನಂಬಿಯಾರ್‌ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ| ಪುತ್ತಿ ವಸಂತ ಕುಮಾರ್‌, ವರದೇಶ್‌ ಹಿರೇಗಂಗೆ ಉಪಸ್ಥಿತರಿದ್ದರು. ಉಪನ್ಯಾಸಕಿ ಶರಿತಾ ಹೆಗ್ಡೆ ವಂದಿಸಿದರು. ಉಪನ್ಯಾಸಕ ಶಮಂತ ಕುಮಾರ್‌ ಕೆ.ಎಸ್‌. ಕಾರ್ಯಕ್ರಮ ನಿರ್ವಹಿಸಿದರು. 

ಮುಂಬಯಿ ಬದುಕೇ ಪ್ರೇರಣೆಯಾಯಿತು ಉನ್ನತ ವಿದ್ಯಾಭ್ಯಾಸಕ್ಕೆಂದು ಮನೆ ಬಿಟ್ಟು ಹೊರಗೆ ನಿಲ್ಲಬೇಕಾಗಿ ಬಂದಾಗ ಮನೆಯ ನೆನಪು ಕಾಡಿತು. ಆಗ ಸಾಹಿತ್ಯದ ಅಭಿರುಚಿ ಉಂಟಾಯಿತು. ಅನಂತರ ಉದ್ಯೋಗದ ನಿಮಿತ್ತ ಮುಂಬಯಿಗೆ ತೆರಳಿ ಅಲ್ಲಿ 23 ವರ್ಷಗಳ ಕಾಲ ಇದ್ದಾಗ ಯಶವಂತ ಚಿತ್ತಾಲ ಅವರ ಆತ್ಮೀಯ ಒಡನಾಟ ಲಭಿಸಿತು. ಸಾಹಿತ್ಯ, ಸಿನೆಮಾ, ನಾಟಕ ರಂಗದ ಅನುಭವ ದೊರೆಯಿತು. ಮುಂಬಯಿ ಒಂದು ಕಾಯಕದ ಕೈಲಾಸ; ಅಲ್ಲಿ ಜಾತಿ, ಅಂತಸ್ತು ಕೇಳುವವರಿಲ್ಲ. ಇವೆಲ್ಲವೂ ನನ್ನ ಸಾಹಿತ್ಯ, ಬದುಕಿನ ಮೇಲೆ ತುಂಬಾ ಪ್ರಭಾವ ಬೀರಿವೆ ಎಂದು ಜಯಂತ ಕಾಯ್ಕಿಣಿ ಹೇಳಿದರು.  

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.