ದುರಸ್ತಿಗೆ ಇನ್ನೂ ಕೂಡಿ ಬರದ ಕಾಲ
Team Udayavani, Mar 17, 2020, 5:39 AM IST
ಗೋಳಿಯಂಗಡಿ: ಹೆಂಗವಳ್ಳಿಯ ಗ್ರಾಮಕರಣಿಕರ ಕಚೇರಿ ಕಟ್ಟಡ ಸಂಪೂರ್ಣ ಶಿಥಿಲ ಗೊಂಡಿದ್ದು, ಇನ್ನೂ ದುರಸ್ತಿಗೆ ಮಾತ್ರ ಕಾಲವೇ ಕೂಡಿ ಬಂದಿಲ್ಲ. ಕಟ್ಟಡ ಬಿದ್ದು ಹೋಗುವ ಹಂತದಲ್ಲಿದ್ದು, ಆದರೂ ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಅಥವಾ ಅಧಿಕಾರಿಗಳಾಗಲಿ ಈ ಬಗ್ಗೆ ಗಮನವೇ ಹರಿಸುತ್ತಿಲ್ಲ.
ಹೆಂಗವಳ್ಳಿ ಪಂಚಾಯತ್ ವ್ಯಾಪ್ತಿಯ ತೊಂಭತ್ತು ಶಾಲಿಗುಡ್ಡೆ ಬಳಿ ಕಾರ್ಯಾ ಚರಿಸುತ್ತಿರುವ ಗ್ರಾಮಕರಣಿಕರ ಕಚೇರಿ ಕಂದಾಯ ಇಲಾಖೆಗೆ ಸೇರಿದ್ದು, ಈ ಕಟ್ಟಡದಲ್ಲಿ ಗ್ರಾಮಕರಣಿಕರ ಕಚೇರಿ ಹಾಗೂ ವಸತಿ ಗೃಹ ಇದೆ. ಈ ಕಟ್ಟಡವು 5 ವರ್ಷಗಳ ಹಿಂದೆಯೇ ಶಿಥಿಲಗೊಂಡು ದುರಸ್ತಿಯಾಗದೇ ಬೀಳುವ ಹಂತಕ್ಕೆ ತಲುಪಿತ್ತು. ಆ ಸಂದರ್ಭದಲ್ಲಿ ವಸತಿಗೃಹದ ಭಾಗ ಮಾತ್ರ ದುರಸ್ತಿ ಮಾಡಲಾಗಿತ್ತು.
ಪ್ರಸ್ತುತ ಈ ಕಚೇರಿಯು ವಸತಿ ಗೃಹದಲ್ಲಿಯೇ ಇದೆ. ಪ್ರಸ್ತುತ ಇಲ್ಲಿರುವ ಗ್ರಾಮಕರಣಿಕರು ಇದರ ಪಕ್ಕದಲ್ಲೇ ಇರುವ ಸಣ್ಣ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಚೇರಿಯ ಒಳಭಾಗದಲ್ಲಿ ಕುಳಿತುಕೊಳ್ಳಲು ಹಾಗೂ ಫೈಲ್ಗಳನ್ನು ಸಂಗ್ರಹಿಸಿ ಇಡಲು ಸೂಕ್ತವಾದ ವ್ಯವಸ್ಥೆಯೂ ಇಲ್ಲದಂತಾಗಿದೆ.
ಕಟ್ಟಡದ ಒಂದು ಭಾಗವು ಶಿಥಿಲಗೊಂಡು ಕೆಲವೆಡೆ ಮೇಲಿನ ಮಾಡು ಹೋಗಿದೆ. ಕಟ್ಟಡದ ಒಳ ಭಾಗದಲ್ಲೇ ಮುರಿದು ಬಿದ್ದ ಪಕ್ಕಾಸು, ಹೆಂಚಿನ ರಾಶಿಗಳು ಇನ್ನೂ ಕೂಡ ಹಾಗೆಯೇ ಇವೆ. ಕಿಟಿಕಿ, ಬಾಗಿಲುಗಳು ಮುರಿದು ಹೋಗಿದ್ದು ಪ್ರಾಣಿಗಳ ವಾಸಸ್ಥಳವಾಗಿದೆ.
ಸುದಿನ ವರದಿ
ಹೆಂಗವಳ್ಳಿಯ ಈ ಗ್ರಾಮ ಕರಣಿಕರ ಕಚೇರಿಯು ಕಳೆದ 3 ವರ್ಷಗಳಿಂದ ದುರಸ್ತಿಯಾಗದ ಬಗ್ಗೆ, ಬೀಳುವ ಸ್ಥಿತಿಯ ಕುರಿತಂತೆ “ಉದಯವಾಣಿ ಸುದಿನ’ವು ಜ. 24ರಂದು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು.
ದುರಸ್ತಿಗೆ ಆಗ್ರಹ
ಮಳೆಗಾಲದಲ್ಲಿ ಮಳೆ ನೀರು ಕಟ್ಟಡದ ಒಳಭಾಗದಲ್ಲಿ ಶೇಖರಣೆಯಾಗುತ್ತಿತ್ತು. ಪಕ್ಕದ ಕಚೇರಿಯ ಗೋಡೆಗಳು ತೇವಾಂಶದಿಂದ ಕೂಡಿರುತ್ತಿದ್ದವು. ಮಳೆ ನೀರು ನಿಂತ ಪರಿಣಾಮ ಈಗ ಹಳೆಯ ಗೋಡೆಯು ಕೂಡ ಕುಸಿದು ಬೀಳುವ ಹಂತ ತಲುಪಿದೆ. ಈ ಬಾರಿಯಾದರೂ ಮಳೆಗಾಲಕ್ಕೆ ಮುನ್ನ ಈ ಕಟ್ಟಡವನ್ನು ದುರಸ್ತಿ ಮಾಡಲಿ ಎನ್ನುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಾಕೃತಿಕ ವಿಕೋಪ ನಿಧಿ ಬಳಕೆ
ಈ ಬಗ್ಗೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಆದರೆ ಸದ್ಯಕ್ಕೆ ದುರಸ್ತಿಗೆ ಅನುದಾನ ಲಭ್ಯವಿರದ ಕಾರಣ, ಪ್ರಾಕೃತಿಕ ವಿಕೋಪ ನಿಧಿಯಡಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಹೆಂಗವಳ್ಳಿ ಪಂಚಾಯತ್ ಕಚೇರಿಯಲ್ಲಿಯೂ ಗ್ರಾಮ ಕರಣಿಕರ ಕಚೇರಿಗೆ ಗ್ರಾ.ಪಂ. ವ್ಯವಸ್ಥೆ ಮಾಡಿಕೊಡಬಹುದು.
– ತಿಪ್ಪೇಸ್ವಾಮಿ, ತಹಶೀಲ್ದಾರ್,ಕುಂದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು