ಕ್ರೀಡಾ ಉತ್ಸವವಾಗಿ “ಅಟಲ್‌ ಟ್ರೋಫಿ’: ಶಾಸಕ ರಘುಪತಿ ಭಟ್‌


Team Udayavani, Dec 23, 2022, 6:14 AM IST

ಕ್ರೀಡಾ ಉತ್ಸವವಾಗಿ “ಅಟಲ್‌ ಟ್ರೋಫಿ’: ಶಾಸಕ ರಘುಪತಿ ಭಟ್‌

ಉಡುಪಿ: ಅಟಲ್‌ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನೆಲೆಯಲ್ಲಿ ಅಟಲ್‌ ಟ್ರೋಫಿ, ಬೂತ್‌ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಟಲ್‌ ಟ್ರೋಫಿಗೆ ಸಕಲ ತಯಾರಿ ಮಾಡಿಕೊಳ್ಳಲಾಗಿದ್ದು, ಇದು ಕ್ರೀಡಾ ಉತ್ಸವವಾಗಿ ಮೂಡಿಬರಲಿದೆ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಅಟಲ್‌ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಹಮ್ಮಿಕೊಂಡಿರುವ “ಅಟಲ್‌ ಉತ್ಸವ’ದ ಪ್ರಯುಕ್ತ ಎಂಜಿಎಂ ಕಾಲೇಜು ಮೈದಾನದಲ್ಲಿ ಡಿ. 24ರಂದು ನಡೆಯಲಿರುವ ಹೊನಲು ಬೆಳಕಿನ ರಾಷ್ಟ್ರಮಟ್ಟದ ಮುಕ್ತ ಪ್ರೊ ಕಬಡ್ಡಿ ಪಂದ್ಯಾಟ ಹಾಗೂ ಡಿ. 25ರಂದು ನಡೆಯಲಿರುವ ಬೂತ್‌ ಸಂಗಮದ ಪೂರ್ವಭಾವಿಯಾಗಿ ಅಟಲ್‌ ಟ್ರೋಫಿಯನ್ನು ಗುರುವಾರ ಅನಾವರಣಗೊಳಿಸಿ, ಜನಪ್ರತಿನಿಧಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ 1999ರಿಂದ ಅಟಲ್‌ ಉತ್ಸವವನ್ನು ವಿವಿಧ ಕ್ರೀಡೆಗಳ ಮೂಲಕ ಆಚರಿಸಲಾಗುತ್ತಿದೆ. ಈ ಬಾರಿಯ “ಅಟಲ್‌ ಟ್ರೋಫಿ’ ಪ್ರೊ ಕಬಡ್ಡಿಯಲ್ಲಿ ರಾಷ್ಟ್ರ ಮಟ್ಟದ 12 ತಂಡಗಳು ಭಾಗವಹಿಸಲಿದ್ದು, 25 ಸಾವಿರಕ್ಕೂ ಮಿಕ್ಕಿ ಕ್ರೀಡಾಸಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಜನಪ್ರತಿನಿಧಿಗಳು ತಮ್ಮ ವಾರ್ಡ್‌ನಲ್ಲಿರುವ ಕ್ರೀಡಾ ಸಂಘಟನೆಗಳನ್ನು ಆಹ್ವಾನಿಸಿ ಉತ್ಸವದೋಪಾದಿ ನಡೆಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಎಸ್‌. ಕಲ್ಮಾಡಿ, ನಗರಸಭೆ ಸ್ಥಾಯೀ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ್ರೊ ಕಬಡ್ಡಿ ಸಂಚಾಲಕ, ನಗರಸಭೆ ಸದಸ್ಯ ಗಿರೀಶ್‌ ಎಂ. ಅಂಚನ್‌, ಯುವ ಸಂಗಮದ ಉಸ್ತುವಾರಿ ಉಮೇಶ್‌ ನಾಯಕ್‌, ಕಲ್ಯಾಣಪುರ, ತೆಂಕನಿಡಿ ಯೂರು, ಬಡಾನಿಡಿಯೂರು, ಅಂಬಲಪಾಡಿ ಗ್ರಾ.ಪಂ. ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಗಾಯತ್ರಿ, ಪ್ರಭಾಕರ ತಿಂಗಳಾಯ, ರೋಹಿಣಿ ಉಪಸ್ಥಿತರಿದ್ದರು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿದರು. ಬೂತ್‌ ಸಂಗಮದ ಸಂಚಾಲಕ ಕೆ. ರಾಘವೇಂದ್ರ ಕಿಣಿ ನಿರೂಪಿಸಿ, ವಂದಿಸಿದರು.

ಬೂತ್‌ ಸಂಗಮ ಯಶಸ್ಸಿಗೆ ಗ್ರಾಮ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು. ಪ್ರತೀ ಬೂತ್‌ನಿಂದ ಕನಿಷ್ಠ 113 ಮಂದಿ ಭಾಗವಹಿಸುವಂತೆ ಜನಪ್ರತಿನಿಧಿಗಳು ಉಸ್ತುವಾರಿ ವಹಿಸಿಕೊಳ್ಳಬೇಕು. 226 ಬೂತ್‌ಗಳ ಅಧ್ಯಕ್ಷರ ಮನೆಗಳಿಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಉಡುಪಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಸಭೆ ನಡೆಸಿ ಅಟಲ್‌ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. 226 ಬೂತ್‌ ಅಧ್ಯಕ್ಷರಲ್ಲಿ ಐವರು ಅಧ್ಯಕ್ಷರನ್ನು ಎಲೆಕ್ಟ್ರಾನಿಕ್‌ ಡಿವೈಸ್‌ನ ಮೂಲಕ ಆರಿಸಿ ಅವರ ಮೂಲಕ ದೀಪ ಪ್ರಜ್ವಲಿಸಲಾಗುವುದು. ಪ್ರತಿಯೊಬ್ಬ ಕಾರ್ಯಕರ್ತರು ಬೂತ್‌ ಸಂಗಮವನ್ನು ಸವಾಲಾಗಿ ಸ್ವೀಕರಿಸಿ ಯಶಸ್ವಿಗೊಳಿಸಬೇಕೆಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

truck rams bus in Haryana’s Ambala

Ambala: ಟ್ರಾವೆಲರ್ ಮಿನಿ ಬಸ್ ಗೆ ಟ್ರಕ್ ಡಿಕ್ಕಿ; ಏಳು ಮಂದಿ ಸಾವು, 25 ಪ್ರಯಾಣಿಕರಿಗೆ ಗಾಯ

T20 series; Bangladesh lost series against USA

T20 series; ಯುಎಸ್ ವಿರುದ್ಧ ಸರಣಿ ಸೋತ ಬಾಂಗ್ಲಾ ಹುಲಿಗಳು; ಎರಡನೇ ಪಂದ್ಯದಲ್ಲೂ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Fraud: ವಾಟ್ಸಾಪ್‌ ಲಿಂಕ್‌ಗೆ ಕ್ಲಿಕ್‌; ಬ್ಯಾಕ್‌ ಖಾತೆಯಿಂದ 82,200 ರೂಪಾಯಿ ಮಾಯ

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

5-doddanagudde

ನಾಳೆ ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಶತಬ್ರಹ್ಮಕುಂಭಾಭಿಷೇಕ,ಕಲಶಸೇವೆ ಸಹಿತ ಹಲವು ಕಾರ್ಯಕ್ರಮ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.