“ಹರಿಕಥೆ ಕೇಳುವುದರಿಂದ ನಾಸ್ತಿಕತೆ ಮಾಯ’
Team Udayavani, Sep 27, 2019, 5:18 AM IST
ಉಡುಪಿ: ಹರಿಕಥಾ ಪರಿಷತ್ತು ಗಳು ಸಮೃದ್ಧವಾಗಿ ಬೆಳೆದು ಗ್ರಾಮೀಣ ಭಾಗದಲ್ಲಿ ಹರಿಕಥೆ ಬಗೆ ಜಾಗೃತಿ ಮೂಡಲಿ. ಆ ಮೂಲಕ ಜನರ ಮನಸ್ಸಿನಲ್ಲಿರುವ ನಾಸ್ತಿಕತೆ ಮಾಯವಾಗಲಿ ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಿಳಿಸಿದರು.
ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಪಲಿಮಾರು ಮಠ, ಮಂಗಳೂರು ಹರಿಕಥಾ ಪರಿಷತ್ತು, ಬೆಂಗಳೂರು ಅಖೀಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು, ಕಾರ್ಕಳ ಶ್ರೀ ಹಂಡೆದಾಸ ಪ್ರತಿಷ್ಠಾನ ಸಹಯೋಗ ದಲ್ಲಿ ಗುರುವಾರ ರಾಜಾಂಗಣದಲ್ಲಿ ಆಯೋಜಿಸಿದ್ದ “60 ದಿನಗಳ ನಿರಂತರ ಹರಿಕಥಾ ಜ್ಞಾನ ಯಜ್ಞ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಜನರಿಗೆ ಮನೋರಂಜನೆ ನೀಡುವುದರ ಜತೆಗೆ ಮನಸ್ಸಿನಲ್ಲಿ ದೇವರನ್ನು ನೆಲೆಸುವಂತೆ ಮಾಡಲು ಹರಿಕಥಾ ಕಾರ್ಯಕ್ರಮ ಸಹಕಾರಿ. ಶ್ರೀ ಕೃಷ್ಣ ಮಠದಲ್ಲಿ ಅನೇಕ ಹರಿಕಥಾ ಭಾಗಗಳು ನಡೆದಿವೆ. ಆದರೆ ಇದೇ ಮೊದಲ 60 ದಿನಗಳ ಕಾಲ ನಿರಂತರವಾಗಿ ವಿವಿಧ ಊರುಗಳ ಹರಿದಾಸರನ್ನು ಕರೆದು ಹರಿಕಥಾ ಕಾರ್ಯ ಕ್ರಮವನ್ನು ನಡೆಸಿರುವುದು ಶ್ಲಾಘನೀಯ. 4ವರ್ಷದ ಮಗು ಸಹ ಹರಿಕಥಾ ಭಾಗ ನಡೆಸಿಕೊಟ್ಟಿರುವುದು ಈ ಬಾರಿ ವಿಶೇಷ ಎಂದರು.
ಉಡುಪಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ದೇವಾನಂದ ಉಪಾಧ್ಯಾಯ, ಮಂಗಳೂರು ಹರಿಕಥಾ ಪರಿಷತ್ತು ಅಧ್ಯಕ್ಷ ಮಹಾಬಲ ಶೆಟ್ಟಿ, ಬೆಂಗಳೂರು ಕೀರ್ತನ ಕಲಾ ಪರಿಷತ್ತು ಲೋಕೇಶದಾಸ, ಕಾರ್ಕಳ ಹಂಡೆದಾಸ ಪ್ರತಿಷ್ಠಾನದ ರುಕ್ಮಣಿ ಹಂಡೆ, ಬೆಂಗಳೂರು ನಾಗರಾಜ್ ಉಪಸ್ಥಿತರಿದ್ದರು. ಪರಿಷತ್ತಿನ ಜಿಲ್ಲಾ ಸಂಚಾಲಕ ವೈ. ಅನಂತಪದ್ಮನಾಭ ಭಟ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ