ಉಡುಪಿ: ಮಿನಿ ಎಟಿಎಂ ಹ್ಯಾಕ್ ಮಾಡಿ ವಂಚನೆ
Team Udayavani, Dec 1, 2022, 8:24 PM IST
ಉಡುಪಿ: ಬ್ಯಾಂಕ್ವೊಂದರ ಮಿನಿ ಎಟಿಎಂ ಹ್ಯಾಕ್ ಮಾಡಿ ವಂಚಿಸಿದ ಘಟನೆ ನಡೆದಿದೆ.
ಕುಂದಾಪರದ ನಿವಾಸಿ ಮಲ್ಲಿಕಾರ್ಜುನ ಶೆಟ್ಟಿ ಅವರು ಚಂದ್ರಶೇಖರ ಶೆಟ್ಟಿರವರ ಮಾಲಕತ್ವದ ಇಡೂರು ಕುಂಜ್ಞಾಡಿಯಲ್ಲಿರುವ ಮಾತೃಶ್ರೀ ಎಂಟರ್ಪ್ರೈಸಸ್ ಪೆಟ್ರೋಲ್ ಬಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. 2 ವರ್ಷಗಳ ಹಿಂದೆ ಫಿನೋ ಬ್ಯಾಂಕ್ ವತಿಯಿಂದ ಮಿನಿ ಎಟಿಎಂ ಅನ್ನು ಪೆಟ್ರೋಲ್ ಬಂಕ್ನ ವ್ಯವಹಾರಗಳ ಬಗ್ಗೆ ಪಡೆದುಕೊಂಡಿದ್ದರು.
ಇದರಲ್ಲಿ ವ್ಯವಹಾರಕ್ಕೆ ಬಳಸಿದ ಹಣವು ಫಿನೋ ಬ್ಯಾಂಕ್ನ ಚಂದ್ರಶೇಖರ ಶೆಟ್ಟಿಯವರ ಖಾತೆಗೆ ಜಮೆಗೊಳ್ಳುತ್ತಿತ್ತು. ಇದನ್ನು ಮಲ್ಲಿಕಾರ್ಜುನ ಶೆಟ್ಟಿ ಅವರು ಪ್ರತಿದಿನ ಸಂಜೆ ಮೊಬೈಲ್ಗೆ ಬಂದ ಓಟಿಪಿ ಪಡೆದು ಚಂದ್ರಶೇಖರ್ ಶೆಟ್ಟಿಯವರ ಕೆನರಾ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದ್ದರು. ನ.23ರಂದು ಸಂಜೆ ಮಲ್ಲಿಕಾರ್ಜುನ ಶೆಟ್ಟಿಯವರು ಮಾಲಕರ ಖಾತೆಗೆ ವರ್ಗಾವಣೆ ಮಾಡಲು ಮಿನಿ ಎಟಿಎಂ ಪರಿಶೀಲಿಸಿದಾಗ ಅಕೌಂಟ್ನಲ್ಲಿ 12.24ರೂ.ಮಾತ್ರ ಇತ್ತು. ಬ್ಯಾಂಕ್ ಸ್ಟೇಟ್ಮೆಂಟ್ ಪಡೆದು ಪರಿಶೀಲಿಸಿದಾಗ ಅದೇ ದಿನ 38,550ರೂ. ಯಾವುದೋ ಅಪರಿಚಿತ ಮೊಬೈಲ್ ಸಂಖ್ಯೆಗೆ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.
ಮೆಷಿನ್ ಹ್ಯಾಕ್ ಮಾಡಿ ನಷ್ಟ ಉಂಟು ಮಾಡಿದ್ದಾರೆ ಎನ್ನಲಾಗಿದೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ