ಮಲ್ಪೆ ಬಂದರಿನಲ್ಲಿ ಬಂಟ್ವಾಳದ ಯುವಕನ ಮೇಲೆ ಮುಸುಕುಧಾರಿಗಳಿಂದ ಹಲ್ಲೆ
ಮೀನು ಬಂದರಿನಲ್ಲಿ ಬೆಳ್ಳಂ ಬೆಳಗ್ಗೆ ಹರಿಯಿತು ನೆತ್ತರು
Team Udayavani, Jun 7, 2019, 11:57 AM IST
ಮಲ್ಪೆ: ಮೀನು ವ್ಯಾಪಾರದ ಉದ್ದೇಶದಿಂದ ಉಡುಪಿಯ ಮಲ್ಪೆ ಬಂದರಿಗೆ ಬಂದಿದ್ದ ಫರಂಗಿ ಪೇಟೆಯ ಯುವಕನ ಮೇಲೆ ಅಪರಿಚಿತ ಮುಸುಕುಧಾರಿಗಳು ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ದಾಳಿಗೊಳಗಾದ ಯುವಕನನ್ನು ಬಂಟ್ವಾಳದ ಫರಂಗಿ ಪೇಟೆ ನಿವಾಸಿ ರಿಯಾಝ್ (32) ವರ್ಷ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ರಿಯಾಜ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಮುಂಜಾನೆ 4.30ರ ಸುಮಾರಿಗೆ ರಿಯಾಜ್ ಸ್ನೇಹಿತರೊಂದಿಗೆ ತನ್ನ ಮೀನಿನ ವಾಹನದಲ್ಲಿ ಮಲ್ಪೆಗೆ ಆಗಮಿಸಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ವಾಹನದಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ತಲಾವಾರಿನಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ದಾಳಿಯಿಂದಾಗಿ ರಿಯಾಜ್ ಅವರ ಕುತ್ತಿಗೆ ಭಾಗ ಮತ್ತು ಕೈಗೆ ಗಾಯವಾಗಿದ್ದು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ