ಚಿನ್ನ ಪಾಲಿಷ್ ನೆಪದಲ್ಲಿ ಕಳವಿಗೆ ಯತ್ನ: ಇಬ್ಬರ ಬಂಧನ
Team Udayavani, Sep 20, 2022, 12:49 AM IST
ಹೆಬ್ರಿ: ಹಿರಿಯಡಕ ಪರಿಸರದಲ್ಲಿ ಚಿನ್ನ ಪಾಲಿಷ್ ಮಾಡಿಕೊಡುವುದಾಗಿ ಹೇಳುತ್ತಾ ಕಳ್ಳತನಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಆನಂದ ಕಿಶೋರ್ ಮೆಹ್ತಾ ಮತ್ತು ಮನೋಜ್ ಯಾದವ್ನನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಹಿರಿಯಡಕದ ಕಿಶೋರ್ ಅವರ ಮನೆಯ ಬಳಿ ಇಬ್ಬರು ಅಪರಿಚಿತ ವ್ಯಕ್ತಿಗಳು ಬ್ಯಾಗನ್ನು ಹಾಕಿಕೊಂಡು ಬಂದು ಹಿಂದಿ ಭಾಷೆಯಲ್ಲಿ ಮಾತನಾಡಿ, ನಿಮ್ಮಲ್ಲಿ ಚಿನ್ನವಿದ್ದರೆ ಕೊಡಿ ಅದನ್ನು ಪಾಲಿಷ್ ಮಾಡಿ ಕೊಡುತ್ತೇವೆ ಎಂದು ಹೇಳಿದ್ದರು. ಅವರ ಬಗ್ಗೆ ವಿವರವಾಗಿ ವಿಚಾರಿಸಿದಾಗ ಅವರ ಮೇಲಿನ ಸಂಶಯ ಬಲಗೊಂಡಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿರಿಯಡಕ ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ