ಸೊಳ್ಳೆಗಳ ಹಾವಳಿ ತಪ್ಪಿಸುವ ಯತ್ನ; ಜಿಲ್ಲೆಯಲ್ಲಿ ಸೊಳ್ಳೆ ಪರದೆಗೆ ಬೇಡಿಕೆ
Team Udayavani, Aug 2, 2019, 5:15 AM IST
ಉಡುಪಿ: ಮಳೆಗಾಲದಲ್ಲಿ ಮಲೇರಿಯಾ, ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಮುಂಜಾಗರೂಕತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಮನೆ-ಮನೆಗೆ ತೆರಳಿ ಕರಪತ್ರಗಳನ್ನು ಹಂಚಲಾಗಿದೆ.
ಸೊಳ್ಳೆ ಪರದೆಗೂ ಅಪಾರ ಬೇಡಿಕೆಯಿದ್ದು ಈ ವರ್ಷ ಜುಲೈ ತಿಂಗಳವರೆಗೆ ಜಿಲ್ಲೆಯಾದ್ಯಂತ ಒಟ್ಟು 23,548 ಸೊಳ್ಳೆ ಪರದೆಗಳನ್ನು ವಿತರಿಸಲಾಗಿದೆ. 2018ರಲ್ಲಿ ಒಟ್ಟು 23,315 ಸೊಳ್ಳೆ ಪರದೆಗಳನ್ನು ವಿತರಿಸಲಾಗಿತ್ತು. ಸೊಳ್ಳೆ ಪರದೆ ವಿತರಣೆಯ ಸಂಖ್ಯೆ ಈ ವರ್ಷಾಂತ್ಯಕ್ಕೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಇದು ಸರಕಾರದಿಂದ ವಿತರಣೆಯಾಗುತ್ತಿದ್ದರೆ ಖಾಸಗಿಯಾಗಿ ಕೊಂಡುಕೊಳ್ಳುವವರೂ ಇದ್ದಾರೆ. ಸಮರ್ಪಕ ರೀತಿ ಉಪಯೋಗವಾಗಲಿ
ಈಗಾಗಲೇ ವಿತರಣೆಯಾಗಿರುವ ಸೊಳ್ಳೆ ಪರದೆಗಳು ಸರಿಯಾದ ರೀತಿಯಲ್ಲಿ ಉಪಯೋಗ ಆಗುತ್ತಿಲ್ಲ ಎಂಬ ಆರೋಪವೂ ಕೇಳಿ ಬರುತ್ತಿದೆ. ಬಹುತೇಕ ಮಂದಿ ಕೊಬ್ಬರಿ ಒಣಗಿಸಲು, ಮಳೆನೀರು ಸೋಸಲು, ಕೀಟಗಳ ಭಾದೆ ತಪ್ಪಿಸಲು ಇವುಗಳನ್ನು ಅಳವಡಿಸುವಂತಹ ಘಟನೆಗಳು ನಡೆಯುತ್ತಿವೆ. ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದರೂ ಸಾರ್ವಜನಿಕರೂ ಕೂಡ ಸಹಕಾರ ನೀಡಬೇಕಿದೆ ಎಂದು ಹೇಳುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು. 50 ಮಲೇರಿಯಾ, 90 ಡೆಂಗ್ಯೂ ಪ್ರಕರಣ.
2015ರಲ್ಲಿ ಮಲೇರಿಯಾ 1,366, ಡೆಂಗ್ಯೂ 331, 2016ರಲ್ಲಿ ಮಲೇರಿಯಾ 1,168, ಡೆಂಗ್ಯೂ 600, 2017ರಲ್ಲಿ ಮಲೇರಿಯಾ 513, ಡೆಂಗ್ಯೂ 383, 2018ರಲ್ಲಿ ಮಲೇರಿಯಾ 221, ಡೆಂಗ್ಯೂ 228 ಹಾಗೂ 2019ರ ಜುಲೈ ತಿಂಗಳವರೆಗೆ 50 ಮಲೇರಿಯಾ ಹಾಗೂ 97 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ಆಗಬೇಕಿದೆ ಮತ್ತಷ್ಟು ಜಾಗೃತಿ
ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೊಜಿಸಿದರೂ ಸಿಕ್ಕಲೆಲ್ಲ ಕಸ, ತ್ಯಾಜ್ಯ ಎಸೆಯುವವರ ಸಮಖ್ಯೆಯೇನೂ ಕಡಿಮೆಯಾಗಿಲ್ಲ. ಹೊಟೇಲು, ಕಾರ್ಖಾನೆಗಳ ತ್ಯಾಜ್ಯ ನೀರು ಹರಿಯುವುದು ನಿಂತಿಲ್ಲ. ನಗರದ ಹಲವಾರು ವಾರ್ಡ್ಗಳಲ್ಲಿ ಬಾವಿ ಸೇರುತ್ತಿರುವ ಚರಂಡಿ ನೀರಿನ ಸಮಸ್ಯೆಯೂ ಹಾಗೆಯೇ ಉಳಿದಿದೆ. ತೆರೆದ ಚರಂಡಿಯಲ್ಲಿ ತ್ಯಾಜ್ಯ ನೀರು ಹರಿಯುವ ದೃಶ್ಯ ಹಲವೆಡೆ ಸಿಗುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿದ್ದರೆ ಆರೋಗ್ಯ ಇಲಾಖೆಯಷ್ಟೇ ನಗರಸಭೆ, ಸ್ಥಳೀಯ ವಾರ್ಡ್ ಸದಸ್ಯರು, ಸಾರ್ವಜನಿಕರ ಶ್ರಮ ಕೂಡ ಅತೀ ಅಗತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ