ಉಡುಪಿ ಕ್ರೀಡಾ ರಾಜಧಾನಿಯಾಗಿಸಲು ಯತ್ನ
Team Udayavani, May 27, 2017, 12:52 PM IST
ಉಡುಪಿ: ಜಿಲ್ಲೆಯ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ವಿಶೇಷವಾಗಿ ಹೆಚ್ಚಿನ ಅನುದಾನ ತರಲಾಗಿದ್ದು, ರೂಫಿಂಗ್, ಒಳಾಂಗಣ ಕ್ರೀಡಾಂಗಣಕ್ಕೆ ಎಸಿ ಅಳವಡಿಕೆ, ಮಹಿಳಾ ಕ್ರೀಡಾ ಅಕಾಡೆಮಿಗೆ ತಲಾ 1 ಕೋ. ರೂ. ಸುಸಜ್ಜಿತ ಜಿಮ್, ಫಿಟ್ನೆಸ್ ಕಾಪಾಡಿಕೊಳ್ಳಲು ಸಾಯ್ ಸೆಂಟರ್ ಆರಂಭಿಸಲು ತಲಾ 2 ಕೋ. ರೂ. ಕ್ರೀಡಾ ಅಕಾಡೆಮಿಗೆ 1. 5 ಕೋ.ರೂ.ಯನ್ನು ಕ್ರೀಡಾ ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಉಡುಪಿಯನ್ನು ಕ್ರೀಡಾ ರಾಜಧಾನಿಯನ್ನಾಗಿಸಲು ಸರ್ವ ಪ್ರಯತ್ನ ನಡೆಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಕೊರಗ ಸಮುದಾಯದ ಯುವಕ- ಯುವತಿಯರಿಗಾಗಿ ಶುಕ್ರವಾರ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರಿಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಕೊರಗರು ಸಹ ಸಮಾಜದ ಎಲ್ಲ ಸಮುದಾಯದಂತೆ ಮುನ್ನಡೆಯಲು ಕ್ರೀಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು. ಕೊರಗರ ಸಮಾಜದವರು ತಮ್ಮಲ್ಲಿರುವ ನ್ಯೂನತೆಗಳನ್ನು ಮೆಟ್ಟಿನಿಂತು ಇತರರೊಂದಿಗೆ ಸ್ಪರ್ಧಿಸಿ ಮುಂಚೂಣಿಗೆ ಬರು ವಂತಾಗಲು ಇಂತಹ ಕ್ರೀಡಾಕೂಟ ಸಹಕಾರಿ. ಕ್ರೀಡೆಯಲ್ಲಿ ಸಾಧನೆ ಮಾಡಲು ವಿಶೇಷ ತರಬೇತಿ ನೀಡಲಾಗುವುದು ಎಂದರು.
ಕೊರಗ ಸಮುದಾಯದ ಮುಖಂಡ ಗಣೇಶ ಕುಂದಾಪುರ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಕ್ರೀಡಾಕೂಟದೊಂದಿಗೆ ಕೊರಗರ ಸಂಸ್ಕೃತಿ, ಆಚಾರ- ವಿಚಾರವನ್ನು ಬಿಂಬಿಸುವಂತಹ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ನಡೆಸುವಂತಾಗಲಿ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ. ಪಂ. ಅಧ್ಯಕ್ಷ ದಿನಕರ ಬಾಬು, ತಾ. ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಅಥ್ಲೆàಟಿಕ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ದಿನೇಶ್ ಪುತ್ರನ್ ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶೇಖರ್ ಮರವಂತೆ ವಂದಿಸಿದರು. ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ನೇಜಾರಿನಲ್ಲಿ ಅಂತಾರಾಷ್ಟ್ರೀಯ ಈಜುಕೊಳ
ನೇಜಾರಿನಲ್ಲಿ 50×25 ಸುತ್ತಳತೆಯ ಅಂತಾರಾಷ್ಟ್ರೀಯ ಮಟ್ಟದ ಈಜು ಕೊಳ ನಿರ್ಮಿಸಲು ಯೋಜನೆ ಸಿದ್ಧವಾಗಿದ್ದು, 8 ಕೋ. ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ದಿಲ್ಲಿಯಲ್ಲಿರುವಂತಹ ಉತ್ತಮ ಗುಣಮಟ್ಟದ ಲಾನ್ ಟೆನಿಸ್ ಒಳಾಂಗಣ ಕ್ರೀಡಾಂಗಣವನ್ನು ಉಡುಪಿಯಲ್ಲಿ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿದ್ದು, ಆಸ್ಕರ್ ಫೆರ್ನಾಂಡಿಸ್ ಕೋಟಾದಿಂದ 1 ಕೋ. ರೂ., ಅಭಯಚಂದ್ರ ಜೈನ್ ಕ್ರೀಡಾ ಸಚಿವರಿದ್ದಾಗ 1 ಕೋ. ರೂ., ಈಗ 1.5 ಕೋ. ರೂ. ಕಾಯ್ದಿರಿಸಲಾಗಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ