ಸದ್ಗುಣಗಳಿಂದ ನವ ಸಮಾಜ ನಿರ್ಮಾಣ ಸಾಧ್ಯ: ರೈ| ರೆ| ಡಾ| ಬರ್ನಾರ್ಡ್ ಮೋರಸ್
ಅತ್ತೂರು ಬಸಿಲಿಕಾ ವಾರ್ಷಿಕೋತ್ಸವ ಸಂಪನ್ನ
Team Udayavani, Jan 27, 2023, 12:48 AM IST
ಕಾರ್ಕಳ: ಸತ್ಯ ಮತ್ತು ಪ್ರಾಮಾಣಿಕತೆ ಸದಾಕಾಲ ಬಾಳುವ ಸದ್ಗುಣಗಳು. ಅವುಗಳಿಂದಾಗಿ ನವಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ಧರ್ಮಪ್ರಾಂತದ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಬರ್ನಾರ್ಡ್ ಮೋರಸ್ ಹೇಳಿದರು.
ಅವರು ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ಮಹೋತ್ಸ ವದ 5ನೇ ಹಾಗೂ ಕೊನೆಯ ದಿನವಾದ ಗುರುವಾರ ಪ್ರಮುಖ ಬಲಿ ಪೂಜೆಯನ್ನು ಅರ್ಪಿಸಿ ಪ್ರಬೋಧನೆ ನೀಡಿದರು.
ಕೌಟುಂಬಿಕ ಬದುಕಿನಲ್ಲೂ ಸದ್ಗುಣದ ಅಗತ್ಯವಿದೆ ಎಂದರು.
ಜ. 22ರಂದು ಆರಂಭಗೊಂಡ ವಾರ್ಷಿಕ ಮಹೋತ್ಸವವು ಭಕ್ತಿ ಸಂಭ್ರಮ ದೊಂದಿಗೆ ಜ. 26ರಂದು ತೆರೆ ಕಂಡಿತು.
ದಿನದ ಇತರ ಬಲಿಪೂಜೆಗಳನ್ನು ವಂ| ಬೇಸಿಲ್ ವಾಜ್ ಮಡಂತ್ಯಾರು, ವಂ| ಲಾರೆನ್ಸ್ ಡಿ’ಸೋಜಾ ಶಿವಮೊಗ್ಗ, ವಂ| ಕ್ಲಿಫರ್ಡ್ ಪಿಂಟೊ ಬೆಳ್ತಂಗಡಿ, ವಂ| ರೋಬರ್ಟ್ ಕ್ರಾಸ್ತಾ ಗುಲ್ಬರ್ಗ ಮತ್ತು ವಂ| ಜೋಸೆಫ್ ಮಾರ್ಟಿಸ್ ದೇರೆಬೈಲು ನೆರವೇರಿಸಿದರು.
ದಿನದ ಅಂತಿಮ ಬಲಿಪೂಜೆಯನ್ನು ವಂ| ಪಾವ್ಲ್ ರೇಗೊ ಮಿಯ್ನಾರು ನೆರವೇರಿಸುವುದರೊಂದಿಗೆ ಮಹೋತ್ಸವದ ಐದನೇ ಹಾಗೂ ಅಂತಿಮ ದಿನದ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಹೋತ್ಸವದ ಸಂದರ್ಭ ಪ್ರತೀ ದಿನ 7ರಂತೆ ಒಟ್ಟು 35 ಬಲಿಪೂಜೆಗಳು ನೆರವೇರಿದವು.
ಲಕ್ಷಾಂತರ ಭಕ್ತರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಹರಕೆಗಳನ್ನು ಸಲ್ಲಿಸಿದರು. ಉಡುಪಿ, ಮಂಗಳೂರು, ಶಿವಮೊಗ್ಗ ಧರ್ಮಪ್ರಾಂತದ ಧರ್ಮಗುರುಗಳು ಪಾಪ ನಿವೇದನೆಯ ಸಂಸ್ಕಾರದಲ್ಲಿ ಸಹಕರಿಸಿದರು.
ಉಡುಪಿ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಲೋಬೊ ಮಾರ್ಗ ದರ್ಶನದಲ್ಲಿ ಬಸಿಲಿಕಾದ ನಿರ್ದೇಶಕ ವಂ| ಆಲ್ಬನ್ ಡಿ’ಸೋಜಾ ನೇತೃತ್ವದಲ್ಲಿ ಮಹೋತ್ಸವ ಸಾಂಗವಾಗಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು