“ದೇವರ ಧ್ಯಾನಿಸಿದರೆ ಸದ್ಗುಣ ಫಲ’: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ವಾರ್ಷಿಕೋತ್ಸವ
Team Udayavani, Jan 23, 2023, 5:50 AM IST
ಕಾರ್ಕಳ: ದೇವರ ವಾಕ್ಯವನ್ನು ಆಲಿಸಿ, ಅದನ್ನು ಧ್ಯಾನಿಸಿ, ಜೀವನದಲ್ಲಿ ಪಾಲಿಸಿದಾಗ ಸದ್ಗುಣಗಳ ಫಲವನ್ನು ಪಡೆಯಲು ಸಾಧ್ಯ. ಈ ಮುಖಾಂತರ ನಾವೆಲ್ಲರೂ ದೇವರ ಪ್ರೀತಿಯ ಮಕ್ಕಳಾಗುತ್ತೇವೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಹೇಳಿದರು.
ರವಿವಾರ ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ವಿಷಯ ನೀವು ನನಗೆ ಸಾಕ್ಷಿಗಳಾಗುವಿರಿ. ದೇವರ ವಾಕ್ಯದ ಪ್ರಯುಕ್ತ ವಿಶೇಷ ಪ್ರಭೋದನೆ ನೀಡಿ ಅವರು ಮಾತನಾಡಿದರು.
ಪುಣ್ಯಕ್ಷೇತ್ರದ ಪ್ರಧಾನ ಧರ್ಮಗುರು ವಂ| ಅಲ್ಬನ್ ಡಿ’ಸೋಜಾ ಅವರು ಬೆಳಗ್ಗೆ ಸಂತ ಲಾರೆನ್ಸರ ಪವಿತ್ರ ಅವಶೇಷವನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕಾಗಿ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು.
ಶಿವಮೊಗ್ಗ ಧರ್ಮಪ್ರಾಂತದ ಧರ್ಮಗುರು ವಂ| ಸ್ವಾಮಿ ಪಿಯುಸ್ ಡಿ’ಸೋಜಾ ಬಲಿಪೂಜೆ ನೆರವೇರಿಸಿ ಮಕ್ಕಳಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ನೂರಾರು ಹೆತ್ತವರು ತಮ್ಮ ತಮ್ಮ ಪುಟಾಣಿ ಮಕ್ಕಳೊಂದಿಗೆ ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.
ದಿನದ ಇತರ ಬಲಿಪೂಜೆಗಳನ್ನು ವಂ| ಲಿಯೊ ಲಸ್ರಾದೊ, ಮಂಗಳೂರು ವಂ| ರೊಕ್ ಡಿ’ಸೋಜಾ, ಸಂತೆಕಟ್ಟೆ, ವಂ| ಆ್ಯಂಡ್ರೂ ಡಿ’ಸೋಜಾ, ಬಜಾಲ್ ಮತ್ತು ಉಡುಪಿ ಶೋಕಮಾತ ಚರ್ಚಿನ ಪ್ರಧಾನ ಧರ್ಮಗುರು ವಂ| ಚಾರ್ಲ್ಸ್ ಮಿನೇಜಸ್ ಇವರು ನೆರವೇರಿಸಿದರು. ದಿನದ ಏಕೈಕ ಕನ್ನಡ ಬಲಿಪೂಜೆಯನ್ನು ವಂ| ಮ್ಯಾಕ್ಸಿಮ್ ಮಿಸ್ಕಿತ್ ನೆರವೇರಿಸಿದರು.
ಈ ಸಂದರ್ಭ ಬೈಬಲ್ ಪವಿತ್ರ ಗ್ರಂಥದ ವಿವರಣೆಯನ್ನು ಒಳಗೊಂಡ ವಂ| ಡೊ. ರೊಕ್ ಡಿ’ಸೋಜಾರವರ ಚೊಚ್ಚಲ ಪುಸ್ತಕ ಬೈಬಲ್ ಸಳಾವಳ್ ಅನ್ನು ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ಲೋಕಾರ್ಪಣೆಗೊಳಿಸಿದರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮತ್ತು ಇತರ ಗಣ್ಯರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಸಂತ ಲಾರೆನ್ಸರ ಅನುಗ್ರಹವನ್ನು ಪಡೆದರು.
ದಿನದ ಅಂತಿಮ ಬಲಿಪೂಜೆಯನ್ನು ಸಂಜೆ 8 ಗಂಟೆಗೆ ನೆರವೇರಿಸಿ ಮಹೋತ್ಸವದ ಪ್ರಥಮ ದಿನದ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಪನ್ನಗೊಳಿಸಲಾಯಿತು.
ಬಲಿಪೂಜೆಗಳ ಸಮಯ
ಮಹೋತ್ಸವದ ಮುಂದಿನ ನಾಲ್ಕು ದಿನಗಳಲ್ಲಿ (ಸೋಮವಾರದಿಂದ ಗುರುವಾರ) ಬೆಳಗ್ಗೆ 8, 10, 12 ಹಾಗೂ ಮಧ್ಯಾಹ್ನ 2, 4 ಮತ್ತು 6, 8 ಗಂಟೆಗೆ ಬಲಿಪೂಜೆಗಳು ನೆರವೇರಲಿವೆ. ಜ. 23 ಬೆಳಗ್ಗೆ 10ಕ್ಕೆ ಪುತ್ತೂರು ಸೀರೊ ಮಲಂಕರ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೀವರ್ಗಿàಸ್ ಮಾರ್ ಮಕರಿಯೊಸ್ ಕಲಯಿಲ್ ಇವರು ನೆರವೇರಿಸಲಿದ್ದಾರೆ. 22 ರಿಂದ 26 ರವೆರೆಗೆ ಬಲಿಪೂಜೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್