“ಸ್ವತ್ಛತೆ ಅರಿವಿನಿಂದ ಮಲೇರಿಯಾ ನಿಯಂತ್ರಣ’


Team Udayavani, Apr 28, 2017, 12:16 PM IST

2703417ppe1.jpg

ಉಡುಪಿ: ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿರುವುದು ಆರೋಗ್ಯದಾಯಕ ಬೆಳವಣಿಗೆ. ಆದರೂ ಸಂಪೂರ್ಣ ತಡೆಗಟ್ಟುವಲ್ಲಿ ವಿಫ‌ಲವಾಗಿದ್ದೇವೆ. ನಾವು ಸ್ವತ್ಛತೆಯ ಬಗ್ಗೆ ಆಸಕ್ತಿ ವಹಿಸಿದರೆ ಖಂಡಿತ ಈ ರೋಗದ ನಿಯಂತ್ರಣ ಸಾಧ್ಯ. ಗ್ರಾಮೀಣ ಪ್ರದೇಶ, ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ಹೆಚ್ಚಾಗಲಿ ಎಂದು ಜಿ. ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದರು. 

ಅವರು ಗುರುವಾರ ಜಿಲ್ಲಾಡಳಿತ, ಜಿ. ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಸಂಯುಕ್ತಾಶ್ರಯದಲ್ಲಿ ಅಜ್ಜರಕಾಡಿನ ಐಎಂಎ ಭವನದಲ್ಲಿ ನಡೆದ ವಿಶ್ವ ಮಲೇರಿಯಾ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದರು. 

ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ಮಲೇರಿಯಾ ತನ್ನ ಹಿಂದಿನ ಭೀಕರತೆಯನ್ನು ಕಳೆದುಕೊಂಡಿದೆ. ಭಾರತ ತಾಂತ್ರಿಕತೆಯಲ್ಲೂ ಮುಂದುವರಿಯುತ್ತಿದ್ದು, ಅದರಿಂದ ಇಂತಹ ರೋಗಗಳ ನಿರ್ಮೂಲನೆ ಸಾಧ್ಯವಾಗುತ್ತಿದೆ. ಆದರೆ ಮತ್ತೂಂದೆಡೆಯಿಂದ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ. ವೈದ್ಯರು, ಆಸ್ಪತ್ರೆ ಸಿಬಂದಿ ಒಳ್ಳೆಯ ರೀತಿಯಲ್ಲಿ ರೋಗಿಗಳೊಂದಿಗೆ ವರ್ತಿಸಿದರೆ ಶೇ. 25ರಷ್ಟು ರೋಗ ಗುಣವಾದಂತೆ ಎಂದರು.
 
ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ನಾಯ್ಕ ಉಪಸ್ಥಿತರಿದ್ದರು. 

ಒಳಿತಿಗಾಗಿ ಮಲೇರಿಯಾ ಕೊನೆಗೊಳಿಸಿ ಎನ್ನುವ ಘೋಷ ವಾಕ್ಯದಡಿ ಆರಂಭವಾದ ಈ ಜಾಥವನ್ನು ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಉದ್ಘಾಟಿಸಿದರು. ಉಡುಪಿಯ ಮದರ್‌ ಆಫ್ ಸಾರೋ ಚರ್ಚ್‌ ಆವರಣದಿಂದ ಐಎಂಎ ಭವನದವರೆಗೆ ನಡೆದ ಜಾಥದಲ್ಲಿ ಸ. ಕಿ. ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ನ್ಯೂ ಸಿಟಿ ಆಫ್ ನರ್ಸಿಂಗ್‌, ವಿದ್ಯಾರತ್ನ ಆಫ್ ನರ್ಸಿಂಗ್‌, ಚ್ಯವನ ಇನ್‌ಸ್ಟಿಟ್ಯೂಟ್‌ ಆಫ್ ಪ್ಯಾರಾ ಮೆಡಿಕಲ್‌ ಸೈಯನ್ಸ್‌, ಲೋಂಬಾರ್ಡ್‌ ಮೆಮೋರಿಯಲ್‌ ಸ್ಕೂಲ್‌ ಆಫ್ ನರ್ಸಿಂಗ್‌ನ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. 

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರೇಮಾನಂದ ಸ್ವಾಗತಿಸಿದರು. 

“ಮಲೇರಿಯಾ ಪ್ರಕರಣ ಇಳಿಕೆ’
ಕರಾವಳಿ ಪ್ರದೇಶಗಳಾದ ಉಡುಪಿ, ದ.ಕನ್ನಡ ಜಿಲ್ಲೆಗಳಲ್ಲಿ ಮಲೇರಿಯಾ ಪ್ರಕರಣ ಹೆಚ್ಚಿದ್ದು, ಅದರಲ್ಲೂ ಪ್ರಮುಖವಾಗಿ ಉಡುಪಿ ನಗರ, ಮಲ್ಪೆಯಂತಹ ಪ್ರದೇಶಗಳಲ್ಲಿ ಈ ರೋಗದ ಪ್ರಮಾಣ ಮತ್ತಷ್ಟು ಜಾಸ್ತಿಯಿದೆ. ನಿಂತ ನೀರು, ವಲಸೆ ಕಾರ್ಮಿಕರಿಂದ ಈ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ವಾರಕ್ಕೊಮ್ಮೆ ಡ್ರೈ ಡೇ ಎಂದು ಮಾಡಿ ನೀರು ನಿಲ್ಲದಂತೆ ತಡೆಗಟ್ಟಿ. ವಲಸೆ ಕಾರ್ಮಿಕರು ಆರಂಭದಲ್ಲೇ ರಕ್ತ ಪರೀಕ್ಷೆ ನಡೆಸಬೇಕು. ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. 2007 ರಲ್ಲಿ 1293 ಇದ್ದರೆ, 2012ರಲ್ಲಿ ಅ.ತೀ ಹೆಚ್ಚು 2217 ಪ್ರಕರಣ ಕಂಡು ಬಂದರೆ ಆ ಬಳಿಕ ಇಳಿಕೆ ಕಂಡು ಕಳೆದ ವರ್ಷ 1168 ಪ್ರಕರಣವಷ್ಟೇ ಕಂಡು ಬಂದಿದೆ. ಈ ವರ್ಷ 74 ಪ್ರಕರಣವಷ್ಟೇ ಪತ್ತೆಯಾಗಿವೆ. ಕಳೆದ ವರ್ಷ ಮಾರ್ಚ್‌ ವರೆಗೆ 214 ಹಾಗೂ 2015ರಲ್ಲಿ 178 ಪ್ರಕರಣ ಕಂಡು ಬಂದಿತ್ತು ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ| ರೋಹಿಣಿ ಮಾಹಿತಿ ನೀಡಿದರು.
 

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.