ಮಲ್ಲಾರು: ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರ ಸಾವು


Team Udayavani, May 11, 2023, 11:55 PM IST

ಮಲ್ಲಾರು: ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರ ಸಾವು

ಕಾಪು: ಭಾರೀ ಗಾಳಿ ಮಳೆಯ ಪರಿಣಾಮ ಕಾಪು – ಶಿರ್ವ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್‌ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಕಾಪುವಿನಿಂದ ಪಾದೂರಿಗೆ ತೆರಳು ತ್ತಿದ್ದ ರಿಕ್ಷಾದ ಮೇಲೆ ಧೂಪದ ಮರ ಉರುಳಿ ಬಿದ್ದಿದ್ದು ಇಬ್ಬರು ಪ್ರಯಾ ಣಿಕರು ರಿಕ್ಷಾದೊಳಗೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಾದೂರು ಕೂರಾಲು ರೈಸ್‌ಮಿಲ್‌ ಬಳಿಯ ನಿವಾಸಿ ಪುಷ್ಪಾ ಕುಲಾಲ್‌ (45) ಮತ್ತು ಕಳತ್ತೂರು ನಿವಾಸಿ ಕೃಷ್ಣ (48) ಮೃತಪಟ್ಟವರು. ರಿಕ್ಷಾ ಚಾಲಕ ಶರೀಫ್ ಪವಾಡ ಸದೃಶ ರೀತಿಯಲ್ಲಿ ರಿಕ್ಷಾದಿಂದ ಜಿಗಿದು ಪಾರಾಗಿದ್ದಾರೆ.

ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾ ಗಿದ್ದು ಮರವನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು. ಪೊಲೀಸ್‌, ಮೆಸ್ಕಾಂ, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳ ಸಹಿತ ನೂರಾರು ಮಂದಿ ಜಾತಿ ಮತ ಮರೆತು ರಕ್ಷಣ ಕಾರ್ಯದಲ್ಲಿ ತೊಡಗಿದ್ದು ಜೆಸಿಬಿ, ಕ್ರೇನ್‌ ಸಹಾಯದಿಂದ ಒಂದೂವರೆ ಗಂಟೆ ಪರಿಶ್ರಮದ ಬಳಿಕ ಮರವನ್ನು ಬದಿಗೆ ಸರಿಸಲಾಯಿತು. ರಿಕ್ಷಾದೊಳಗೆ ಸಿಲುಕಿದ್ದವರು ಅಷ್ಟರಲ್ಲೇ ಮೃತ ಪಟ್ಟಿದ್ದರು. ಮೃತದೇಹಗಳನ್ನು ಆ್ಯಂಬುಲೆನ್ಸ್‌ ಮೂಲಕ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದು ಜನರನ್ನು ನಿಯಂತ್ರಿಸಲು ಕಾಪು ಎಸ್‌ಐ ಸುಮಾ ಬಿ., ಕ್ರೈಂ ಎಸ್‌ಐ ಭರತೇಶ ಕಂಕಣವಾಡಿ ಸಹಿತ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿ ಪರದಾಡುವಂತಾಯಿತು. ಜನ ಮತ್ತೆ ಮತ್ತೆ ಘಟನ ಸ್ಥಳದಲ್ಲಿ ಜಮಾಯಿಸಿದ ಪರಿಣಾಮ ರಕ್ಷಣ ಕಾರ್ಯಾಚರಣೆ ನಡೆಸಲೂ ತೊಂದರೆಯಾಗಿದ್ದು, ಜನರನ್ನು ನಿಯಂತ್ರಿಸಲು ಸ್ಥಳೀಯರು ಪೊಲೀಸರೊಂದಿಗೆ ಕೈ ಜೋಡಿಸಿದ್ದರು. ರಸ್ತೆ ಸಂಚಾರವೂ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ವಾಹನಗಳಿಗೆ ಬದಲಿ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಯಿತು.

ಮತ್ತೂಂದು ರಿಕ್ಷಾ ಸ್ವಲ್ಪದರಲ್ಲೇ ಪಾರು
ಮರ ಬೀಳುವಾಗ ಮತ್ತೂಂದು ರಿಕ್ಷಾ ಸ್ಪಲ್ಪದರಲ್ಲೇ ಪಾರಾಗಿದ್ದು ಚಾಲಕನ ಸಕಾಲಿಕ ಕ್ರಮದಿಂದ ಎಲ್ಲರೂ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮರ ಬೀಳುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ರಿಕ್ಷಾವನ್ನು ಮುಂದಕ್ಕೆ ಚಲಾಯಿಸಲು ಯತ್ನಿಸಿದಾಗ ರಿಕ್ಷಾ ಮಗುಚಿ ಬಿದ್ದಿತು. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತದೇಹಗಳನ್ನು ಸಾಗಿಸಲು ಕಾಪು ಸರಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್‌ ಜತೆಗೆ ಎಸ್‌ಡಿಪಿಐ ಆ್ಯಂಬ್ಯುಲೆನ್ಸ್‌ ಅನ್ನು ಬಳಸಲಾಯಿತು.

ಪುಷ್ಪಾ ಕುಲಾಲ್‌ ಕಾಪುವಿನಿಂದ ಮನೆಗೆ ತೆರಳುತ್ತಿದ್ದರು. ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮನೆಯಲ್ಲಿ ಶಾಶ್ವತ ಅಂಗೈವಕಲ್ಯದಿಂದ ಬಳಲುತ್ತಿರುವ ಸಹೋದರನೊಬ್ಬನಿದ್ದು ಅವರ ಸಂಪೂರ್ಣ ಆರೈಕೆಯ ಜವಾಬ್ದಾರಿಯನ್ನು ಪುಷ್ಪಾ ಅವರೇ ನಿರ್ವಹಿಸುತ್ತಿದ್ದರು. ತಾಯಿಯಂತೆ ಆರೈಕೆ ಮಾಡುತ್ತಿದ್ದ ಸಹೋದರಿಯನ್ನು ಕಳೆದುಕೊಂಡ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಕೃಷ್ಣ ಮುಖಾರಿ ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.