ಈಗ ಹಾವುಗಳ ಸೀಸನ್‌; ಅವುಗಳ ಭಯ ಬೇಡ!


Team Udayavani, Sep 26, 2018, 1:40 AM IST

snake-600.jpg

ಪಡುಬಿದ್ರಿ: ಕಾರ್ಕಳದ ಬೆಳ್ಮಣ್‌ನ ಮನೆಯೊಂದರಲ್ಲಿ ಇತ್ತೀಚೆಗೆ ಎರಡು ದಿನ ರಾತ್ರಿ ಹೊತ್ತಿನಲ್ಲಿ ಹತ್ತಾರು ವಿಷಯುಕ್ತ ಹಾವುಗಳು ಕಂಡುಬಂದಿದ್ದವು ಇದು ಒಂದೇ ಪ್ರಕರಣವಲ್ಲ, ಇತ್ತೀಚಿನ ದಿನಗಳಲ್ಲಿ ಗ್ರಾಮಗಳಲ್ಲಿ ಹೀಗೆ ಹಾವುಗಳು ಆಗಾಗ್ಗೆ ಕಂಡು ಬರುತ್ತಿವೆ. ಈ ಕಾರಣ ಮನೆಯವರಿಗೆ ಮಕ್ಕಳದ್ದೇ ಭಯ. ಯಾವ ಮುಂಜಾಗ್ರತಾ ಕ್ರಮ ಕೈಗೊಳ್ಳೋಣ ಎಂಬ ಆತಂಕ ಮನೆಯವರಲ್ಲಿ ಸಹಜವಾಗಿ ಕಾಡುತ್ತದೆ. ಇದಕ್ಕೆ ಕಾರಣವಿದೆ.

ಹಾವು ಪ್ರಕೃತಿಯ ಭಾಗ  
‘ಹಾವು’ಗಳು ವಿಷಯುಕ್ತವಾಗಿರಲಿ ಅಥವಾ ಇಲ್ಲದಿರಲಿ ಅವು ನಮ್ಮ ಪ್ರಕೃತಿಯ ಒಂದು ಭಾಗ. ಅವಿಲ್ಲದೇ ನಮ್ಮ ಜೀವನವೂ ಇಲ್ಲ ಎನ್ನುವಂತೆ ಪ್ರಾಕೃತಿಕ ಸಮತೋಲನಕ್ಕಾಗಿ ಸರೀಸೃಪಗಳೂ ಅತ್ಯವಶ್ಯಕವಾಗಿವೆ. ಪರಿಸರದಲ್ಲಿ ಕಂಡುಬರುವ ಎಲ್ಲ ಜೀವಿಗಳೂ ಒಂದಕ್ಕೊಂದು ಹೊಂದಾಣಿಕೆಯಿಂದಲೇ ಜೀವಿಸಬೇಕಾಗಿದೆ.

ಈಗ ಆಹಾರ; ಬಳಿಕ ಸಂತಾನೋತ್ಪತ್ತಿ
ಉರಗ ತಜ್ಞ ಗುರುರಾಜ ಸನಿಲ್‌ ಅವರ ಪ್ರಕಾರ ಈ ಕಾಲದಲ್ಲಿ ಸಹಜವಾಗಿಯೇ ಹಾವುಗಳು ಕಂಡುಬರುತ್ತವೆ. ಇನ್ನು ಒಂದೆರಡು ತಿಂಗಳುಗಳಲ್ಲಿ ಹಾವುಗಳು ಆಹಾರಾನ್ವೇಷಣೆಯಲ್ಲಿ ತೊಡಗುತ್ತವೆ. ಅಕ್ಟೋಬರ್‌ ನವಂಬರ್‌ ತಿಂಗಳುಗಳವರೆಗೆ ಹಾವುಗಳು ಆಹಾರ ಅನ್ವೇಷಣೆಯಲ್ಲಿ ತೊಡಗುತ್ತವೆ. ಕೊಬ್ಬಿನ ಅಂಶವನ್ನು ತಮ್ಮ ದೇಹದಲ್ಲಿ ಸರಿದೂಗಿಸಿಕೊಳ್ಳುವ ಇವುಗಳು ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಯಾವುದೇ ಆಹಾರವನ್ನು ಸೇವಿಸದೇ ಸಂತಾನೋತ್ಪತ್ತಿಯಲ್ಲಿ ತೊಡಗಿರುತ್ತವೆ. ಮುಂದಿನ ಜೂನ್‌ ತಿಂಗಳವರೆಗೂ ಹಾವುಗಳು ನಮ್ಮ ನಡುವೆ ಸುತ್ತಾಡಿಕೊಂಡಿರುತ್ತವೆ ಎನ್ನುವುದು ಅವರ ಅಭಿಪ್ರಾಯ.  

ಮನುಷ್ಯರ ಇರುವಿಕೆ ಗ್ರಹಿಸುತ್ತವೆ 
ಹಾವುಗಳು ತಿರುಗಾಡಿಕೊಂಡಿದ್ದರೂ ಅವುಗಳಿಗೆ ಮನುಷ್ಯರ ಇರುವಿಕೆ ಅರಿಯುವ ಶಕ್ತಿಯಿದೆ. ಹಾಗಾಗಿ ಮಕ್ಕಳು ಒಂದೆಡೆ ಸೇರಿ ಆಟವಾಡಿಕೊಂಡಿದ್ದಾಗ ನಮಗೆ ತಿಳಿದೋ, ತಿಳಿಯದೆಯೋ ಅವು ಮರೆಯಾಗಿ ಬಿಡುತ್ತವೆ. ಅವು ಮಾನವರನ್ನು ಪೀಡಿಸಲು ಬರುವುದಿಲ್ಲ. ಬದಲಾಗಿ ತಮ್ಮಷ್ಟಕ್ಕೇ ತಾವಿರುವ ಜಾಗವನ್ನು ಬದಲಾಯಿಸಿಕೊಳ್ಳುತ್ತವೆ ಎನ್ನುವುದನ್ನು ಗುರುರಾಜ ಸನಿಲ್‌ ತಿಳಿಸುತ್ತಾರೆ.

ತುರ್ತು ಪ್ರಥಮ ಚಿಕಿತ್ಸೆ ಅಗತ್ಯ
ಹಾವುಗಳು ಒಂದು ವೇಳೆ ಕಚ್ಚಿದರೂ ಅದಕ್ಕೆ 3 – 4 ನಿಮಿಷಗಳ ಒಳಗಾಗಿ ಪ್ರಥಮ ಚಿಕಿತ್ಸೆ ಅಗತ್ಯ. ಹಾವು ಕಚ್ಚಿದ ದೇಹದ ಭಾಗದ ಮೇಲ್ಬದಿಯಲ್ಲಿ ‘ಕಟ್ಟು’ಗಳನ್ನು ಹಾಕಿಕೊಂಡು ವಿಷ ದೇಹವನ್ನು ವ್ಯಾಪಿಸದಂತೆ ಮುಂಜಾಗ್ರತೆಯನ್ನು ವಹಿಸಿ ಹಾವು ಕಚ್ಚಿದವರನ್ನು ನಡೆಸದೇ ಎತ್ತಿಕೊಂಡು ಅಥವಾ ವಾಹನಗಳಲ್ಲಿ ಕುಳ್ಳಿರಿಸಿ ತತ್‌‌ ಕ್ಷಣ ಸಮೀಪದ ಪಟ್ಟಣಗಳಲ್ಲಿನ ಆಸ್ಪತ್ರೆಗೆ ಧಾವಿಸಬೇಕಿದೆ. ದೇಶದ ಎಲ್ಲಾ ಅಲೋಪತಿಕ್‌ ಆಸ್ಪತ್ರೆಗಳಲ್ಲಿ ನಾಗರಹಾವು, ಕನ್ನಡಿ ಹಾವು, ಕಡಂಬಳ ಮತ್ತು ಮೃದು ಚರ್ಮದ ವೈಪರ್‌ಗಳಂತಹ ವಿಷಯುಕ್ತ ಹಾವುಗಳಿಗೆ ಶಮನಕಾರಿ ಔಷಧಗಳು ಸದಾ ಲಭ್ಯವಿರುತ್ತವೆ.  

— ಆರಾಮ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.