“ಗ್ರಂಥಾಲಯ ಸಪ್ತಾಹದಿಂದ ಸಾರ್ವಜನಿಕರಲ್ಲಿ ಜಾಗೃತಿ’
ಡಿಜಿಟಲ್ ಗ್ರಂಥಾಲಯಗಳ ಮಹತ್ವ -ಮಾಹಿತಿ ಕಾರ್ಯಕ್ರಮ
Team Udayavani, Nov 17, 2019, 5:43 AM IST
ಉಡುಪಿ: ಭಾರತದ ಗ್ರಂಥಾಲಯ ಪರಂಪರೆಯಲ್ಲಿ ಋಷಿ -ಮುನಿಗಳ ಪಾತ್ರ ಮುನಿಗಳ ಪಾತ್ರ ಬಹಳ ಮಹತ್ವದಾಗಿದ್ದುದರಿಂದ ಇದು ಜ್ಞಾನ ಸಂಪನ್ನವಾದ ದೇಶವಾಗಿದೆ. ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯಗಳ ಬಗ್ಗೆ ಮಾಹಿತಿ ನೀಡುವ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಿಂದ ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಲಿದೆ ಎಂದು ಜಿ.ಪಂ. ಅಧ್ಯಕ್ಷ ದಿನಕರ್ ಬಾಬು ಹೇಳಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಶನಿವಾರ ಜರಗಿದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಡಿಜಿಟಲ್ ಗ್ರಂಥಾಲಯಗಳ ಮಹತ್ವ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಂಥಾಲಯ ಪಿತಾಮಹ ಎಸ್.ಆರ್.ರಂಗನಾಥನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಶಾಸಕ ರಘುಪತಿ ಭಟ್, ಗ್ರಂಥಾಲಯಗಳು ನಿರ್ಲಕ್ಷ್ಯ ಮಾಡಲ್ಪಟ್ಟಂತಹ ವಿಭಾಗಗಳಾಗಿವೆ. ವಾಸ್ತವವಾಗಿ ಗ್ರಂಥಾಲಯಗಳಿಗೆ ಪ್ರಥಮ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಗ್ರಂಥಾಲಯಗಳ ಡಿಜಿಟಲೀಕರಣ, ಹೊಸ ಗ್ರಂಥಾಲಯ ಕಟ್ಟಡ ನಿರ್ಮಾಣದಂತಹ ಕೆಲಸಗಳು ನಡೆಯುತ್ತಿರುವುದು ಸಂತೋಷದ ವಿಚಾರ. ಚಿಕ್ಕಂದಿನಿಂದಲೇ ಮಕ್ಕಳಲ್ಲಿ ಒಳ್ಳೆಯ ಕಥೆ-ಕಾದಂಬರಿಗಳನ್ನು ಓದುವ ಪ್ರವೃತ್ತಿಯನ್ನು ಮನೆಯ ಹಿರಿಯರು ಬೆಳೆಸಬೇಕು ಎಂದು ಹೇಳಿದರು.
ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಉಡುಪಿ ಜಿಲ್ಲಾ ಘಟಕದ ಕ.ಸಾ.ಪ. ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉಪಸ್ಥಿತರಿದ್ದರು.
ಎಂ.ಜಿ.ಎಂ. ಕಾಲೇಜಿನ ಪ್ರಾಧ್ಯಾಪಕ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಡಿಜಿಟಲ್ ಗ್ರಂಥಾಲಯಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.
ಗ್ರಂಥಾಲಯ ಇಲಾಖೆಯ ನಿವೃತ್ತ ಸಿಬಂದಿ ಮಹಾಬಲ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.
ಪೂರ್ಣಪ್ರಜ್ಞ ಕಾಲೇಜಿನ ಪ್ರಾಧ್ಯಾಪಕಿ ಸೌಜನ್ಯಾ ನಿರೂಪಿಸಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿದರು. ಶಕುಂತಳಾ ಕುಂದರ್ ವಂದಿಸಿದರು.
ಗ್ರಂಥಾಲಯದಲ್ಲಿ ಸಮಯ ಹೂಡಿಕೆ ಮಾಡಿ
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಹೆಚ್ಚಿನ ಪ್ರಮಾಣದ ಓದುಗರಿಲ್ಲದೆ ಗ್ರಂಥಾಲಯಗಳು ಇಂದು ಸ್ಮಾರಕಗಳಾಗುತ್ತಿವೆ. ಗ್ರಂಥಾಲಯಗಳು ಸ್ಮಾರಕಗಳ ಪಟ್ಟಿಗೆ ಸೇರಿದರೆ ಸಮಾಜದ ನೈತಿಕ ಅಧಃಪತನವಾಗುವುದು ಖಂಡಿತ. ವಿದ್ಯಾರ್ಥಿಗಳು ದಿನಪತ್ರಿಕೆ, ಮ್ಯಾಗಜೀನ್ ಮತ್ತು ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಸಮಯವನ್ನು ವ್ಯರ್ಥ ಮಾಡುವ ಬದಲು ಗ್ರಂಥಾಲಯಗಳಿಗೆ ತೆರಳಿ ಹೆಚ್ಚು ಸಮಯವನ್ನು ಹೂಡಿಕೆ ಮಾಡಿದಲ್ಲಿ ಜೀವನದಲ್ಲಿ ಸಾಧನೆ ಮಾಡಿ ಯಶಸ್ಸು ಕಂಡುಕೊಳ್ಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್