ಉಡುಪಿ ಜಿಲ್ಲಾ ಪೊಲೀಸರಿಂದ ಜಾಗೃತಿ ಕಾರ್ಯ


Team Udayavani, Nov 14, 2021, 3:50 AM IST

ಉಡುಪಿ ಜಿಲ್ಲಾ ಪೊಲೀಸರಿಂದ ಜಾಗೃತಿ ಕಾರ್ಯ

ಉಡುಪಿ: ಇತ್ತೀಚೆಗೆ ಕರಾವಳಿ ಭಾಗದಲ್ಲಿ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಉಡುಪಿ ಜಿಲ್ಲಾ ಪೊಲೀಸರು ಜಿಲ್ಲಾದ್ಯಂತ ಜಾಗೃತಿ ಕಾರ್ಯ ನಡೆಸುತ್ತಿದ್ದಾರೆ. ಮನೆಕಳ್ಳತನ, ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್‌ ಕಳವು ಸಹಿತ ಲಾಕ್‌ಡೌನ್‌ ಅನಂತರ ಜಿಲ್ಲೆಯಲ್ಲಿ ಹಲವು  ರೀತಿಯ ಕಳ್ಳತನ ಪ್ರಕರಣ ಈಗಾಗಲೇ ವರದಿಯಾಗಿದೆ. ಇದನ್ನು ಮಟ್ಟಹಾಕಲು ಪೊಲೀಸ್‌ ಇಲಾಖೆ ಮುಂದಾಗಿದ್ದು, ನಗರ ಸಹಿತ ಗ್ರಾಮೀಣ ಭಾಗದ ಪ್ರಮುಖ ಸ್ಥಳಗಳಲ್ಲಿ ಈ ಬಗ್ಗೆ ನಿರಂತರ ಜಾಗೃತಿ ಕಾರ್ಯ ನಡೆಸುತ್ತಿದ್ದಾರೆ.

ಅನ್ಯ ಜಿಲ್ಲೆ, ರಾಜ್ಯದವರ ಕೈವಾಡ:

ಕಳವು ಪ್ರಕರಣಗಳ ಆರೋಪಿಗಳ ಪೈಕಿ ಹೆಚ್ಚಿನ ಮಂದಿ ಅನ್ಯ ಜಿಲ್ಲೆ, ರಾಜ್ಯದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹಗಲು ಹೊತ್ತಿನಲ್ಲಿ ಸುತ್ತಾಡುವ ಈ ತಂಡ ಮನೆಗೆ ಚಿಲಕ ಹಾಕಿರುವುದು ಸಹಿತ ನಿರ್ಜನ ಪ್ರದೇಶಗಳನ್ನು ಗುರುತಿಸಿಕೊಂಡು ತಡರಾತ್ರಿ ವೇಳೆ ಕಾರ್ಯಾಚರಣೆಗಿಳಿಯುತ್ತಾರೆ.

ಪೊಲೀಸರಿಂದ ಜಾಗೃತಿ:

ಜಿಲ್ಲಾದ್ಯಂತ ಪೊಲೀಸರು ಗಸ್ತು ವಾಹನದ ಮೂಲಕ ಧ್ವನಿವರ್ಧಕ ಬಳಸಿ ಕರಪತ್ರದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳು:

  • ಮನೆ ಮುಖ್ಯ ಗೇಟ್‌ಗೆ ಕಾಣುವಂತಹ ದೊಡ್ಡ ದೊಡ್ಡ ಬೀಗ ಹಾಕಬೇಡಿ. ಮನೆಯ ಬಾಗಿಲಿಗೆ ಸೆಂಟ್ರಲ್‌ ಲಾಕ್‌ ಅಳವಡಿಸಿ.
  • ಮನೆಯಲ್ಲಿ ರಾತ್ರಿ ವೇಳೆ ಯಾವುದಾದರೂ ಒಂದು ಲೈಟ್‌ ಆನ್‌ ಇರುವಂತೆ ಗಮನಹರಿಸಿ.
  • ಮನೆಯಿಂದ ಹೊರಗಡೆ ಹೋಗುವಾಗ ಹಣ, ಬಂಗಾರದ ಆಭರಣಗಳನ್ನು ಮನೆಯಲ್ಲಿ ಬಿಟ್ಟು ಹೋಗದೇ ನಂಬಿಕಸ್ತ ಸ್ನೇಹಿತರು /ಸಂಬಂಧಿಕರ ಮನೆಯಲ್ಲಿ ಕೊಟ್ಟು ಹೋಗಿ ಅಥವಾ ಬ್ಯಾಂಕ್‌ ಲಾಕರ್‌ನಲ್ಲಿಡುವುದು ಉತ್ತಮ.
  • ಮನೆಗೆ ಸೂಕ್ತ ಸಿಸಿಟಿವಿ ಅಳವಡಿಸಿ, ಬೆಳಕಿನ ವ್ಯವಸ್ಥೆ ಮಾಡಿ.
  • ಮನೆಯ ಸುತ್ತುಮುತ್ತ ಯಾವುದೇ ಅಪರಿಚಿತ ವಾಹನ, ವ್ಯಕ್ತಿ ಕಂಡು ಬಂದರೆ ಕೂಡಲೇ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ.

ನಗರದಲ್ಲಿಲ್ಲ  ಸಿಸಿ ಕೆಮರಾ :

ಉಡುಪಿ ನಗರ ಪ್ರದೇಶದಲ್ಲಿ ಇಲಾಖೆಯ ವತಿಯಿಂದ ಎಲ್ಲಿ ಕೂಡ ಸಿಸಿಟಿವಿ ಅಳ ವಡಿಕೆಯಾಗಿಲ್ಲ. ಈ ಹಿಂದೆ ಅಳವಡಿಕೆ ಯಾಗಿತ್ತಾದರೂ ಅನಂತರ ಅದನ್ನು ತೆರವು ಮಾಡಲಾಗಿತ್ತು. ಈಗ ಯಾವ ಪ್ರದೇಶದಲ್ಲಿ ಕಳ್ಳತನ ನಡೆದರೂ ಪೊಲೀಸರು ಅಂಗಡಿ, ಮುಂಗಟ್ಟುಗಳು, ವ್ಯಾಪಾರ ಮಳಿಗೆಯವರು ಅಳವಡಿಕೆ ಮಾಡಿರುವ ಸಿಸಿ ಟಿವಿಗಳನ್ನೇ ಪರಿಶೀಲಿಸಬೇಕಿರುವ ಅನಿವಾರ್ಯತೆ ಎದುರಾಗಿದೆ.

ಅಪರಾಧ ಸಹಿತ ಕಳ್ಳತನ ಪ್ರಕರಣ ತಡೆಗಟ್ಟುವ ಉದ್ದೇಶದಿಂದ ಉಡುಪಿ ಜಿಲ್ಲೆಯಾದ್ಯಂತ ಪೊಲೀಸರು ಜಾಗೃತಿ ನಡೆಸುತ್ತಿದ್ದಾರೆ. ಅನುಮಾನಾಸ್ಪದ  ವಾಹನಗಳು, ವ್ಯಕ್ತಿಗಳು ಕಂಡುಬಂದರೆ ಸಮೀಪದ ಠಾಣೆಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ.-ಕುಮಾರಚಂದ್ರ,  ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

 

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.